<p><strong>ಮೈಸೂರು</strong>: ‘ಭ್ರಷ್ಟಾಚಾರದ ಕಳಂಕ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಅನೇಕ ಬಗೆಯ ಕಾರ್ಯ ಯೋಜನೆಗಳನ್ನು ಹಾಕಿಕೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರೆ, ನಟಿ ಮಾಳವಿಕಾ ಅವಿನಾಶ್ ತಿಳಿಸಿದರು.</p>.<p>ನಗರದ ನೇರಂಬಳ್ಳಿ ಸಾವಿತ್ರಮ್ಮ ಸುಬ್ಬರಾವ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಮಹಾನಗರ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗುವುದು. ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವವರೆಗೂ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ’ ಎಂದು ಹೇಳಿದರು.</p>.<p>‘ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ ಖಜಾನೆ ಖಾಲಿ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಾಗಿ ಪರಿಶಿಷ್ಟರ ಹಣವನ್ನೂ ಬಳಸಿಕೊಂಡು ದ್ರೋಹವೆಸಗಿದ್ದಾರೆ. ಅಹಿಂದ ಹೆಸರೇಳಿ ಅಧಿಕಾರಕ್ಕೆ ಬಂದವರು ಆ ಸಮುದಾಯಗಳನ್ನು ವಂಚಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಮುಡಾ ಹಗರಣ ದೇಶದಾದ್ಯಂತ ಸುದ್ದಿಯಾಗಿದೆ. ಸಿಎಂ ತವರಲ್ಲೇ ದೊಡ್ಡ ಹಗರಣ ಬಯಲಾಗಿದೆ’ ಎಂದು ದೂರಿದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ‘ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಿದ್ದರೆ ₹ 5ಸಾವಿರ ಕೋಟಿ ರಾಜ್ಯದ ಖಜಾನೆ ಸೇರುತ್ತಿತ್ತು. ಆದರೆ, ಸೂಕ್ತವಾಗಿ ತನಿಖೆ ನಡೆಸದೆ ಹಗರಣವನ್ನು ಒಪ್ಪಿಕೊಂಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪಕ್ಷದ ಕಾರ್ಯಕರ್ತರು ವ್ಯಕ್ತಿ ಪೂಜೆ ಮಾಡಬಾರದು. ಗುಂಪುಗಾರಿಕೆಗಳಿಗೆ ತಲೆ ಹಾಕಬೇಡು. ಪಕ್ಷದಿಂದ ತೊಂದರೆ ಆಗಿದ್ದರೆ ನೇರವಾಗಿ ಪಕ್ಷದ ನಾಯಕರನ್ನು ಭೇಟಿಯಾಗಿ ಬಗೆಹರಿಸಿಕೊಳ್ಳಬೇಕು’ ಎಂದರು.</p>.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡಿರುವ ಸಿ.ಎಚ್. ವಿಜಯಶಂಕರ್ ಅವರನ್ನು ಅಭಿನಂದಿಸಲಾಯಿತು.</p>.<p>ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಮಾತನಾಡಿದರು. ಶಾಸಕ ಟಿ.ಎಸ್. ಶ್ರೀವತ್ಸ, ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಡಾ.ಅನಿಲ್ ಥಾಮಸ್, ವಿಭಾಗೀಯ ಪ್ರಭಾರಿ ಮೈ.ವಿ. ರವಿಶಂಕರ್, ಮುಖಂಡರಾದ ಅಪ್ಪಣ್ಣ, ಶಿವಕುಮಾರ್, ಸಂದೇಶ್ ಸ್ವಾಮಿ, ಮಂಜುನಾಥ್, ಗೋಪಾಲ್ ರಾವ್ ಪಾಲ್ಗೊಂಡಿದ್ದರು.</p>.<div><blockquote>ಮುಂಬರುವ ನಗರಪಾಲಿಕೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಶ್ರಮಿಸಬೇಕು. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದರೆ ಉತ್ತಮ ಅವಕಾಶಗಳು ಸಿಗುತ್ತವೆ </blockquote><span class="attribution">ಎಲ್. ನಾಗೇಂದ್ರ ಅಧ್ಯಕ್ಷ ಬಿಜೆಪಿ ನಗರ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಭ್ರಷ್ಟಾಚಾರದ ಕಳಂಕ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಅನೇಕ ಬಗೆಯ ಕಾರ್ಯ ಯೋಜನೆಗಳನ್ನು ಹಾಕಿಕೊಂಡಿದೆ’ ಎಂದು ಬಿಜೆಪಿ ರಾಜ್ಯ ಘಟಕದ ವಕ್ತಾರೆ, ನಟಿ ಮಾಳವಿಕಾ ಅವಿನಾಶ್ ತಿಳಿಸಿದರು.</p>.<p>ನಗರದ ನೇರಂಬಳ್ಳಿ ಸಾವಿತ್ರಮ್ಮ ಸುಬ್ಬರಾವ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಬಿಜೆಪಿ ಮಹಾನಗರ ವಿಶೇಷ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮುಖ್ಯಮಂತ್ರಿ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲಾಗುವುದು. ಈ ಭಾಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಸಿದ್ದರಾಮಯ್ಯ ಅಧಿಕಾರದಿಂದ ಇಳಿಯುವವರೆಗೂ ಸದನದ ಒಳಗೆ ಹಾಗೂ ಹೊರಗೆ ಬಿಜೆಪಿ ಹೋರಾಟ ಮುಂದುವರಿಸಲಿದೆ’ ಎಂದು ಹೇಳಿದರು.</p>.<p>‘ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗಾಗಿ ಖಜಾನೆ ಖಾಲಿ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಾಗಿ ಪರಿಶಿಷ್ಟರ ಹಣವನ್ನೂ ಬಳಸಿಕೊಂಡು ದ್ರೋಹವೆಸಗಿದ್ದಾರೆ. ಅಹಿಂದ ಹೆಸರೇಳಿ ಅಧಿಕಾರಕ್ಕೆ ಬಂದವರು ಆ ಸಮುದಾಯಗಳನ್ನು ವಂಚಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಮುಡಾ ಹಗರಣ ದೇಶದಾದ್ಯಂತ ಸುದ್ದಿಯಾಗಿದೆ. ಸಿಎಂ ತವರಲ್ಲೇ ದೊಡ್ಡ ಹಗರಣ ಬಯಲಾಗಿದೆ’ ಎಂದು ದೂರಿದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ಎಲ್.ನಾಗೇಂದ್ರ, ‘ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸಿದ್ದರೆ ₹ 5ಸಾವಿರ ಕೋಟಿ ರಾಜ್ಯದ ಖಜಾನೆ ಸೇರುತ್ತಿತ್ತು. ಆದರೆ, ಸೂಕ್ತವಾಗಿ ತನಿಖೆ ನಡೆಸದೆ ಹಗರಣವನ್ನು ಒಪ್ಪಿಕೊಂಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ಪಕ್ಷದ ಕಾರ್ಯಕರ್ತರು ವ್ಯಕ್ತಿ ಪೂಜೆ ಮಾಡಬಾರದು. ಗುಂಪುಗಾರಿಕೆಗಳಿಗೆ ತಲೆ ಹಾಕಬೇಡು. ಪಕ್ಷದಿಂದ ತೊಂದರೆ ಆಗಿದ್ದರೆ ನೇರವಾಗಿ ಪಕ್ಷದ ನಾಯಕರನ್ನು ಭೇಟಿಯಾಗಿ ಬಗೆಹರಿಸಿಕೊಳ್ಳಬೇಕು’ ಎಂದರು.</p>.<p>ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡಿರುವ ಸಿ.ಎಚ್. ವಿಜಯಶಂಕರ್ ಅವರನ್ನು ಅಭಿನಂದಿಸಲಾಯಿತು.</p>.<p>ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಮಾತನಾಡಿದರು. ಶಾಸಕ ಟಿ.ಎಸ್. ಶ್ರೀವತ್ಸ, ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಡಾ.ಅನಿಲ್ ಥಾಮಸ್, ವಿಭಾಗೀಯ ಪ್ರಭಾರಿ ಮೈ.ವಿ. ರವಿಶಂಕರ್, ಮುಖಂಡರಾದ ಅಪ್ಪಣ್ಣ, ಶಿವಕುಮಾರ್, ಸಂದೇಶ್ ಸ್ವಾಮಿ, ಮಂಜುನಾಥ್, ಗೋಪಾಲ್ ರಾವ್ ಪಾಲ್ಗೊಂಡಿದ್ದರು.</p>.<div><blockquote>ಮುಂಬರುವ ನಗರಪಾಲಿಕೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಶ್ರಮಿಸಬೇಕು. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದರೆ ಉತ್ತಮ ಅವಕಾಶಗಳು ಸಿಗುತ್ತವೆ </blockquote><span class="attribution">ಎಲ್. ನಾಗೇಂದ್ರ ಅಧ್ಯಕ್ಷ ಬಿಜೆಪಿ ನಗರ ಜಿಲ್ಲಾ ಘಟಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>