<p><strong>ಮೈಸೂರು</strong>: ‘ಶೂದ್ರ ಸಮುದಾಯದ ಮಹಿಳೆಯು ಉತ್ತಮ ಶಿಕ್ಷಣ ಪಡೆದರೆ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಬಲ್ಲರು ಎಂಬುದಕ್ಕೆ ಯಶೋಧರ ದಾಸಪ್ಪ ಅವರು ಬದುಕು ಉದಾಹರಣೆ’ ಎಂದು ಲೇಖಕ ಬೂಕನಕೆರೆ ವಿಜೇಂದ್ರ ಹೇಳಿದರು.</p>.<p>ಇಲ್ಲಿನ ವಿದ್ಯಾವರ್ಧಕ ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ನಡೆದ ಕೆ.ಎಚ್.ರಾಮಯ್ಯ ವಿದ್ಯಾರ್ಥಿ ನಿಲಯದ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆ, ಯಶೋಧರ ದಾಸಪ್ಪ ಅವರ ಜನ್ಮ ದಿನಾಚರಣೆ ಮತ್ತು 75 ವರ್ಷ ವಯಸ್ಸಿನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸರ್ಕಾರವೂ ಶಾಲಾ ಪಠ್ಯಪುಸ್ತಕಗಳಲ್ಲಿ ಯಶೋಧರ ದಾಸಪ್ಪ ಅವರ ಕುರಿತು ಮಾಹಿತಿ ನೀಡಬೇಕು. ಆ ಮೂಲಕ ವಿದ್ಯಾರ್ಥಿಗಳಿಗೆ ಒಂದು ಅದ್ಭುತ ವ್ಯಕ್ತಿತ್ವದ ಪರಿಚಯ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಸದಸ್ಯರಾದ ಎನ್.ಬೋರಪ್ಪ, ಕೆ.ಎಸ್.ನಿಂಗಪ್ಪ ಅವರನ್ನು ಸನ್ಮಾನಿಸಿದರು. ಸಂಘದ ವಾರ್ಷಿಕ ಲೆಕ್ಕಪತ್ರಕ್ಕೆ ಸದಸ್ಯರ ಅನುಮೋದನೆ ಪಡೆಯಲಾಯಿತು.</p>.<p>ಕಾರ್ಯಕ್ರಮದಲ್ಲಿ ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ಕಾರ್ಯದರ್ಶಿ ಸರೋಜ ತುಳಸಿದಾಸ್, ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವಾಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ, ಅಧ್ಯಕ್ಷ ಪಿ.ಬೋರೇಗೌಡ, ಉಪಾಧ್ಯಕ್ಷ ಅಪ್ಪಾಜಿ ಗೌಡ, ಕಾರ್ಯದರ್ಶಿ ಕೆಂಪರಾಜೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಶೂದ್ರ ಸಮುದಾಯದ ಮಹಿಳೆಯು ಉತ್ತಮ ಶಿಕ್ಷಣ ಪಡೆದರೆ ರಾಜಕೀಯ, ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಬಲ್ಲರು ಎಂಬುದಕ್ಕೆ ಯಶೋಧರ ದಾಸಪ್ಪ ಅವರು ಬದುಕು ಉದಾಹರಣೆ’ ಎಂದು ಲೇಖಕ ಬೂಕನಕೆರೆ ವಿಜೇಂದ್ರ ಹೇಳಿದರು.</p>.<p>ಇಲ್ಲಿನ ವಿದ್ಯಾವರ್ಧಕ ಕಾಲೇಜಿನ ಪಿ.ಎಂ.ಚಿಕ್ಕಬೋರಯ್ಯ ಸಭಾಂಗಣದಲ್ಲಿ ನಡೆದ ಕೆ.ಎಚ್.ರಾಮಯ್ಯ ವಿದ್ಯಾರ್ಥಿ ನಿಲಯದ ಹಿರಿಯ ವಿದ್ಯಾರ್ಥಿ ಸಂಘದ ಸರ್ವ ಸದಸ್ಯರ ಸಭೆ, ಯಶೋಧರ ದಾಸಪ್ಪ ಅವರ ಜನ್ಮ ದಿನಾಚರಣೆ ಮತ್ತು 75 ವರ್ಷ ವಯಸ್ಸಿನ ಸದಸ್ಯರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.</p>.<p>‘ಸರ್ಕಾರವೂ ಶಾಲಾ ಪಠ್ಯಪುಸ್ತಕಗಳಲ್ಲಿ ಯಶೋಧರ ದಾಸಪ್ಪ ಅವರ ಕುರಿತು ಮಾಹಿತಿ ನೀಡಬೇಕು. ಆ ಮೂಲಕ ವಿದ್ಯಾರ್ಥಿಗಳಿಗೆ ಒಂದು ಅದ್ಭುತ ವ್ಯಕ್ತಿತ್ವದ ಪರಿಚಯ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಸದಸ್ಯರಾದ ಎನ್.ಬೋರಪ್ಪ, ಕೆ.ಎಸ್.ನಿಂಗಪ್ಪ ಅವರನ್ನು ಸನ್ಮಾನಿಸಿದರು. ಸಂಘದ ವಾರ್ಷಿಕ ಲೆಕ್ಕಪತ್ರಕ್ಕೆ ಸದಸ್ಯರ ಅನುಮೋದನೆ ಪಡೆಯಲಾಯಿತು.</p>.<p>ಕಾರ್ಯಕ್ರಮದಲ್ಲಿ ಎಚ್.ಸಿ.ದಾಸಪ್ಪ ಸಾರ್ವಜನಿಕ ವಿಚಾರ ಸಂಸ್ಥೆ ಕಾರ್ಯದರ್ಶಿ ಸರೋಜ ತುಳಸಿದಾಸ್, ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಪಿ.ವಿಶ್ವನಾಥ್, ಗೌರವಾಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ, ಅಧ್ಯಕ್ಷ ಪಿ.ಬೋರೇಗೌಡ, ಉಪಾಧ್ಯಕ್ಷ ಅಪ್ಪಾಜಿ ಗೌಡ, ಕಾರ್ಯದರ್ಶಿ ಕೆಂಪರಾಜೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>