<p><strong>ಮೈಸೂರು</strong>: ‘ದೇಶದಲ್ಲಿ ಹೊಸತಾಗಿ ಅಸ್ತಿತ್ವಕ್ಕೆ ಬಂದಿರುವ ಒಕ್ಕೂಟ ಸರ್ಕಾರವು ನಿಜವಾದ ಅರ್ಥದಲ್ಲಿ ಹಲವು ಪಕ್ಷಗಳ ಒಕ್ಕೂಟವಾಗಿ ಕಾರ್ಯ ನಿರ್ವಹಿಸಬೇಕು. ಸಂವಿಧಾನದ ಸಾರ್ವಭೌಮತೆಯನ್ನು ಒಪ್ಪಿ, ಪ್ರಜಾಪ್ರಭುತ್ವ ಹಕ್ಕುಗಳ ಮರು ಸ್ಥಾಪನೆ ಮಾಡಬೇಕು’ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಆಗ್ರಹಿಸಿದರು.</p>.<p>ನಗರದ ಗಾಂಧಿ ಚೌಕದಲ್ಲಿ ಭಾನುವಾರ ‘ಸಂವಿಧಾನ ಪ್ರಸ್ತಾವನೆ ಓದು’ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ‘ಸಂವಿಧಾನ ರಕ್ಷಿಸಿ’ ಎಂಬ ಹಕ್ಕೊತ್ತಾಯ ಮಾಡಿದ ಪ್ರಗತಿಪರರು, ಜನ ಕೇಂದ್ರಿತ ಅಭಿವೃದ್ಧಿ ಈ ಸರ್ಕಾರದ ನಡೆಯಾಗಬೇಕು ಎಂದು ಒತ್ತಾಯಿಸಿದರು.</p>.<p>‘ಈ ಹಿಂದಿನ 10 ವರ್ಷಗಳಲ್ಲಿ ದೇಶದಲ್ಲಿ ಅಧಿಕಾರದಲ್ಲಿದ್ದ ಏಕ ಪಕ್ಷದ ಕೇಂದ್ರ ಸರ್ಕಾರವು ಅನೇಕ ಅಸಂವಿಧಾನಾತ್ಮಕ ಕ್ರಮಗಳನ್ನು ಕೈಗೊಂಡು ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡಿದೆ. ದೇಶದ ಮತದಾರರು ಈಗಷ್ಟೇ ಮುಗಿದ ಚುನಾವಣೆಯಲ್ಲಿ ಈ ದೇಶವು ಸಾಂವಿಧಾನಿಕ ನಡೆಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನಾದರೂ ಒಕ್ಕೂಟದ ಆಶಯದೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ, ಪತ್ರಕರ್ತ ಕೃಷ್ಣಪ್ರಸಾದ್, ಲ. ಜಗನ್ನಾಥ, ಜಗದೀಶ ಸೂರ್ಯ, ಆರ್.ಜಿ. ಭಂಡಾರಿ, ಬಿ.ಎಂ.ಪ್ರವೀಣ, ಈ. ರತಿರಾವ್, ಸ್ವರ್ಣಮಾಲಾ ಶಿರಸಿ, ಪಿ.ಎಸ್. ಶ್ರೀದೇವಿ, ರೂಪಾ, ಪಂಡಿತಾರಾಧ್ಯ, ಎಸ್. ಸಿದ್ದಪ್ಪ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ದೇಶದಲ್ಲಿ ಹೊಸತಾಗಿ ಅಸ್ತಿತ್ವಕ್ಕೆ ಬಂದಿರುವ ಒಕ್ಕೂಟ ಸರ್ಕಾರವು ನಿಜವಾದ ಅರ್ಥದಲ್ಲಿ ಹಲವು ಪಕ್ಷಗಳ ಒಕ್ಕೂಟವಾಗಿ ಕಾರ್ಯ ನಿರ್ವಹಿಸಬೇಕು. ಸಂವಿಧಾನದ ಸಾರ್ವಭೌಮತೆಯನ್ನು ಒಪ್ಪಿ, ಪ್ರಜಾಪ್ರಭುತ್ವ ಹಕ್ಕುಗಳ ಮರು ಸ್ಥಾಪನೆ ಮಾಡಬೇಕು’ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಸದಸ್ಯರು ಆಗ್ರಹಿಸಿದರು.</p>.<p>ನಗರದ ಗಾಂಧಿ ಚೌಕದಲ್ಲಿ ಭಾನುವಾರ ‘ಸಂವಿಧಾನ ಪ್ರಸ್ತಾವನೆ ಓದು’ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ‘ಸಂವಿಧಾನ ರಕ್ಷಿಸಿ’ ಎಂಬ ಹಕ್ಕೊತ್ತಾಯ ಮಾಡಿದ ಪ್ರಗತಿಪರರು, ಜನ ಕೇಂದ್ರಿತ ಅಭಿವೃದ್ಧಿ ಈ ಸರ್ಕಾರದ ನಡೆಯಾಗಬೇಕು ಎಂದು ಒತ್ತಾಯಿಸಿದರು.</p>.<p>‘ಈ ಹಿಂದಿನ 10 ವರ್ಷಗಳಲ್ಲಿ ದೇಶದಲ್ಲಿ ಅಧಿಕಾರದಲ್ಲಿದ್ದ ಏಕ ಪಕ್ಷದ ಕೇಂದ್ರ ಸರ್ಕಾರವು ಅನೇಕ ಅಸಂವಿಧಾನಾತ್ಮಕ ಕ್ರಮಗಳನ್ನು ಕೈಗೊಂಡು ಸುಪ್ರೀಂ ಕೋರ್ಟ್ನಿಂದ ಛೀಮಾರಿ ಹಾಕಿಸಿಕೊಂಡಿದೆ. ದೇಶದ ಮತದಾರರು ಈಗಷ್ಟೇ ಮುಗಿದ ಚುನಾವಣೆಯಲ್ಲಿ ಈ ದೇಶವು ಸಾಂವಿಧಾನಿಕ ನಡೆಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನಾದರೂ ಒಕ್ಕೂಟದ ಆಶಯದೊಂದಿಗೆ ಕಾರ್ಯ ನಿರ್ವಹಿಸಬೇಕು’ ಎಂದು ಆಗ್ರಹಿಸಿದರು.</p>.<p>ನಿವೃತ್ತ ಮೇಜರ್ ಜನರಲ್ ಎಸ್.ಜಿ. ಒಂಬತ್ಕೆರೆ, ಪತ್ರಕರ್ತ ಕೃಷ್ಣಪ್ರಸಾದ್, ಲ. ಜಗನ್ನಾಥ, ಜಗದೀಶ ಸೂರ್ಯ, ಆರ್.ಜಿ. ಭಂಡಾರಿ, ಬಿ.ಎಂ.ಪ್ರವೀಣ, ಈ. ರತಿರಾವ್, ಸ್ವರ್ಣಮಾಲಾ ಶಿರಸಿ, ಪಿ.ಎಸ್. ಶ್ರೀದೇವಿ, ರೂಪಾ, ಪಂಡಿತಾರಾಧ್ಯ, ಎಸ್. ಸಿದ್ದಪ್ಪ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>