<p><strong>ಮೈಸೂರು:</strong> ತಾಲ್ಲೂಕಿನ ಕರಕನಹಳ್ಳಿಯ ಚಿಕ್ಕಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಅಭಿವೃದ್ಧಿಪಡಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಗುರುವಾರ ಗ್ರಾಮಸ್ಥರಿಗೆ ಹಸ್ತಾಂತರಿಸಿದರು.<br /><br />ಇದಕ್ಕೂ ಮುನ್ನ ಅವರು ಕೆರೆಗೆ ಬಾಗಿನ ಅರ್ಪಿಸಿದರು.<br /><br />4.34 ಎಕರೆ ವಿಸ್ತೀರ್ಣದ ಈ ಕೆರೆ ಕಳೆದ 20 ವರ್ಷಗಳಿಂದ ತುಂಬಿರಲಿಲ್ಲ. ಒಂದು ವರ್ಷದಲ್ಲಿ ಟ್ರಸ್ಟ್ ಈ ಕೆರೆಯನ್ನು ₹ 5.72 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದೆ. ಈ ಕೆರೆಯಿಂದ 150 ಕುಟುಂಬಗಳಿಗೆ ಪ್ರಯೋಜನವಾಗಿದ್ದು, 20 ಬೋರ್ ವೆಲ್ ಗಳು ಜಲಮರುಪೂರಣಗೊಂಡಿದೆ. ಸುಮಾರು 1 ಸಾವಿರ ಜಾನುವಾರುಗಳಿಗೆ ಕುಡಿಯಲು ಸಹಕಾರಿಯಾಗಿದೆ.<br /><br />ಟ್ರಸ್ಟ್ ವತಿಯಿಂದ ಪುನಶ್ಚೇತನಗೊಳಿಸಿದ 299 ನೇ ಕೆರೆ ಇದಾಗಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 30 ಕೆರೆಗಳನ್ನು ಒಂದು ವರ್ಷದಲ್ಲಿ ಪುನಶ್ಚೇತನಗೊಳಿಸಿದ್ದು, ಈಗ ಅವುಗಳೆಲ್ಲ ನೀರಿನಿಂದ ತುಂಬಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ತಾಲ್ಲೂಕಿನ ಕರಕನಹಳ್ಳಿಯ ಚಿಕ್ಕಕೆರೆಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಅಭಿವೃದ್ಧಿಪಡಿಸಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಗುರುವಾರ ಗ್ರಾಮಸ್ಥರಿಗೆ ಹಸ್ತಾಂತರಿಸಿದರು.<br /><br />ಇದಕ್ಕೂ ಮುನ್ನ ಅವರು ಕೆರೆಗೆ ಬಾಗಿನ ಅರ್ಪಿಸಿದರು.<br /><br />4.34 ಎಕರೆ ವಿಸ್ತೀರ್ಣದ ಈ ಕೆರೆ ಕಳೆದ 20 ವರ್ಷಗಳಿಂದ ತುಂಬಿರಲಿಲ್ಲ. ಒಂದು ವರ್ಷದಲ್ಲಿ ಟ್ರಸ್ಟ್ ಈ ಕೆರೆಯನ್ನು ₹ 5.72 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದೆ. ಈ ಕೆರೆಯಿಂದ 150 ಕುಟುಂಬಗಳಿಗೆ ಪ್ರಯೋಜನವಾಗಿದ್ದು, 20 ಬೋರ್ ವೆಲ್ ಗಳು ಜಲಮರುಪೂರಣಗೊಂಡಿದೆ. ಸುಮಾರು 1 ಸಾವಿರ ಜಾನುವಾರುಗಳಿಗೆ ಕುಡಿಯಲು ಸಹಕಾರಿಯಾಗಿದೆ.<br /><br />ಟ್ರಸ್ಟ್ ವತಿಯಿಂದ ಪುನಶ್ಚೇತನಗೊಳಿಸಿದ 299 ನೇ ಕೆರೆ ಇದಾಗಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 30 ಕೆರೆಗಳನ್ನು ಒಂದು ವರ್ಷದಲ್ಲಿ ಪುನಶ್ಚೇತನಗೊಳಿಸಿದ್ದು, ಈಗ ಅವುಗಳೆಲ್ಲ ನೀರಿನಿಂದ ತುಂಬಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>