<p><strong>ಮೈಸೂರು</strong>: ‘ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಓದಿನ ಜೊತೆಗೆ ನಿಗದಿತ ಸಮಯದೊಳಗೆ ಬರೆಯುವುದನ್ನೂ ಅಭ್ಯಾಸ ಮಾಡಬೇಕು. ಪರೀಕ್ಷೆಯ ಮೂರು ಗಂಟೆಯು ನಿಮ್ಮ ಜೀವನವನ್ನು ಬದಲಿಸಬಲ್ಲದು’ ಎಂದು ಅಲ್ಪಸಂಖ್ಯಾತರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಹೇಳಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನಡೆಸಿದ ಕೆ– ಸೆಟ್ ಮತ್ತು ಯುಜಿಸಿ– ನೆಟ್ ಪರೀಕ್ಷೆಗಳ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಹದಗೆಟ್ಟಿರುವ ಶೈಕ್ಷಣಿಕ ವ್ಯವಸ್ಥೆಯನ್ನು ಮೇಲೆತ್ತಬಲ್ಲ ಯುವ ಉಪನ್ಯಾಸಕರ ಅಗತ್ಯವಿದೆ. ಮಕ್ಕಳ ಜ್ಞಾನದ ಮಟ್ಟದಲ್ಲಿ ಶಿಕ್ಷಕರಿಲ್ಲದಿದ್ದರೆ ಶಿಕ್ಷಣ ವಲಯ ಸಮತೋಲನದಲ್ಲಿರುವುದು ಅಸಾಧ್ಯ. ಹೀಗಾಗಿ ಉಪನ್ಯಾಸಕರು ಪಠ್ಯದಲ್ಲಿರುವುದನ್ನಷ್ಟೇ ಬೋಧಿಸದೆ ವಿಶ್ಲೇಷನಾತ್ಮಕವಾಗಿ ಮಕ್ಕಳ ಮನಸ್ಸಿಗೆ ಮುಟ್ಟವಂತೆ ಬೋಧಿಸಿದಾಗ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ’ ಎಂದರು.</p>.<p>‘ವಿದ್ಯಾರ್ಥಿಗಳೂ ಜ್ಞಾನದ ಮೂಲಗಳನ್ನು ಅರಿತು ಹೆಚ್ಚಿನ ಜ್ಞಾನ ಸಂಪಾದನೆಯಲ್ಲಿ ತೊಡಗಬೇಕು. ವಿಶಾಲ ಮನಸ್ಥಿತಿಯಿಂದ ಎಲ್ಲವನ್ನೂ ಸ್ವೀಕರಿಸುವ ಮನಸ್ಥಿತಿ ಇರಬೇಕು’ ಎಂದು ತಿಳಿಸಿದರು.</p>.<p>ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಎಸ್.ಅಹಲ್ಯಾ ಮಾತನಾಡಿ, ‘ಆಧುನಿಕ ಕಾಲಘಟ್ಟದಲ್ಲಿ ಉಪನ್ಯಾಸಕರಿಗೆ ಅನೇಕ ಸವಾಲುಗಳಿವೆ. ಮೊಬೈಲ್ ಫೋನ್ನಲ್ಲೇ ಮುಳುಗಿರುವ, ಗೂಗಲ್, ಕೃತಕ ಬುದ್ಧಿಮತ್ತೆ ಜೊತೆಗೆ ಬೆಳೆದಿರುವ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಾಗ ನಮ್ಮಲ್ಲಿ ವಿಶೇಷ ಕೌಶಲ ಅಗತ್ಯ’ ಎಂದು ಹೇಳಿದರು.</p>.<p>‘ಭಾವನಾತ್ಮಕವಾಗಿ ವಿದ್ಯಾರ್ಥಿಗಳ ಮನಮುಟ್ಟುವಂತೆ ಸಂಬಂಧಿಸಿದ ವಿಷಯದ ಬಗ್ಗೆ ತಿಳಿಸಿದಾಗ ಗುರುಗಳು ಎಂದಿಗೂ ಅವರ ಮನದಲ್ಲಿ ಉಳಿಯುತ್ತಾರೆ. ಹೀಗಾಗಿ ಪಠ್ಯವನ್ನಷ್ಟೇ ಬೋಧಿಸುವ ಶಿಕ್ಷಕರಾಗಿ ಉಳಿಯದೆ, ಜೀವನದ ಪಾಠ ಹೇಳುವ ಪ್ರಾಚಾರ್ಯರಾಗಿ ಬೆಳಬೇಕು’ ಎಂದು ಸಲಹೆ ನೀಡಿದರು.</p>.<p>ಕುಲಪತಿ ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ, ಪರೀಕ್ಷಾಂಗ ಕುಲಸಚಿವ ಎಚ್.ವಿಶ್ವನಾಥ್, ಅಧ್ಯಯನ ವಿಭಾಗದ ಮುಖ್ಯಸ್ಥ ರಾಮನಾಥಂ ನಾಯ್ಡು, ಕೇಂದ್ರದ ಸಂಚಾಲಕ ಜೈನಹಳ್ಳಿ ಸತ್ಯನಾರಾಯಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ನಡೆಸುವಾಗ ಓದಿನ ಜೊತೆಗೆ ನಿಗದಿತ ಸಮಯದೊಳಗೆ ಬರೆಯುವುದನ್ನೂ ಅಭ್ಯಾಸ ಮಾಡಬೇಕು. ಪರೀಕ್ಷೆಯ ಮೂರು ಗಂಟೆಯು ನಿಮ್ಮ ಜೀವನವನ್ನು ಬದಲಿಸಬಲ್ಲದು’ ಎಂದು ಅಲ್ಪಸಂಖ್ಯಾತರ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಹೇಳಿದರು.</p>.<p>ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ನಡೆಸಿದ ಕೆ– ಸೆಟ್ ಮತ್ತು ಯುಜಿಸಿ– ನೆಟ್ ಪರೀಕ್ಷೆಗಳ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಅಧ್ಯಯನ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಹದಗೆಟ್ಟಿರುವ ಶೈಕ್ಷಣಿಕ ವ್ಯವಸ್ಥೆಯನ್ನು ಮೇಲೆತ್ತಬಲ್ಲ ಯುವ ಉಪನ್ಯಾಸಕರ ಅಗತ್ಯವಿದೆ. ಮಕ್ಕಳ ಜ್ಞಾನದ ಮಟ್ಟದಲ್ಲಿ ಶಿಕ್ಷಕರಿಲ್ಲದಿದ್ದರೆ ಶಿಕ್ಷಣ ವಲಯ ಸಮತೋಲನದಲ್ಲಿರುವುದು ಅಸಾಧ್ಯ. ಹೀಗಾಗಿ ಉಪನ್ಯಾಸಕರು ಪಠ್ಯದಲ್ಲಿರುವುದನ್ನಷ್ಟೇ ಬೋಧಿಸದೆ ವಿಶ್ಲೇಷನಾತ್ಮಕವಾಗಿ ಮಕ್ಕಳ ಮನಸ್ಸಿಗೆ ಮುಟ್ಟವಂತೆ ಬೋಧಿಸಿದಾಗ ವೃತ್ತಿಯಲ್ಲಿ ಯಶಸ್ವಿಯಾಗಲು ಸಾಧ್ಯ’ ಎಂದರು.</p>.<p>‘ವಿದ್ಯಾರ್ಥಿಗಳೂ ಜ್ಞಾನದ ಮೂಲಗಳನ್ನು ಅರಿತು ಹೆಚ್ಚಿನ ಜ್ಞಾನ ಸಂಪಾದನೆಯಲ್ಲಿ ತೊಡಗಬೇಕು. ವಿಶಾಲ ಮನಸ್ಥಿತಿಯಿಂದ ಎಲ್ಲವನ್ನೂ ಸ್ವೀಕರಿಸುವ ಮನಸ್ಥಿತಿ ಇರಬೇಕು’ ಎಂದು ತಿಳಿಸಿದರು.</p>.<p>ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಎಸ್.ಅಹಲ್ಯಾ ಮಾತನಾಡಿ, ‘ಆಧುನಿಕ ಕಾಲಘಟ್ಟದಲ್ಲಿ ಉಪನ್ಯಾಸಕರಿಗೆ ಅನೇಕ ಸವಾಲುಗಳಿವೆ. ಮೊಬೈಲ್ ಫೋನ್ನಲ್ಲೇ ಮುಳುಗಿರುವ, ಗೂಗಲ್, ಕೃತಕ ಬುದ್ಧಿಮತ್ತೆ ಜೊತೆಗೆ ಬೆಳೆದಿರುವ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಾಗ ನಮ್ಮಲ್ಲಿ ವಿಶೇಷ ಕೌಶಲ ಅಗತ್ಯ’ ಎಂದು ಹೇಳಿದರು.</p>.<p>‘ಭಾವನಾತ್ಮಕವಾಗಿ ವಿದ್ಯಾರ್ಥಿಗಳ ಮನಮುಟ್ಟುವಂತೆ ಸಂಬಂಧಿಸಿದ ವಿಷಯದ ಬಗ್ಗೆ ತಿಳಿಸಿದಾಗ ಗುರುಗಳು ಎಂದಿಗೂ ಅವರ ಮನದಲ್ಲಿ ಉಳಿಯುತ್ತಾರೆ. ಹೀಗಾಗಿ ಪಠ್ಯವನ್ನಷ್ಟೇ ಬೋಧಿಸುವ ಶಿಕ್ಷಕರಾಗಿ ಉಳಿಯದೆ, ಜೀವನದ ಪಾಠ ಹೇಳುವ ಪ್ರಾಚಾರ್ಯರಾಗಿ ಬೆಳಬೇಕು’ ಎಂದು ಸಲಹೆ ನೀಡಿದರು.</p>.<p>ಕುಲಪತಿ ಶರಣಪ್ಪ ವಿ.ಹಲಸೆ, ಕುಲಸಚಿವ ಪ್ರೊ.ಕೆ.ಬಿ.ಪ್ರವೀಣ, ಪರೀಕ್ಷಾಂಗ ಕುಲಸಚಿವ ಎಚ್.ವಿಶ್ವನಾಥ್, ಅಧ್ಯಯನ ವಿಭಾಗದ ಮುಖ್ಯಸ್ಥ ರಾಮನಾಥಂ ನಾಯ್ಡು, ಕೇಂದ್ರದ ಸಂಚಾಲಕ ಜೈನಹಳ್ಳಿ ಸತ್ಯನಾರಾಯಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>