<p>ಮೈಸೂರು: ‘ಹಿಂದುಳಿದ, ಅಸಂಘಟಿತ ಸಮುದಾಯಗಳ ಹಿತಾಸಕ್ತಿಯನ್ನು ಕಾಂಗ್ರೆಸ್ ಕಡೆಗಣಿಸಿದೆ. ಸಿದ್ದರಾಮಯ್ಯ ನಿಜವಾಗಿ ಚೊಂಬು ಕೊಟ್ಟಿರುವುದು ಈ ಸಮುದಾಯಗಳಿಗೆ’ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ಆರ್. ರಘು ಕೌಟಿಲ್ಯ ಟೀಕಿಸಿದರು.</p>.<p>‘ಬಿಜೆಪಿ ಸರ್ಕಾರವು ಹಿಂದುಳಿದ ವರ್ಗಗಳ ನಿಗಮಗಳಿಗೆ ಹಿಂದಿನ ಅವಧಿಯಲ್ಲಿ ₹500 ಕೋಟಿ ಅನುದಾನ ಕೊಟ್ಟಿತ್ತು. ಸಿದ್ದರಾಮಯ್ಯ ಸರ್ಕಾರ ಮೊದಲ ಬಜೆಟ್ನಲ್ಲಿ ಅದನ್ನು ₹170 ಕೋಟಿಗೆ ಇಳಿಸಿತ್ತು. ಈ ವರ್ಷ ಈ ನಿಗಮಗಳಿಗೆ ಸರ್ಕಾರ ಬಿಡಿಗಾಸು ಅನುದಾನ ಬಿಡುಗಡೆ ಮಾಡಿಲ್ಲ. ಈ ವರ್ಗದ ಜನರ ಹಣವನ್ನೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಸಾವಿರದಿಂದ 1 ಲಕ್ಷ ಹಿಂದುಳಿದ ವರ್ಗಗಳ ಮತದಾರರಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಮತ ಚಲಾಯಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead">ಇಂದು ಸಮಾವೇಶ: ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶವು ಏ.21ರಂದು ಬೆಳಿಗ್ಗೆ 11ಕ್ಕೆ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ನಡೆಯಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಪಕ್ಷದ ಮುಖಂಡರಾದ ಬಾಬು ಪತ್ತಾರ, ಚನ್ನಕೇಶವ, ಚಲುವರಾಜ್, ರಂಗಾಚಾರ್, ರಶ್ಮಿ, ಜಗದೀಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಹಿಂದುಳಿದ, ಅಸಂಘಟಿತ ಸಮುದಾಯಗಳ ಹಿತಾಸಕ್ತಿಯನ್ನು ಕಾಂಗ್ರೆಸ್ ಕಡೆಗಣಿಸಿದೆ. ಸಿದ್ದರಾಮಯ್ಯ ನಿಜವಾಗಿ ಚೊಂಬು ಕೊಟ್ಟಿರುವುದು ಈ ಸಮುದಾಯಗಳಿಗೆ’ ಎಂದು ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಅಧ್ಯಕ್ಷ ಆರ್. ರಘು ಕೌಟಿಲ್ಯ ಟೀಕಿಸಿದರು.</p>.<p>‘ಬಿಜೆಪಿ ಸರ್ಕಾರವು ಹಿಂದುಳಿದ ವರ್ಗಗಳ ನಿಗಮಗಳಿಗೆ ಹಿಂದಿನ ಅವಧಿಯಲ್ಲಿ ₹500 ಕೋಟಿ ಅನುದಾನ ಕೊಟ್ಟಿತ್ತು. ಸಿದ್ದರಾಮಯ್ಯ ಸರ್ಕಾರ ಮೊದಲ ಬಜೆಟ್ನಲ್ಲಿ ಅದನ್ನು ₹170 ಕೋಟಿಗೆ ಇಳಿಸಿತ್ತು. ಈ ವರ್ಷ ಈ ನಿಗಮಗಳಿಗೆ ಸರ್ಕಾರ ಬಿಡಿಗಾಸು ಅನುದಾನ ಬಿಡುಗಡೆ ಮಾಡಿಲ್ಲ. ಈ ವರ್ಗದ ಜನರ ಹಣವನ್ನೂ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗಿದೆ’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಸಾವಿರದಿಂದ 1 ಲಕ್ಷ ಹಿಂದುಳಿದ ವರ್ಗಗಳ ಮತದಾರರಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಮತ ಚಲಾಯಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p class="Subhead">ಇಂದು ಸಮಾವೇಶ: ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶವು ಏ.21ರಂದು ಬೆಳಿಗ್ಗೆ 11ಕ್ಕೆ ವಸ್ತು ಪ್ರದರ್ಶನ ಮೈದಾನದ ಆವರಣದಲ್ಲಿ ನಡೆಯಲಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪಾಲ್ಗೊಳ್ಳಲಿದ್ದಾರೆ’ ಎಂದರು.</p>.<p>ಪಕ್ಷದ ಮುಖಂಡರಾದ ಬಾಬು ಪತ್ತಾರ, ಚನ್ನಕೇಶವ, ಚಲುವರಾಜ್, ರಂಗಾಚಾರ್, ರಶ್ಮಿ, ಜಗದೀಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>