<p><strong>ನಂಜನಗೂಡು</strong>: ‘ಮಾಜಿ ಸಂಸದ ದಿ.ಧ್ರುವನಾರಾಯಣ ಅವರ 63ನೇ ಜನ್ಮದಿನದ ಪ್ರಯುಕ್ತ ಜು.31ರ ಬುಧವಾರ ನಗರದ ಜೆಎಸ್ಎಸ್ ಮಂಗಳಮಂಟಪದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಕಳಲೆ ಕೇಶವಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಧ್ರುವನಾರಾಯಣ ಅವರು ಸಮಾಜಿಕ ಸೇವಾ ಕಾರ್ಯಗಳ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಅವರು ಸಂಸದರಾಗಿದ್ದಾಗ ಎರಡು ಬಾರಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳಗಳನ್ನು ನಡೆಸಿದ್ದರು. ಈ ಬಾರಿ ಅವರ ಮಗ ಶಾಸಕ ದರ್ಶನ್ ಧ್ರುವನಾರಾಯಣ ನೇತೃತ್ವದಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಚಾಮರಾಜನಗರದ ಏಳು ಕಂಪನಿಗಳೂ ಸೇರಿದಂತೆ ಮೈಸೂರು ಕೈಗಾರಿಕಾ ಪ್ರದೇಶದ ಬೃಹತ್ ಕಂಪನಿಗಳು ಪಾಲ್ಗೊಂಡು ನೂರಾರು ಮಂದಿಗೆ ಉದ್ಯೋಗ ನೀಡಲಿವೆ. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್ ಭಾಗವಹಿಸಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ಪ್ರಕೃತ್, ಮಹೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ‘ಮಾಜಿ ಸಂಸದ ದಿ.ಧ್ರುವನಾರಾಯಣ ಅವರ 63ನೇ ಜನ್ಮದಿನದ ಪ್ರಯುಕ್ತ ಜು.31ರ ಬುಧವಾರ ನಗರದ ಜೆಎಸ್ಎಸ್ ಮಂಗಳಮಂಟಪದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಕಳಲೆ ಕೇಶವಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಧ್ರುವನಾರಾಯಣ ಅವರು ಸಮಾಜಿಕ ಸೇವಾ ಕಾರ್ಯಗಳ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಅವರು ಸಂಸದರಾಗಿದ್ದಾಗ ಎರಡು ಬಾರಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಉದ್ಯೋಗ ಮೇಳಗಳನ್ನು ನಡೆಸಿದ್ದರು. ಈ ಬಾರಿ ಅವರ ಮಗ ಶಾಸಕ ದರ್ಶನ್ ಧ್ರುವನಾರಾಯಣ ನೇತೃತ್ವದಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಮೇಳದಲ್ಲಿ ಚಾಮರಾಜನಗರದ ಏಳು ಕಂಪನಿಗಳೂ ಸೇರಿದಂತೆ ಮೈಸೂರು ಕೈಗಾರಿಕಾ ಪ್ರದೇಶದ ಬೃಹತ್ ಕಂಪನಿಗಳು ಪಾಲ್ಗೊಂಡು ನೂರಾರು ಮಂದಿಗೆ ಉದ್ಯೋಗ ನೀಡಲಿವೆ. ಕಾರ್ಯಕ್ರಮದಲ್ಲಿ ಮಾಜಿ ಸಂಸದ ಡಿ.ಕೆ.ಸುರೇಶ್, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್ ಭಾಗವಹಿಸಲಿದ್ದಾರೆ’ ಎಂದರು.</p>.<p>ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಸಿ.ಎಂ.ಶಂಕರ್, ಶ್ರೀಕಂಠನಾಯ್ಕ, ಪ್ರಕೃತ್, ಮಹೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>