<p><strong>ಮೈಸೂರು:</strong> ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಭೋವಿ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.</p>.<p>ಮಹದೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಪ್ರತಿಭಟನಕಾರರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು.</p>.<p>ಸಮಿತಿಯ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ‘ಸದಾಶಿವ ಆಯೋಗದ ವರದಿಯ ಶಿಫಾರಸಿನಂತೆ 101 ಉಪಜಾತಿಗಳಲ್ಲಿ 99 ಉಪಜಾತಿ ಜನರಿಗೆ ಅನ್ಯಾಯವಾಗಲಿದೆ. ಶೇ 15ರಷ್ಟು ಮೀಸಲಾತಿಯಲ್ಲಿ ಎಡಗೈಯವರಿಗೆ ಶೇ 6 ಹಾಗೂ ಬಲಗೈಯವರಿಗೆ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಉಳಿದ ಶೇ 4ರಲ್ಲಿ 99 ಉಪಜಾತಿಗಳನ್ನು ಸೇರಿಸಿರುವುದು ವಿಷಾದನೀಯ’ ಎಂದು ಆರೋಪಿಸಿದರು.</p>.<p>‘ವಸ್ತುಸ್ಥಿತಿಯ ಅಧ್ಯಯನ ನಡೆಸದೇ ವರದಿ ಸಿದ್ಧಪಡಿಸಲಾಗಿದೆ. ಸಂವಿಧಾನವು ಶೋಷಿತ ಸಮುದಾಯಕ್ಕೆ ನೀಡಿರುವ ಸೌಲಭ್ಯಗಳನ್ನು ಕೆಲ ಬಲಾಢ್ಯ ಸಮುದಾಯಗಳು ಕಬಳಿಸಿವೆ. ಇದರಿಂದ ಅಲ್ಪಸಂಖ್ಯಾತ ಶೋಷಿತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಸ್ಸಿ ಸಮುದಾಯದ ಮೀಸಲಾತಿಯಿಂದ ಭೋವಿ, ಬಂಜಾರ, ಕೊರಚ ಸೇರಿದಂತೆ 51 ಜಾತಿಗಳನ್ನು ಕೈ ಬಿಡುವಂತೆ ಸದಾಶಿವ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಆ ವರದಿಯನ್ನು ಜಾರಿಗೊಳಿಸದೆ ತಿರಸ್ಕರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಲೋಕೇಶ್, ಸಹ ಕಾರ್ಯದರ್ಶಿ ಕೆ.ಮೋಹನ್ ಕುಮಾರ್, ವಿ.ನಾಗರಾಜು, ಆರ್.ಮಂಜುನಾಥ್, ಕೆ.ಹನುಮಂತು, ಪ್ರಮೀಳಾ ರಾಮಚಂದ್ರ, ಸುಗುಣ ಜಿ.ಗೋಪಾಲ್, ರಾಧಾ ಎಚ್. ಹನುಮಂತ, ಜಿ.ರಾಜಶೇಖರ್, ವಿ.ಶ್ರೀನಿವಾಸ, ಆರ್.ಮೋಹನ್ ಕುಮಾರ್, ಕೆ. ಮಂಜುನಾಥ್, ಎಸ್.ನಾಗೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸದಾಶಿವ ಆಯೋಗದ ವರದಿ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ರಾಜ್ಯ ಭೋವಿ ಸಂಘರ್ಷ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟಿಸಿದರು.</p>.<p>ಮಹದೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಪ್ರತಿಭಟನಕಾರರು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು.</p>.<p>ಸಮಿತಿಯ ಉಪಾಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, ‘ಸದಾಶಿವ ಆಯೋಗದ ವರದಿಯ ಶಿಫಾರಸಿನಂತೆ 101 ಉಪಜಾತಿಗಳಲ್ಲಿ 99 ಉಪಜಾತಿ ಜನರಿಗೆ ಅನ್ಯಾಯವಾಗಲಿದೆ. ಶೇ 15ರಷ್ಟು ಮೀಸಲಾತಿಯಲ್ಲಿ ಎಡಗೈಯವರಿಗೆ ಶೇ 6 ಹಾಗೂ ಬಲಗೈಯವರಿಗೆ ಶೇ 5ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಉಳಿದ ಶೇ 4ರಲ್ಲಿ 99 ಉಪಜಾತಿಗಳನ್ನು ಸೇರಿಸಿರುವುದು ವಿಷಾದನೀಯ’ ಎಂದು ಆರೋಪಿಸಿದರು.</p>.<p>‘ವಸ್ತುಸ್ಥಿತಿಯ ಅಧ್ಯಯನ ನಡೆಸದೇ ವರದಿ ಸಿದ್ಧಪಡಿಸಲಾಗಿದೆ. ಸಂವಿಧಾನವು ಶೋಷಿತ ಸಮುದಾಯಕ್ಕೆ ನೀಡಿರುವ ಸೌಲಭ್ಯಗಳನ್ನು ಕೆಲ ಬಲಾಢ್ಯ ಸಮುದಾಯಗಳು ಕಬಳಿಸಿವೆ. ಇದರಿಂದ ಅಲ್ಪಸಂಖ್ಯಾತ ಶೋಷಿತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಎಸ್ಸಿ ಸಮುದಾಯದ ಮೀಸಲಾತಿಯಿಂದ ಭೋವಿ, ಬಂಜಾರ, ಕೊರಚ ಸೇರಿದಂತೆ 51 ಜಾತಿಗಳನ್ನು ಕೈ ಬಿಡುವಂತೆ ಸದಾಶಿವ ಆಯೋಗದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಆ ವರದಿಯನ್ನು ಜಾರಿಗೊಳಿಸದೆ ತಿರಸ್ಕರಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ಲೋಕೇಶ್, ಸಹ ಕಾರ್ಯದರ್ಶಿ ಕೆ.ಮೋಹನ್ ಕುಮಾರ್, ವಿ.ನಾಗರಾಜು, ಆರ್.ಮಂಜುನಾಥ್, ಕೆ.ಹನುಮಂತು, ಪ್ರಮೀಳಾ ರಾಮಚಂದ್ರ, ಸುಗುಣ ಜಿ.ಗೋಪಾಲ್, ರಾಧಾ ಎಚ್. ಹನುಮಂತ, ಜಿ.ರಾಜಶೇಖರ್, ವಿ.ಶ್ರೀನಿವಾಸ, ಆರ್.ಮೋಹನ್ ಕುಮಾರ್, ಕೆ. ಮಂಜುನಾಥ್, ಎಸ್.ನಾಗೇಂದ್ರ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>