<p><strong>ಮೈಸೂರು</strong>: ‘ವಚನಗಳ ಉಳಿವಿಗೆ ಶ್ರಮಿಸಿದ್ದ ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಎನ್ವೈಕೆಎಸ್ ಉಪನಿರ್ದೇಶಕ ಎಸ್.ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಕದಳಿ ವೇದಿಕೆಯಿಂದ ಈಚೆಗೆ ನಡೆದ ಫ.ಗು.ಹಳಕಟ್ಟಿ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿಶ್ವದ ಸಾಹಿತ್ಯ ಮತ್ತು ಧರ್ಮದಲ್ಲಿ ಕಾಣದ ವೈಜ್ಞಾನಿಕ, ಧಾರ್ಮಿಕ, ಸಾಮಾಜಿಕ ಮೌಲ್ಯಗಳು ವಚನ ಸಾಹಿತ್ಯದಲ್ಲಿವೆ. ವಚನಗಳನ್ನು ಮುಂದಿನ ಪೀಳಿಗೆ ಉಳಿಸುವ ದೃಷ್ಟಿಯಿಂದ ಅಧ್ಯಯನ ಅಗತ್ಯ’ ಎಂದರು.</p>.<p>‘ವಚನ ಪಿತಾಮಹ ಹಳಕಟ್ಟಿ ಅವರು ಬಹುಮುಖ ಪ್ರತಿಭೆ ಉಳ್ಳವರು. ಅವರ ಬದುಕಿನ ಕೊನೆವರೆಗೂ ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಪ್ರಸಾರ ಮಾಡಿದ್ದಾರೆ. ವಚನ ಸಾಹಿತ್ಯದ ಬೆಳಕು ಜಗತ್ತಿಗೆ ಪಸರಿಸಿದ್ದಾರೆ. ಅವರಿಂದ ವಿಶ್ವ ಮಾನ್ಯತೆ ಪಡೆದ ವಚನಗಳು ದೊರೆತ್ತಿವೆ’ ಎಂದು ತಿಳಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ತು ನಗರ ಘಟಕದ ಅಧ್ಯಕ್ಷ ಮ.ಗು.ಸದಾನಂದಯ್ಯ, ‘ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ವಚನಗಳನ್ನು ಓದಿ, ಬರೆದು ಬಹುಮಾನ ಪಡೆದಿರುವುದು ವಚನಗಳ ಸಂರಕ್ಷಣೆಯ ಮತ್ತೊಂದು ಭಾಗ’ ಎಂದರು.</p>.<p>ದತ್ತಿ ದಾನಿಗಳಾದ ಮಂಗಳಾ ಮುದ್ದುಮಾದಪ್ಪ, ಡಾ.ಬಿ.ನಿರ್ಮಲಾ ಅವರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳು ಬಗ್ಗೆ ಮಾಹಿತಿ ನೀಡಿದರು.</p>.<p>ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಜೆಎಸ್ಎಸ್ ಸಂಸ್ಥೆಯ ಪ್ರಾಂಶುಪಾಲ ಎಚ್.ಎನ್.ನಿರಂಜನ್ ವಿತರಿಸಿದರು. ಅರಿವಿನ ಮನೆ ಮಹಿಳಾ ಬಳಗದಿಂದ ವಚನ ಗಾಯನ ನಡೆಯಿತು.</p>.<p>ಕದಳಿ ವೇದಿಕೆಯ ಅಧ್ಯಕ್ಷರಾದ ಶಾರದಾ ಶಿವಲಿಂಗ ಸ್ವಾಮಿ, ಟಿ.ಎಸ್.ಕುಮಾರಸ್ವಾಮಿ, ಮಮತಾ, ಎಚ್.ಮುದ್ದು ಮಲ್ಲೇಶ್, ಮಂಜುಳಾ, ಲತಾ, ಸದಾಶಿವ, ಲೋಕೇಶಪ್ಪ, ನಂದೀಶ್, ಚಿನ್ನಸ್ವಾಮಿ, ಮೀನಾ, ವಿಜಯ, ಮಲ್ಲಿಕಾ, ಲಲಿತಾ, ಪಾಟೀಲ್, ಚನ್ನಬಸಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಚನಗಳ ಉಳಿವಿಗೆ ಶ್ರಮಿಸಿದ್ದ ಫ.ಗು.ಹಳಕಟ್ಟಿ ಅವರು ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’ ಎಂದು ಎನ್ವೈಕೆಎಸ್ ಉಪನಿರ್ದೇಶಕ ಎಸ್.ಸಿದ್ದರಾಮಯ್ಯ ಹೇಳಿದರು.</p>.<p>ನಗರದ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶರಣ ಸಾಹಿತ್ಯ ಪರಿಷತ್ತು ಕದಳಿ ವೇದಿಕೆಯಿಂದ ಈಚೆಗೆ ನಡೆದ ಫ.ಗು.ಹಳಕಟ್ಟಿ ಜಯಂತಿ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿಶ್ವದ ಸಾಹಿತ್ಯ ಮತ್ತು ಧರ್ಮದಲ್ಲಿ ಕಾಣದ ವೈಜ್ಞಾನಿಕ, ಧಾರ್ಮಿಕ, ಸಾಮಾಜಿಕ ಮೌಲ್ಯಗಳು ವಚನ ಸಾಹಿತ್ಯದಲ್ಲಿವೆ. ವಚನಗಳನ್ನು ಮುಂದಿನ ಪೀಳಿಗೆ ಉಳಿಸುವ ದೃಷ್ಟಿಯಿಂದ ಅಧ್ಯಯನ ಅಗತ್ಯ’ ಎಂದರು.</p>.<p>‘ವಚನ ಪಿತಾಮಹ ಹಳಕಟ್ಟಿ ಅವರು ಬಹುಮುಖ ಪ್ರತಿಭೆ ಉಳ್ಳವರು. ಅವರ ಬದುಕಿನ ಕೊನೆವರೆಗೂ ವಚನಗಳನ್ನು ಸಂಗ್ರಹಿಸಿ, ಪ್ರಕಟಿಸಿ ಪ್ರಸಾರ ಮಾಡಿದ್ದಾರೆ. ವಚನ ಸಾಹಿತ್ಯದ ಬೆಳಕು ಜಗತ್ತಿಗೆ ಪಸರಿಸಿದ್ದಾರೆ. ಅವರಿಂದ ವಿಶ್ವ ಮಾನ್ಯತೆ ಪಡೆದ ವಚನಗಳು ದೊರೆತ್ತಿವೆ’ ಎಂದು ತಿಳಿಸಿದರು.</p>.<p>ಶರಣ ಸಾಹಿತ್ಯ ಪರಿಷತ್ತು ನಗರ ಘಟಕದ ಅಧ್ಯಕ್ಷ ಮ.ಗು.ಸದಾನಂದಯ್ಯ, ‘ಸಂಸ್ಥೆಯ ಎಲ್ಲ ವಿದ್ಯಾರ್ಥಿಗಳು ವಚನಗಳನ್ನು ಓದಿ, ಬರೆದು ಬಹುಮಾನ ಪಡೆದಿರುವುದು ವಚನಗಳ ಸಂರಕ್ಷಣೆಯ ಮತ್ತೊಂದು ಭಾಗ’ ಎಂದರು.</p>.<p>ದತ್ತಿ ದಾನಿಗಳಾದ ಮಂಗಳಾ ಮುದ್ದುಮಾದಪ್ಪ, ಡಾ.ಬಿ.ನಿರ್ಮಲಾ ಅವರು ವಿದ್ಯಾರ್ಥಿಗಳಿಗೆ ಜೀವನ ಮೌಲ್ಯಗಳು ಬಗ್ಗೆ ಮಾಹಿತಿ ನೀಡಿದರು.</p>.<p>ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಜೆಎಸ್ಎಸ್ ಸಂಸ್ಥೆಯ ಪ್ರಾಂಶುಪಾಲ ಎಚ್.ಎನ್.ನಿರಂಜನ್ ವಿತರಿಸಿದರು. ಅರಿವಿನ ಮನೆ ಮಹಿಳಾ ಬಳಗದಿಂದ ವಚನ ಗಾಯನ ನಡೆಯಿತು.</p>.<p>ಕದಳಿ ವೇದಿಕೆಯ ಅಧ್ಯಕ್ಷರಾದ ಶಾರದಾ ಶಿವಲಿಂಗ ಸ್ವಾಮಿ, ಟಿ.ಎಸ್.ಕುಮಾರಸ್ವಾಮಿ, ಮಮತಾ, ಎಚ್.ಮುದ್ದು ಮಲ್ಲೇಶ್, ಮಂಜುಳಾ, ಲತಾ, ಸದಾಶಿವ, ಲೋಕೇಶಪ್ಪ, ನಂದೀಶ್, ಚಿನ್ನಸ್ವಾಮಿ, ಮೀನಾ, ವಿಜಯ, ಮಲ್ಲಿಕಾ, ಲಲಿತಾ, ಪಾಟೀಲ್, ಚನ್ನಬಸಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>