<p><strong>ಹುಣಸೂರು:</strong> ‘ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಡಿಎಂಕೆ ದೋಸ್ತಿಗಾಗಿ ರಾಜ್ಯದ ರೈತರನ್ನು ಬಲಿ ನೀಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಮತ ರಾಜಕಾರಣ ನಡೆಸಿದ್ದು, ಮತದಾರ ತಕ್ಕ ಪಾಠ ಕಲಿಸಲಿದ್ದಾನೆ’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್. ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.</p>.<p>‘ಇಂಡಿಯಾ ಒಕ್ಕೂಟದ ಮಿತ್ರಪಕ್ಷವಾಗಿರುವ ಡಿಎಂಕೆಗೆ ರಾಜ್ಯ ಕಾಂಗ್ರೆಸ್ ಸಂಪೂರ್ಣ ಶರಣಾಗಿ ನಮ್ಮ ರೈತರಿಗೆ ನೀರಿಲ್ಲದಿದ್ದರೂ ಕಾವೇರಿ ಹರಿಬಿಟ್ಟು ವರಿಷ್ಟರನ್ನು ಮೆಚ್ಚಿಸಿ ಖುರ್ಚಿ ಉಳಿಸಿಕೊಳ್ಳುವ ರಾಜಕಾರಣ ನಡೆಸಿರುವುದು ತಲೆ ತಗ್ಗಿಸುವ ಸಂಗತಿ’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯದ್ದರು.</p>.<p>‘ಬೆಂಗಳೂರು ಮತ್ತು ಸುತ್ತಮುತ್ತ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದರೂ ಸಿದ್ದರಾಮಯ್ಯ ಬರ ಎನ್ನುತ್ತಿದ್ದಾರೆ. ಹಾಗಿದ್ದರೆ ತಮಿಳುನಾಡಿಗೆ ನೀರು ಹರಿಸಲು ಬರ ಇಲ್ಲವೆ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಆರ್ಥಿಕ ಸಮಾನತೆ ಬಗ್ಗೆ ಪ್ರಸ್ತಾಪಿಸಿ, ಉಳ್ಳವರಿಂದ ಸಂಪತ್ತನ್ನು ಕಿತ್ತುಕೊಂಡು ಇಲ್ಲದವರಿಗೆ ಸಮನಾಗಿ ಹಂಚುವ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ನಾಯಕತ್ವದ ಅನುಭವ ಕೊರತೆ ಈ ಹೇಳಿಕೆಗೆ ಸಾಕ್ಷಿಯಾಗಿದೆ. ಸಂವಿಧಾನದಲ್ಲಿ ಈ ರೀತಿ ಮಾಡುವ ಅವಕಾಶವೇ ಇಲ್ಲ. ಹೀಗಿರುವಾಗ ಆರ್ಥಿಕ ಸಮಾನತೆ ಹೇಗೆ ಮಾಡುತ್ತಾರೆ’ ಎಂದು ಹರಿಹಾಯದ್ದರು.</p>.<p>‘ರಾಜ್ಯದಲ್ಲಿ ನೆಲ, ಜಲಕ್ಕಾಗಿ ಹೋರಾಟ ನಡೆಸುತ್ತಿರುವ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾವೇರಿ ನದಿ ವಿಷಯಕ್ಕೆ ಸಂಬಂಧಿಸಿದಂತೆ ನಿರಂತರ ಹೋರಾಟ ನಡೆಸಿದ್ದು, ಸಿದ್ದರಾಮಯ್ಯ ಈ ವಿಷಯದ ಬಗ್ಗೆ ಅಸಭ್ಯವಾಗಿ ಟೀಕಿಸುತ್ತಿದ್ದಾರೆ. ಈ ಎಲ್ಲದಕ್ಕೂ ಮತದಾರ ಉತ್ತರ ನೀಡಲಿದ್ದಾನೆ’ ಎಂದರು.</p>.<p>‘ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಆ ಯೋಜನೆಗೆ ಅನುದಾನ ಕ್ರೂಢೀಕರಿಸಲು ಇತರೆ ಅಗತ್ಯ ವಸ್ತುಗಳಿಗೆ ದರ ದುಪ್ಪಟ್ಟು ಹೆಚ್ಚಿಸಲಾಗಿದೆ. ಅಬಕಾರಿ ಇಲಾಖೆಯಲ್ಲಿ ವಾರ್ಷಿಕ ₹ 28 ಸಾವಿರ ಕೋಟಿ ಸಂಗ್ರಹವಾಗುತ್ತಿತ್ತು, ಈಗ ₹40 ಸಾವಿರ ಕೋಟಿ ಸಂಗ್ರಹವಾಗುತ್ತಿದೆ. ಆ ಹಣವನ್ನೇ ಮಹಿಳೆಯರಿಗೆ ನೀಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>‘ಮೈಸೂರು –ಕೊಡಗು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಗೆಲುವಿಗೆ ಸಕಾರಾತ್ಮಕ ಸ್ಪಂದನೆ ಮತದಾರರಿಂದ ಎದುರಾಗಿದ್ದು, ಅರಸು ವಂಶದವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್ ಹೊಂದಬೇಕಿತ್ತು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ಶರವಣ, ಸತ್ಯಪ್ಪ, ಶಿವಕುಮಾರ್ ಮತ್ತು ಉದಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ಇಂಡಿಯಾ ಒಕ್ಕೂಟದ ಕಾಂಗ್ರೆಸ್ ಡಿಎಂಕೆ ದೋಸ್ತಿಗಾಗಿ ರಾಜ್ಯದ ರೈತರನ್ನು ಬಲಿ ನೀಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸಿ ಮತ ರಾಜಕಾರಣ ನಡೆಸಿದ್ದು, ಮತದಾರ ತಕ್ಕ ಪಾಠ ಕಲಿಸಲಿದ್ದಾನೆ’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್. ವಿಶ್ವನಾಥ್ ತರಾಟೆಗೆ ತೆಗೆದುಕೊಂಡರು.</p>.<p>‘ಇಂಡಿಯಾ ಒಕ್ಕೂಟದ ಮಿತ್ರಪಕ್ಷವಾಗಿರುವ ಡಿಎಂಕೆಗೆ ರಾಜ್ಯ ಕಾಂಗ್ರೆಸ್ ಸಂಪೂರ್ಣ ಶರಣಾಗಿ ನಮ್ಮ ರೈತರಿಗೆ ನೀರಿಲ್ಲದಿದ್ದರೂ ಕಾವೇರಿ ಹರಿಬಿಟ್ಟು ವರಿಷ್ಟರನ್ನು ಮೆಚ್ಚಿಸಿ ಖುರ್ಚಿ ಉಳಿಸಿಕೊಳ್ಳುವ ರಾಜಕಾರಣ ನಡೆಸಿರುವುದು ತಲೆ ತಗ್ಗಿಸುವ ಸಂಗತಿ’ ಎಂದು ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯದ್ದರು.</p>.<p>‘ಬೆಂಗಳೂರು ಮತ್ತು ಸುತ್ತಮುತ್ತ ಕುಡಿಯುವ ನೀರಿಗೆ ಹಾಹಾಕಾರ ಎದುರಾಗಿದ್ದರೂ ಸಿದ್ದರಾಮಯ್ಯ ಬರ ಎನ್ನುತ್ತಿದ್ದಾರೆ. ಹಾಗಿದ್ದರೆ ತಮಿಳುನಾಡಿಗೆ ನೀರು ಹರಿಸಲು ಬರ ಇಲ್ಲವೆ’ ಎಂದು ಪ್ರಶ್ನಿಸಿದರು.</p>.<p>‘ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಆರ್ಥಿಕ ಸಮಾನತೆ ಬಗ್ಗೆ ಪ್ರಸ್ತಾಪಿಸಿ, ಉಳ್ಳವರಿಂದ ಸಂಪತ್ತನ್ನು ಕಿತ್ತುಕೊಂಡು ಇಲ್ಲದವರಿಗೆ ಸಮನಾಗಿ ಹಂಚುವ ಬಗ್ಗೆ ಮಾತನಾಡಿದ್ದಾರೆ. ರಾಜಕೀಯ ನಾಯಕತ್ವದ ಅನುಭವ ಕೊರತೆ ಈ ಹೇಳಿಕೆಗೆ ಸಾಕ್ಷಿಯಾಗಿದೆ. ಸಂವಿಧಾನದಲ್ಲಿ ಈ ರೀತಿ ಮಾಡುವ ಅವಕಾಶವೇ ಇಲ್ಲ. ಹೀಗಿರುವಾಗ ಆರ್ಥಿಕ ಸಮಾನತೆ ಹೇಗೆ ಮಾಡುತ್ತಾರೆ’ ಎಂದು ಹರಿಹಾಯದ್ದರು.</p>.<p>‘ರಾಜ್ಯದಲ್ಲಿ ನೆಲ, ಜಲಕ್ಕಾಗಿ ಹೋರಾಟ ನಡೆಸುತ್ತಿರುವ ಜೆಡಿಎಸ್ ವರಿಷ್ಠ ದೇವೇಗೌಡ ಅವರು ಕಾವೇರಿ ನದಿ ವಿಷಯಕ್ಕೆ ಸಂಬಂಧಿಸಿದಂತೆ ನಿರಂತರ ಹೋರಾಟ ನಡೆಸಿದ್ದು, ಸಿದ್ದರಾಮಯ್ಯ ಈ ವಿಷಯದ ಬಗ್ಗೆ ಅಸಭ್ಯವಾಗಿ ಟೀಕಿಸುತ್ತಿದ್ದಾರೆ. ಈ ಎಲ್ಲದಕ್ಕೂ ಮತದಾರ ಉತ್ತರ ನೀಡಲಿದ್ದಾನೆ’ ಎಂದರು.</p>.<p>‘ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಆ ಯೋಜನೆಗೆ ಅನುದಾನ ಕ್ರೂಢೀಕರಿಸಲು ಇತರೆ ಅಗತ್ಯ ವಸ್ತುಗಳಿಗೆ ದರ ದುಪ್ಪಟ್ಟು ಹೆಚ್ಚಿಸಲಾಗಿದೆ. ಅಬಕಾರಿ ಇಲಾಖೆಯಲ್ಲಿ ವಾರ್ಷಿಕ ₹ 28 ಸಾವಿರ ಕೋಟಿ ಸಂಗ್ರಹವಾಗುತ್ತಿತ್ತು, ಈಗ ₹40 ಸಾವಿರ ಕೋಟಿ ಸಂಗ್ರಹವಾಗುತ್ತಿದೆ. ಆ ಹಣವನ್ನೇ ಮಹಿಳೆಯರಿಗೆ ನೀಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.</p>.<p>‘ಮೈಸೂರು –ಕೊಡಗು ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿ ಗೆಲುವಿಗೆ ಸಕಾರಾತ್ಮಕ ಸ್ಪಂದನೆ ಮತದಾರರಿಂದ ಎದುರಾಗಿದ್ದು, ಅರಸು ವಂಶದವರನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್ ಹೊಂದಬೇಕಿತ್ತು’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ಶರವಣ, ಸತ್ಯಪ್ಪ, ಶಿವಕುಮಾರ್ ಮತ್ತು ಉದಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>