<p><strong>ಬೆಟ್ಟದಪುರ</strong>: ಸಮೀಪದ ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಣಸೂರಿನ ಸರ್ಕಾರಿ ಜಾಗ ಮಾಲೀಕತ್ವ ಸಂಬಂಧ ಎರಡು ಸಮುದಾಯಗಳ ನಡುವೆ ಉಂಟಾಗಿದ್ದ ಘರ್ಷಣೆಯನ್ನು ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶುಕ್ರವಾರ ಬಗೆಹರಿಸಿದರು.</p>.<p>ಗ್ರಾಮದ ಮಧ್ಯ ಭಾಗದ ಸರ್ಕಾರಿ ಜಾಗದ ಮಾಲೀಕತ್ವದ ಸಂಬಂಧ ಗ್ರಾಮದ ಮೇದಗಿರಿ ಸಮುದಾಯ ಹಾಗೂ ಕುಂಬಾರ ಶೆಟ್ಟಿ ಸಮುದಾಯದ ನಡುವೆ ಹಲವು ವರ್ಷಗಳಿಂದ ವ್ಯಾಜ್ಯ ನಡೆಯುತ್ತಿತ್ತು.</p>.<p>ಕೆಲ ದಿನಗಳ ಹಿಂದೆ ಮೇದಗಿರಿ ಸಮುದಾಯದವರು ಅಲ್ಲಿ ಮೇದರ ಕೇತೇಶ್ವರ ಕ್ಷೇಮಾಭಿವೃದ್ಧಿ ಸಂಘ ಎಂಬ ನಾಮಫಲಕ ಅಳವಡಿಸಿದ ಬಳಿಕ ಮಾತಿನ ಚಕಮಕಿ ನಡೆದಿತ್ತು.</p>.<p>ದಲಿತ ಮುಖಂಡ ಕೆ.ಬಿ.ಮೂರ್ತಿ ಮಾತನಾಡಿ, ‘ದಲಿತರಿಗೆ ಅನ್ಯಾಯವಾಗುತ್ತಿದೆ. ಮೇದಗಿರಿ ಸಮುದಾಯದವರಿಗೆ ಗುಡಿ ಕೈಗಾರಿಕೆ ಪ್ರಾರಂಭಿಸಲು ಗುರುತಿಸಿರುವ ಸ್ಥಳವನ್ನು ನಿಗದಿ ಮಾಡಿಕೊಡಬೇಕೆಂಬ ಮನವಿಗೆ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.</p>.<p>‘ಕುಂಬಾರಶೆಟ್ಟಿ ಸಮುದಾಯಕ್ಕೆ ಸಮುದಾಯ ಭವನ, ರಾಮಮಂದಿರವಿದ್ದರೂ ನಮಗೆ ಮೀಸಲಾಗಿರುವ ಜಾಗಕ್ಕಾಗಿ ವಾದ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>ಮೇದ ಗಿರಿ ಸಮುದಾಯದ ಮುಖಂಡ ಪಾಲಾಕ್ಷ ಮಾತನಾಡಿ, ‘ಕ್ಷೇಮಾಭಿವೃದ್ಧಿ ಸಂಘದ ಸಭೆ ನಡೆಸಲು ಸ್ಥಳವಿಲ್ಲ. ಗ್ರಾಮ ಪಂಚಾಯಿತಿಗೆ ಸಲ್ಲಿಸಿದ ಅರ್ಜಿಗೆ ಸ್ಪಂದನೆ ಸಿಗದೆ ನಾಮಫಲಕ ಅಳವಡಿಸಿದ್ದೇವೆ’ ಎಂದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜೇಗೌಡ ಮಾತನಾಡಿ, ‘ಸರ್ಕಾರದ ಈ ಜಾಗಕ್ಕೆ ಎರಡು ಸಮುದಾಯದವರು ಅರ್ಜಿ ಸಲ್ಲಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಇದೇ ವೇಳೆ ಮೇದ ಗಿರಿ ಸಮುದಾಯದವರು ಅಳವಡಿಸಿದ್ದ ನಾಮಫಲಕವನ್ನು ಪೊಲೀಸರು ತೆರವುಗೊಳಿಸಿದರು. ಅತಿ ಕ್ರಮ ಪ್ರವೇಶ ನಿಷೇಧಿಸಲಾಗಿದೆ ಎಂದು ಪಂಚಾಯಿತಿಯಿಂದ ನಾಮಫಲಕ ಅಳವಡಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ದೇವರಾಜು, ಉಪಾಧ್ಯಕ್ಷ ಮಮತಾ, ಪಿಎಸ್ಐ ಪ್ರಕಾಶ್ ಎಂ.ಎತ್ತಿನಮನಿ, ರಾಜಶೇಖರ್, ಶಿವಣ್ಣ, ಗಿರೀಶ್, ಕುಮಾರ್ ಸೀನಾ, ಸತ್ಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಟ್ಟದಪುರ</strong>: ಸಮೀಪದ ಭುವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಣಸೂರಿನ ಸರ್ಕಾರಿ ಜಾಗ ಮಾಲೀಕತ್ವ ಸಂಬಂಧ ಎರಡು ಸಮುದಾಯಗಳ ನಡುವೆ ಉಂಟಾಗಿದ್ದ ಘರ್ಷಣೆಯನ್ನು ಪೊಲೀಸರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶುಕ್ರವಾರ ಬಗೆಹರಿಸಿದರು.</p>.<p>ಗ್ರಾಮದ ಮಧ್ಯ ಭಾಗದ ಸರ್ಕಾರಿ ಜಾಗದ ಮಾಲೀಕತ್ವದ ಸಂಬಂಧ ಗ್ರಾಮದ ಮೇದಗಿರಿ ಸಮುದಾಯ ಹಾಗೂ ಕುಂಬಾರ ಶೆಟ್ಟಿ ಸಮುದಾಯದ ನಡುವೆ ಹಲವು ವರ್ಷಗಳಿಂದ ವ್ಯಾಜ್ಯ ನಡೆಯುತ್ತಿತ್ತು.</p>.<p>ಕೆಲ ದಿನಗಳ ಹಿಂದೆ ಮೇದಗಿರಿ ಸಮುದಾಯದವರು ಅಲ್ಲಿ ಮೇದರ ಕೇತೇಶ್ವರ ಕ್ಷೇಮಾಭಿವೃದ್ಧಿ ಸಂಘ ಎಂಬ ನಾಮಫಲಕ ಅಳವಡಿಸಿದ ಬಳಿಕ ಮಾತಿನ ಚಕಮಕಿ ನಡೆದಿತ್ತು.</p>.<p>ದಲಿತ ಮುಖಂಡ ಕೆ.ಬಿ.ಮೂರ್ತಿ ಮಾತನಾಡಿ, ‘ದಲಿತರಿಗೆ ಅನ್ಯಾಯವಾಗುತ್ತಿದೆ. ಮೇದಗಿರಿ ಸಮುದಾಯದವರಿಗೆ ಗುಡಿ ಕೈಗಾರಿಕೆ ಪ್ರಾರಂಭಿಸಲು ಗುರುತಿಸಿರುವ ಸ್ಥಳವನ್ನು ನಿಗದಿ ಮಾಡಿಕೊಡಬೇಕೆಂಬ ಮನವಿಗೆ ಸ್ಪಂದನೆ ದೊರೆತಿಲ್ಲ’ ಎಂದು ದೂರಿದರು.</p>.<p>‘ಕುಂಬಾರಶೆಟ್ಟಿ ಸಮುದಾಯಕ್ಕೆ ಸಮುದಾಯ ಭವನ, ರಾಮಮಂದಿರವಿದ್ದರೂ ನಮಗೆ ಮೀಸಲಾಗಿರುವ ಜಾಗಕ್ಕಾಗಿ ವಾದ ಮಾಡುತ್ತಿದ್ದಾರೆ’ ಎಂದು ದೂರಿದರು.</p>.<p>ಮೇದ ಗಿರಿ ಸಮುದಾಯದ ಮುಖಂಡ ಪಾಲಾಕ್ಷ ಮಾತನಾಡಿ, ‘ಕ್ಷೇಮಾಭಿವೃದ್ಧಿ ಸಂಘದ ಸಭೆ ನಡೆಸಲು ಸ್ಥಳವಿಲ್ಲ. ಗ್ರಾಮ ಪಂಚಾಯಿತಿಗೆ ಸಲ್ಲಿಸಿದ ಅರ್ಜಿಗೆ ಸ್ಪಂದನೆ ಸಿಗದೆ ನಾಮಫಲಕ ಅಳವಡಿಸಿದ್ದೇವೆ’ ಎಂದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದೇವರಾಜೇಗೌಡ ಮಾತನಾಡಿ, ‘ಸರ್ಕಾರದ ಈ ಜಾಗಕ್ಕೆ ಎರಡು ಸಮುದಾಯದವರು ಅರ್ಜಿ ಸಲ್ಲಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಇದೇ ವೇಳೆ ಮೇದ ಗಿರಿ ಸಮುದಾಯದವರು ಅಳವಡಿಸಿದ್ದ ನಾಮಫಲಕವನ್ನು ಪೊಲೀಸರು ತೆರವುಗೊಳಿಸಿದರು. ಅತಿ ಕ್ರಮ ಪ್ರವೇಶ ನಿಷೇಧಿಸಲಾಗಿದೆ ಎಂದು ಪಂಚಾಯಿತಿಯಿಂದ ನಾಮಫಲಕ ಅಳವಡಿಸಲಾಯಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ದೇವರಾಜು, ಉಪಾಧ್ಯಕ್ಷ ಮಮತಾ, ಪಿಎಸ್ಐ ಪ್ರಕಾಶ್ ಎಂ.ಎತ್ತಿನಮನಿ, ರಾಜಶೇಖರ್, ಶಿವಣ್ಣ, ಗಿರೀಶ್, ಕುಮಾರ್ ಸೀನಾ, ಸತ್ಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>