<p><strong>ಮೈಸೂರು</strong>: ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಯುವ ಮತದಾರರು ನಿರುತ್ಸಾಹ ತೋರುತ್ತಿರುವುದು ಜಿಲ್ಲಾಡಳಿತದ ತಲೆನೋವಿಗೆ ಕಾರಣವಾಗಿದೆ.</p>.<p>ಜಿಲ್ಲೆಯಲ್ಲಿ 80ಸಾವಿರಕ್ಕೂ ಹೆಚ್ಚು ಯುವ ಮತದಾರರಿದ್ದಾರೆ ಎಂದು ಗುರುತಿಸಲಾಗಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ನೋಂದಾಯಿಸಿರುವವರು 50ಸಾವಿರ ಮಂದಿ (27,195 ಯುವಕರು ಹಾಗೂ 23,770 ಯುವತಿಯರು) ಮಾತ್ರ. ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರವೂ, ಇನ್ನೂ 30ಸಾವಿರ ಮಂದಿ ಹೊರಗುಳಿದಿದ್ದು ಅವರನ್ನು ಒಳಗೊಳಿಸಿಕೊಳ್ಳಲು ಕಸರತ್ತು ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ.</p>.<p>ವಿದ್ಯಾಸಂಸ್ಥೆಗಳು–ಕಾಲೇಜುಗಳಲ್ಲಿ ಹಲವು ಚಟುವಟಿಕೆಗಳನ್ನು ನಡೆಸಿದರೂ, ಕ್ಲಬ್ ರಚಿಸಿ ಜಾಗೃತಿ ಮೂಡಿಸುತ್ತಿದ್ದರೂ ಯುವಜನರು ಹೆಸರು ನೋಂದಣಿಗೆ ಮನಸ್ಸು ಮಾಡುತ್ತಿಲ್ಲ.</p>.<p>ಸಾವಿರಾರು ಮಂದಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ನಿರೀಕ್ಷಿಸಿದಷ್ಟು ಏರಿಕೆಯಾಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಯುವಜನರನ್ನು ಒಳಗೊಳಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದ ಮತದಾರರು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ. </p>.<p><strong>ಹೊರಗುಳಿದರೆ...:</strong></p>.<p>ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿದ್ದರೆ ಅವರು ‘ಪ್ರಜಾತಂತ್ರದ ಹಬ್ಬ’ದಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗುವುದಿಲ್ಲ. ಇದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ, ಯುವಕ–ಯುವತಿಯರನ್ನು ನೋಂದಾಯಿಸಲು ಜಿಲ್ಲಾಡಳಿತವು ರಾಜಕೀಯ ಪಕ್ಷಗಳ ಮೊರೆ ಕೂಡ ಹೋಗಿದೆ.</p>.<p>ನಗರದ ವ್ಯಾಪ್ತಿಯ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಆಗಿದೆ ಎಂಬುದನ್ನು ಗುರುತಿಸಿ, ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಯೋಜಿಸಲಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ‘ಕರಡು ಮತದಾರರ ಪಟ್ಟಿಯ ಪ್ರಕಾರ 34,070 ಯುವ ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಂತೆ 50,969 ಮಂದಿ ಇದ್ದಾರೆ. ಅಂದರೆ, 16,899 ಮಂದಿ ಸೇರ್ಪಡೆಯಾಗಿದ್ದಾರೆ. ಇನ್ನೂ ಬಹಳಷ್ಟು ಮಂದಿ ಸೇರ್ಪಡೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮುಂದುವರಿಸಲಾಗುವುದು. ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಈಗ ಅಂದಾಜಿನ ಪ್ರಕಾರ 35 ಲಕ್ಷ ಜನಸಂಖ್ಯೆ ಇದೆ. ಅದರಲ್ಲಿ ಶೇ 75ರಷ್ಟು ಮಂದಿ ಮತದಾನದ ಹಕ್ಕು ಉಳ್ಳವರಾಗಿದ್ದಾರೆ. 2019ರ ಲೋಕಸಭಾ ಚುನಾವಣೆ ಕಾಲಕ್ಕೆ ಜಿಲ್ಲೆಯಲ್ಲಿ 20,86,413 ಮತದಾರರಿದ್ದರು. ಅದರಲ್ಲಿ 14,68,695 ಮಂದಿ ಮತದಾನ ಮಾಡಿದ್ದರು. ಅಂದರೆ ಶೇ 70.39ರಷ್ಟು ಮತದಾನವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಯುವ ಮತದಾರರು ನಿರುತ್ಸಾಹ ತೋರುತ್ತಿರುವುದು ಜಿಲ್ಲಾಡಳಿತದ ತಲೆನೋವಿಗೆ ಕಾರಣವಾಗಿದೆ.</p>.<p>ಜಿಲ್ಲೆಯಲ್ಲಿ 80ಸಾವಿರಕ್ಕೂ ಹೆಚ್ಚು ಯುವ ಮತದಾರರಿದ್ದಾರೆ ಎಂದು ಗುರುತಿಸಲಾಗಿದೆ. ಆದರೆ, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆ ನೋಂದಾಯಿಸಿರುವವರು 50ಸಾವಿರ ಮಂದಿ (27,195 ಯುವಕರು ಹಾಗೂ 23,770 ಯುವತಿಯರು) ಮಾತ್ರ. ಅಂತಿಮ ಮತದಾರರ ಪಟ್ಟಿ ಪ್ರಕಟಿಸಿದ ನಂತರವೂ, ಇನ್ನೂ 30ಸಾವಿರ ಮಂದಿ ಹೊರಗುಳಿದಿದ್ದು ಅವರನ್ನು ಒಳಗೊಳಿಸಿಕೊಳ್ಳಲು ಕಸರತ್ತು ನಡೆಸಬೇಕಾದ ಪರಿಸ್ಥಿತಿ ಎದುರಾಗಿದೆ.</p>.<p>ವಿದ್ಯಾಸಂಸ್ಥೆಗಳು–ಕಾಲೇಜುಗಳಲ್ಲಿ ಹಲವು ಚಟುವಟಿಕೆಗಳನ್ನು ನಡೆಸಿದರೂ, ಕ್ಲಬ್ ರಚಿಸಿ ಜಾಗೃತಿ ಮೂಡಿಸುತ್ತಿದ್ದರೂ ಯುವಜನರು ಹೆಸರು ನೋಂದಣಿಗೆ ಮನಸ್ಸು ಮಾಡುತ್ತಿಲ್ಲ.</p>.<p>ಸಾವಿರಾರು ಮಂದಿ ಮತದಾನ ಪ್ರಕ್ರಿಯೆಯಿಂದ ದೂರ ಉಳಿದಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ನಿರೀಕ್ಷಿಸಿದಷ್ಟು ಏರಿಕೆಯಾಗಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗವು ಯುವಜನರನ್ನು ಒಳಗೊಳಿಸಿಕೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಪ್ರಮಾಣದ ಮತದಾರರು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ. </p>.<p><strong>ಹೊರಗುಳಿದರೆ...:</strong></p>.<p>ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದಿದ್ದರೆ ಅವರು ‘ಪ್ರಜಾತಂತ್ರದ ಹಬ್ಬ’ದಲ್ಲಿ ಪಾಲ್ಗೊಳ್ಳುವುದು ಸಾಧ್ಯವಾಗುವುದಿಲ್ಲ. ಇದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣದ ಮೇಲೆ ಪರಿಣಾಮ ಬೀರಲಿದೆ. ಈ ಹಿನ್ನೆಲೆಯಲ್ಲಿ, ಯುವಕ–ಯುವತಿಯರನ್ನು ನೋಂದಾಯಿಸಲು ಜಿಲ್ಲಾಡಳಿತವು ರಾಜಕೀಯ ಪಕ್ಷಗಳ ಮೊರೆ ಕೂಡ ಹೋಗಿದೆ.</p>.<p>ನಗರದ ವ್ಯಾಪ್ತಿಯ ಕೃಷ್ಣರಾಜ, ನರಸಿಂಹರಾಜ ಹಾಗೂ ಚಾಮರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದೆ. ಈ ಕ್ಷೇತ್ರಗಳ ಯಾವ ಮತಗಟ್ಟೆಗಳಲ್ಲಿ ಕಡಿಮೆ ಮತದಾನ ಆಗಿದೆ ಎಂಬುದನ್ನು ಗುರುತಿಸಿ, ಆ ವ್ಯಾಪ್ತಿಯಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಯೋಜಿಸಲಾಗಿದೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ‘ಕರಡು ಮತದಾರರ ಪಟ್ಟಿಯ ಪ್ರಕಾರ 34,070 ಯುವ ಮತದಾರರಿದ್ದರು. ಅಂತಿಮ ಮತದಾರರ ಪಟ್ಟಿಯಂತೆ 50,969 ಮಂದಿ ಇದ್ದಾರೆ. ಅಂದರೆ, 16,899 ಮಂದಿ ಸೇರ್ಪಡೆಯಾಗಿದ್ದಾರೆ. ಇನ್ನೂ ಬಹಳಷ್ಟು ಮಂದಿ ಸೇರ್ಪಡೆಯಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮುಂದುವರಿಸಲಾಗುವುದು. ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ) ಚಟುವಟಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಲಾಗುವುದು’ ಎಂದು ತಿಳಿಸಿದರು.</p>.<p>ಜಿಲ್ಲೆಯಲ್ಲಿ ಈಗ ಅಂದಾಜಿನ ಪ್ರಕಾರ 35 ಲಕ್ಷ ಜನಸಂಖ್ಯೆ ಇದೆ. ಅದರಲ್ಲಿ ಶೇ 75ರಷ್ಟು ಮಂದಿ ಮತದಾನದ ಹಕ್ಕು ಉಳ್ಳವರಾಗಿದ್ದಾರೆ. 2019ರ ಲೋಕಸಭಾ ಚುನಾವಣೆ ಕಾಲಕ್ಕೆ ಜಿಲ್ಲೆಯಲ್ಲಿ 20,86,413 ಮತದಾರರಿದ್ದರು. ಅದರಲ್ಲಿ 14,68,695 ಮಂದಿ ಮತದಾನ ಮಾಡಿದ್ದರು. ಅಂದರೆ ಶೇ 70.39ರಷ್ಟು ಮತದಾನವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>