<p><strong>ಮೈಸೂರು:</strong> ‘ಮಾದರಿ ನೀತಿಸಂಹಿತೆ ಜಾರಿಗೆ ಬಂದಿರುವುದರಿಂದಾಗಿ, ಯಾವುದೇ ವ್ಯಕ್ತಿಯು ₹ 50ಸಾವಿರಕ್ಕಿಂತ ಹೆಚ್ಚಿನ ನಗದು ಸಾಗಿಸುವಂತಿಲ್ಲ. ಒಂದು ವೇಳೆ ಚೆಕ್ಪೋಸ್ಟ್ನಲ್ಲಿ ಅಥವಾ ತಪಾಸಣೆ ವೇಳೆ ಸಿಕ್ಕಿಬಿದ್ದಲ್ಲಿ ಆ ಹಣವನ್ನು ಜಪ್ತಿ ಮಾಡಲಾಗುವುದು’ ಎಂದು ಚುನಾವಣಾಧಿಕಾರಿ ರಾಜೇಂದ್ರ ತಿಳಿಸಿದರು.</p>.<p>‘ಯಾವ ಕಾರಣಕ್ಕಾಗಿ ಹಣ ಸಾಗಿಸಲಾಗುತ್ತಿತ್ತು ಎನ್ನುವುದನ್ನು ಸಂಬಂಧಿಸಿದವರು ದಾಖಲೆ ಸಹಿತ ತಿಳಿಸಬೇಕು. ‘ರಾಜಕೀಯ ಕಾರಣಕ್ಕೆ ಆ ಹಣ ಸಾಗಿಸಲಾಗುತ್ತಿರಲಿಲ್ಲ’ ಎಂಬುದು ದಾಖಲೆಗಳಿಂದ ಖಚಿತವಾದಲ್ಲಿ ಮಾತ್ರ ವಾಪಸ್ ನೀಡಲು ಸಂಬಂಧಿಸಿದ ಸಮಿತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಇಲ್ಲದಿದ್ದರೆ ಹಿಂತಿರುಗಿಸಲಾಗುವುದಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಸ್ಪಷ್ಟಪಡಿಸಿದರು.</p>.<p>‘₹ 10ಸಾವಿರಕ್ಕಿಂತ ಜಾಸ್ತಿ ಮೌಲ್ಯದ ವಸ್ತುಗಳನ್ನು ಸಾಗಿಸುವಂತಿಲ್ಲ. ಆನ್ಲೈನ್ ವಹಿವಾಟಿನ ಮೇಲೂ ನಿಗಾ ವಹಿಸಲಾಗಿದೆ. ಇದಕ್ಕೆಂದೇ ಪ್ರತ್ಯೇಕ ತಂಡ ರಚಿಸಲಾಗಿದೆ. ಮದ್ಯ ಮಾರಾಟದ ಮೇಲೂ ನಿಗಾ ಇಡಲಾಗುತ್ತದೆ. ಅಸಹಜ ವಹಿವಾಟು ಕಂಡುಬಂದಲ್ಲಿ ಪರಿಶೀಲಿಸಲಾಗುತ್ತದೆ. ಹೋದ ವರ್ಷ ಈ ಅವಧಿಯಲ್ಲಿ ಎಷ್ಟು ಮಾರಾಟವಾಗಿತ್ತು ಎಂಬ ಅಂಕಿ–ಅಂಶದೊಂದಿಗೆ ವಿಶ್ಲೇಷಣೆ ಮಾಡಲಾಗುತ್ತದೆ. ಸಾಮಾಜಿಕ ಮಾಧ್ಯಮದ ಮೇಲೂ ನಿಗಾ ವಹಿಸಲಾಗುತ್ತದೆ. ಕೆಲವು ಹ್ಯಾಷ್ಟ್ಯಾಗ್ಗಳನ್ನು ಫಾಲೋ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಒಂದು ವೇಳೆ ಒಂದೇ ವಾಹನದಲ್ಲಿ ನಾಲ್ಕೈದು ಮಂದಿಯೂ ತಲಾ ₹ 50ಸಾವಿರ ಸಾಗಿಸುತ್ತಿದ್ದರೆ ಅದು ಅನುಮಾನಕ್ಕೆ ಕಾರಣವಾಗುತ್ತದೆ. ಅವರಿಂದಲೂ ಜಪ್ತಿ ಮಾಡಿ, ಆಯೋಗದ ಗಮನಕ್ಕೆ ತರಲಾಗುವುದು. ಚೆಕ್ಪೋಸ್ಟ್ಗಳಲ್ಲಿ ಪ್ರವಾಸಿಗರಿಗೆ ಹಾಗೂ ಹೆದ್ದಾರಿಗಳ ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ತಪಾಸಣೆಗೆ ಒಳಪಡಿಸಲಾಗುವುದು’ ಎಂದರು.</p>.<p>‘ಕುಡಿಯುವ ನೀರು ಟ್ಯಾಂಕರ್ ಪೂರೈಕೆ ವಿಷಯವೂ ಮತದಾರರಿಗೆ ಆಮಿಷ ವ್ಯಾಪ್ತಿಯಲ್ಲೇ ಬರುತ್ತದೆ. ಯಾರಾದರೂ ರಾಜಕೀಯ ವ್ಯಕ್ತಿಗಳು ಅಥವಾ ಮತದಾರರಿಗೆ ಆಮಿಷ ಒಡ್ಡಲು ಈ ಕಾರ್ಯದಲ್ಲಿ ತೊಡಗಿದರೆ ಅಂಥವರ ಮೇಲೆ ಕ್ರಮ ವಹಿಸಲಾಗುವುದು. ಅಲ್ಲದೇ, ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ತೀವ್ರ ಬರಗಾಲ ಇರುವುದರಿಂದ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಕೆಲಸಕ್ಕೆ ಸಮಯ ಕೊಡಲೆಂದೇ ಪಿಡಿಒ ಮೊದಲಾದ ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಬಾರಿ ನಿಮ್ಮ ಅಭ್ಯರ್ಥಿ ಬಗ್ಗೆ ತಿಳಿಯಿರಿ ಎಂದು ಮೊಬೈಲ್ ಆ್ಯಪ್ ಈ ಬಾರಿ ಹೊಸದಾಗಿ ಪರಿಚಯಿಸಲಾಗಿದೆ. ಅದರಲ್ಲಿ ಅಭ್ಯರ್ಥಿಗಳ ವಿವಿರವನ್ನು ದಾಖಲಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮಾದರಿ ನೀತಿಸಂಹಿತೆ ಜಾರಿಗೆ ಬಂದಿರುವುದರಿಂದಾಗಿ, ಯಾವುದೇ ವ್ಯಕ್ತಿಯು ₹ 50ಸಾವಿರಕ್ಕಿಂತ ಹೆಚ್ಚಿನ ನಗದು ಸಾಗಿಸುವಂತಿಲ್ಲ. ಒಂದು ವೇಳೆ ಚೆಕ್ಪೋಸ್ಟ್ನಲ್ಲಿ ಅಥವಾ ತಪಾಸಣೆ ವೇಳೆ ಸಿಕ್ಕಿಬಿದ್ದಲ್ಲಿ ಆ ಹಣವನ್ನು ಜಪ್ತಿ ಮಾಡಲಾಗುವುದು’ ಎಂದು ಚುನಾವಣಾಧಿಕಾರಿ ರಾಜೇಂದ್ರ ತಿಳಿಸಿದರು.</p>.<p>‘ಯಾವ ಕಾರಣಕ್ಕಾಗಿ ಹಣ ಸಾಗಿಸಲಾಗುತ್ತಿತ್ತು ಎನ್ನುವುದನ್ನು ಸಂಬಂಧಿಸಿದವರು ದಾಖಲೆ ಸಹಿತ ತಿಳಿಸಬೇಕು. ‘ರಾಜಕೀಯ ಕಾರಣಕ್ಕೆ ಆ ಹಣ ಸಾಗಿಸಲಾಗುತ್ತಿರಲಿಲ್ಲ’ ಎಂಬುದು ದಾಖಲೆಗಳಿಂದ ಖಚಿತವಾದಲ್ಲಿ ಮಾತ್ರ ವಾಪಸ್ ನೀಡಲು ಸಂಬಂಧಿಸಿದ ಸಮಿತಿಯಲ್ಲಿ ಕ್ರಮ ವಹಿಸಲಾಗುತ್ತದೆ. ಇಲ್ಲದಿದ್ದರೆ ಹಿಂತಿರುಗಿಸಲಾಗುವುದಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಶನಿವಾರ ಸ್ಪಷ್ಟಪಡಿಸಿದರು.</p>.<p>‘₹ 10ಸಾವಿರಕ್ಕಿಂತ ಜಾಸ್ತಿ ಮೌಲ್ಯದ ವಸ್ತುಗಳನ್ನು ಸಾಗಿಸುವಂತಿಲ್ಲ. ಆನ್ಲೈನ್ ವಹಿವಾಟಿನ ಮೇಲೂ ನಿಗಾ ವಹಿಸಲಾಗಿದೆ. ಇದಕ್ಕೆಂದೇ ಪ್ರತ್ಯೇಕ ತಂಡ ರಚಿಸಲಾಗಿದೆ. ಮದ್ಯ ಮಾರಾಟದ ಮೇಲೂ ನಿಗಾ ಇಡಲಾಗುತ್ತದೆ. ಅಸಹಜ ವಹಿವಾಟು ಕಂಡುಬಂದಲ್ಲಿ ಪರಿಶೀಲಿಸಲಾಗುತ್ತದೆ. ಹೋದ ವರ್ಷ ಈ ಅವಧಿಯಲ್ಲಿ ಎಷ್ಟು ಮಾರಾಟವಾಗಿತ್ತು ಎಂಬ ಅಂಕಿ–ಅಂಶದೊಂದಿಗೆ ವಿಶ್ಲೇಷಣೆ ಮಾಡಲಾಗುತ್ತದೆ. ಸಾಮಾಜಿಕ ಮಾಧ್ಯಮದ ಮೇಲೂ ನಿಗಾ ವಹಿಸಲಾಗುತ್ತದೆ. ಕೆಲವು ಹ್ಯಾಷ್ಟ್ಯಾಗ್ಗಳನ್ನು ಫಾಲೋ ಮಾಡಲಾಗುವುದು’ ಎಂದು ತಿಳಿಸಿದರು.</p>.<p>‘ಒಂದು ವೇಳೆ ಒಂದೇ ವಾಹನದಲ್ಲಿ ನಾಲ್ಕೈದು ಮಂದಿಯೂ ತಲಾ ₹ 50ಸಾವಿರ ಸಾಗಿಸುತ್ತಿದ್ದರೆ ಅದು ಅನುಮಾನಕ್ಕೆ ಕಾರಣವಾಗುತ್ತದೆ. ಅವರಿಂದಲೂ ಜಪ್ತಿ ಮಾಡಿ, ಆಯೋಗದ ಗಮನಕ್ಕೆ ತರಲಾಗುವುದು. ಚೆಕ್ಪೋಸ್ಟ್ಗಳಲ್ಲಿ ಪ್ರವಾಸಿಗರಿಗೆ ಹಾಗೂ ಹೆದ್ದಾರಿಗಳ ವಾಹನಗಳ ಸಂಚಾರಕ್ಕೆ ತೊಂದರೆ ಆಗದಂತೆ ತಪಾಸಣೆಗೆ ಒಳಪಡಿಸಲಾಗುವುದು’ ಎಂದರು.</p>.<p>‘ಕುಡಿಯುವ ನೀರು ಟ್ಯಾಂಕರ್ ಪೂರೈಕೆ ವಿಷಯವೂ ಮತದಾರರಿಗೆ ಆಮಿಷ ವ್ಯಾಪ್ತಿಯಲ್ಲೇ ಬರುತ್ತದೆ. ಯಾರಾದರೂ ರಾಜಕೀಯ ವ್ಯಕ್ತಿಗಳು ಅಥವಾ ಮತದಾರರಿಗೆ ಆಮಿಷ ಒಡ್ಡಲು ಈ ಕಾರ್ಯದಲ್ಲಿ ತೊಡಗಿದರೆ ಅಂಥವರ ಮೇಲೆ ಕ್ರಮ ವಹಿಸಲಾಗುವುದು. ಅಲ್ಲದೇ, ನೀರು ಸರಬರಾಜಿನಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಲಾಗುವುದು. ತೀವ್ರ ಬರಗಾಲ ಇರುವುದರಿಂದ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲಾಗಿದೆ. ಈ ಕೆಲಸಕ್ಕೆ ಸಮಯ ಕೊಡಲೆಂದೇ ಪಿಡಿಒ ಮೊದಲಾದ ಅಧಿಕಾರಿಗಳನ್ನು ಚುನಾವಣಾ ಕಾರ್ಯಕ್ಕೆ ಕಡಿಮೆ ಪ್ರಮಾಣದಲ್ಲಿ ಬಳಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.</p>.<p>‘ಈ ಬಾರಿ ನಿಮ್ಮ ಅಭ್ಯರ್ಥಿ ಬಗ್ಗೆ ತಿಳಿಯಿರಿ ಎಂದು ಮೊಬೈಲ್ ಆ್ಯಪ್ ಈ ಬಾರಿ ಹೊಸದಾಗಿ ಪರಿಚಯಿಸಲಾಗಿದೆ. ಅದರಲ್ಲಿ ಅಭ್ಯರ್ಥಿಗಳ ವಿವಿರವನ್ನು ದಾಖಲಿಸಲಾಗುವುದು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>