<p><strong>ಮೈಸೂರು</strong>: ‘ಕೇಂದ್ರ ಬಜೆಟ್ನಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ಸರಿಯಲ್ಲ’ ಎಂದು ಜೆಡಿಎಸ್ ರಾಜ್ಯ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಸ್ತವವಾಗಿ ಈಗಾಗಲೇ ಕೇಂದ್ರ ಸರ್ಕಾರ ರೈಲ್ವೆ ವಲಯಕ್ಕೆ ₹7,559 ಕೋಟಿ ನೀಡಿದೆ. ಹೊಸದಾಗಿ ರಚನೆ ಆಗಿರುವ ಕಾರಣ ಆಂಧ್ರ, ತೆಲಂಗಾಣ ಮೊದಲಾದ ರಾಜ್ಯಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಲಾಗಿದೆ. ಇದನ್ನು ಟೀಕಿಸುವುದು ಸಲ್ಲ. ಇನ್ನು ಕಳೆದ ಬಾರಿಯ 2013, 2018ರ ಅವಧಿಯಲ್ಲಿ ₹8,480 ಕೋಟಿ ಖರ್ಚು ಮಾಡಿ ಮೈಸೂರು- ಬೆಂಗಳೂರು ಹೆದ್ದಾರಿ ಬಿಡುಗಡೆಗೊಳಿಸಿದೆ. ಈ ರೀತಿ ಕೇಂದ್ರ ಸರ್ಕಾರ ಇಲ್ಲಿನ ಅಭಿವೃದ್ಧಿಗೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹಣ ನೀಡಿದೆ. ಇದನ್ನು ಗಮನಿಸಬೇಕು’ ಎಂದರು.</p>.<p>‘ಮುಡಾ ಭ್ರಷ್ಟಾಚಾರ ಕುರಿತಂತೆ ಸಿ.ಎಂ ಸಿದ್ದರಾಮಯ್ಯ, ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಲಿಲ್ಲ. ₹5 ಸಾವಿರ ಕೋಟಿ ಮೀರಿದ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಬೇನಾಮಿ ಹೆಸರಿನಲ್ಲಿ ನಿವೇಶನ ಪಡೆದಿರುವವರ ಸಂಖ್ಯೆಯೇ ಹೆಚ್ಚಾಗಿದೆ. ಅಲ್ಲದೆ, ಗೃಹಲಕ್ಷ್ಮೀ ಯೋಜನೆ ಕಾರಣ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಟೀಕಿಸಿದರು.</p>.<p>ಮಾಜಿ ಮೇಯರ್ ರವಿಕುಮಾರ್, ಆರ್.ಮುದ್ದುರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಬಜೆಟ್ನಲ್ಲಿ ರಾಜ್ಯ ಸರ್ಕಾರಕ್ಕೆ ಅನ್ಯಾಯ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪ ಸರಿಯಲ್ಲ’ ಎಂದು ಜೆಡಿಎಸ್ ರಾಜ್ಯ ವಕ್ತಾರ ಎನ್.ಆರ್.ರವಿಚಂದ್ರೇಗೌಡ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಸ್ತವವಾಗಿ ಈಗಾಗಲೇ ಕೇಂದ್ರ ಸರ್ಕಾರ ರೈಲ್ವೆ ವಲಯಕ್ಕೆ ₹7,559 ಕೋಟಿ ನೀಡಿದೆ. ಹೊಸದಾಗಿ ರಚನೆ ಆಗಿರುವ ಕಾರಣ ಆಂಧ್ರ, ತೆಲಂಗಾಣ ಮೊದಲಾದ ರಾಜ್ಯಗಳಿಗೆ ಬಜೆಟ್ನಲ್ಲಿ ಹೆಚ್ಚಿನ ಹಣ ನೀಡಲಾಗಿದೆ. ಇದನ್ನು ಟೀಕಿಸುವುದು ಸಲ್ಲ. ಇನ್ನು ಕಳೆದ ಬಾರಿಯ 2013, 2018ರ ಅವಧಿಯಲ್ಲಿ ₹8,480 ಕೋಟಿ ಖರ್ಚು ಮಾಡಿ ಮೈಸೂರು- ಬೆಂಗಳೂರು ಹೆದ್ದಾರಿ ಬಿಡುಗಡೆಗೊಳಿಸಿದೆ. ಈ ರೀತಿ ಕೇಂದ್ರ ಸರ್ಕಾರ ಇಲ್ಲಿನ ಅಭಿವೃದ್ಧಿಗೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹಣ ನೀಡಿದೆ. ಇದನ್ನು ಗಮನಿಸಬೇಕು’ ಎಂದರು.</p>.<p>‘ಮುಡಾ ಭ್ರಷ್ಟಾಚಾರ ಕುರಿತಂತೆ ಸಿ.ಎಂ ಸಿದ್ದರಾಮಯ್ಯ, ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳು ನಿಲುವಳಿ ಸೂಚನೆ ಮಂಡಿಸಲು ಅವಕಾಶ ನೀಡಲಿಲ್ಲ. ₹5 ಸಾವಿರ ಕೋಟಿ ಮೀರಿದ ಭ್ರಷ್ಟಾಚಾರದ ತನಿಖೆ ಸಿಬಿಐಗೆ ವಹಿಸಲು ಹಿಂದೇಟು ಹಾಕುತ್ತಿದ್ದಾರೆ. ಇಲ್ಲಿ ಬೇನಾಮಿ ಹೆಸರಿನಲ್ಲಿ ನಿವೇಶನ ಪಡೆದಿರುವವರ ಸಂಖ್ಯೆಯೇ ಹೆಚ್ಚಾಗಿದೆ. ಅಲ್ಲದೆ, ಗೃಹಲಕ್ಷ್ಮೀ ಯೋಜನೆ ಕಾರಣ ರಾಜ್ಯ ಸರ್ಕಾರ ದಿವಾಳಿಯಾಗಿದೆ’ ಎಂದು ಟೀಕಿಸಿದರು.</p>.<p>ಮಾಜಿ ಮೇಯರ್ ರವಿಕುಮಾರ್, ಆರ್.ಮುದ್ದುರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>