<p><strong>ಮೈಸೂರು</strong>: ‘ಜಿಲ್ಲೆಯಲ್ಲಿ ಜೇನು ಕುರುಬ ವಿಶೇಷ ಕರ್ತವ್ಯಾಧಿಕಾರಿಗಳ ಕಚೇರಿ ಪುನರಾರಂಭಿಸಿ, ಸಮುದಾಯಕ್ಕೆ ಸೂಕ್ತ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಜೇನು ಕುರುಬ ಅಭಿವೃದ್ಧಿ ಸಂಘ ಸರ್ಕಾರವನ್ನು ಒತ್ತಾಯಿಸಿದೆ.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಜೆ.ಟಿ.ರಾಜಪ್ಪ, ‘2006ರಲ್ಲಿ ಹುಣಸೂರು ತಾಲ್ಲೂಕಿನಲ್ಲಿ ಇದ್ದ ಜೇನು ಕುರುಬರ ಕಚೇರಿಯನ್ನು ಸ್ಥಗಿತಗೊಳಿಸಲಾಗಿದೆ. ಸಮುದಾಯಕ್ಕೆ ನೀಡುವ ಪೌಷ್ಟಿಕ ಆಹಾರವೂ ಕಳೆದ ಮೂರು ತಿಂಗಳಿಂದ ವಿತರಿಸಿಲ್ಲ’ ಎಂದು ಆರೋಪಿಸಿದರು.</p>.<p>‘ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ಪರಿಶಿಷ್ಟ ವರ್ಗಗಳ ಸಮಗ್ರ ಯೋಜನೆ ವಿಭಾಗವು ಸಮುದಾಯದ ಮುಖಂಡರ ಸಮಸ್ಯೆ ಆಲಿಸಲು ಪ್ರಯತ್ನಿಸಿಲ್ಲ. ಯೋಜನೆ ಅಧಿಕಾರಿ ಮುನಿರಾಜು ಅವರು ಸಮುದಾಯದ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ತೋರುತ್ತಿದ್ದು, ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹೀಗೆಯೇ ಮುಂದುವರಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಬಸವಣ್ಣ, ಕಾರ್ಯದರ್ಶಿ ಜೆ.ಟಿ.ಚಂದ್ರು, ಸದಸ್ಯರಾದ ಜಯಪ್ಪ, ರವಿ, ಸಿದ್ದು, ಮಾಸ್ತಿ, ತಿಮ್ಮಯ್ಯ, ಲಿಂಗಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜಿಲ್ಲೆಯಲ್ಲಿ ಜೇನು ಕುರುಬ ವಿಶೇಷ ಕರ್ತವ್ಯಾಧಿಕಾರಿಗಳ ಕಚೇರಿ ಪುನರಾರಂಭಿಸಿ, ಸಮುದಾಯಕ್ಕೆ ಸೂಕ್ತ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಜೇನು ಕುರುಬ ಅಭಿವೃದ್ಧಿ ಸಂಘ ಸರ್ಕಾರವನ್ನು ಒತ್ತಾಯಿಸಿದೆ.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಜೆ.ಟಿ.ರಾಜಪ್ಪ, ‘2006ರಲ್ಲಿ ಹುಣಸೂರು ತಾಲ್ಲೂಕಿನಲ್ಲಿ ಇದ್ದ ಜೇನು ಕುರುಬರ ಕಚೇರಿಯನ್ನು ಸ್ಥಗಿತಗೊಳಿಸಲಾಗಿದೆ. ಸಮುದಾಯಕ್ಕೆ ನೀಡುವ ಪೌಷ್ಟಿಕ ಆಹಾರವೂ ಕಳೆದ ಮೂರು ತಿಂಗಳಿಂದ ವಿತರಿಸಿಲ್ಲ’ ಎಂದು ಆರೋಪಿಸಿದರು.</p>.<p>‘ಕಳೆದ ಎರಡು ವರ್ಷಗಳಿಂದ ಜಿಲ್ಲೆಯ ಪರಿಶಿಷ್ಟ ವರ್ಗಗಳ ಸಮಗ್ರ ಯೋಜನೆ ವಿಭಾಗವು ಸಮುದಾಯದ ಮುಖಂಡರ ಸಮಸ್ಯೆ ಆಲಿಸಲು ಪ್ರಯತ್ನಿಸಿಲ್ಲ. ಯೋಜನೆ ಅಧಿಕಾರಿ ಮುನಿರಾಜು ಅವರು ಸಮುದಾಯದ ಸಮಸ್ಯೆಗಳ ಬಗ್ಗೆ ನಿರ್ಲಕ್ಷ ತೋರುತ್ತಿದ್ದು, ಈ ಬಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹೀಗೆಯೇ ಮುಂದುವರಿದರೆ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಬಸವಣ್ಣ, ಕಾರ್ಯದರ್ಶಿ ಜೆ.ಟಿ.ಚಂದ್ರು, ಸದಸ್ಯರಾದ ಜಯಪ್ಪ, ರವಿ, ಸಿದ್ದು, ಮಾಸ್ತಿ, ತಿಮ್ಮಯ್ಯ, ಲಿಂಗಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>