ಬೇಲೂರು ತಾಲ್ಲೂಕಿನ ಯಗಚಿ ಜಲಾಶಯದ ಐದು ಕ್ರಸ್ಟ್ಗೇಟ್ಗಳ ಮೂಲಕ ನೀರನ್ನು ನದಿಗೆ ಬಿಡಲಾಯಿತು.
ಸಕಲೇಶಪುರ ತಾಲ್ಲೂಕಿನ ಹೆತ್ತೂರು- ಕುಂಬ್ರಹಳ್ಳಿ ಸಂಪರ್ಕ ರಸ್ತೆಯ ಯಡಕೆರೆ ಗ್ರಾಮದ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪ್ರಜಾವಾಣಿ ಚಿತ್ರ/ಜಗದೀಶ್ ಆರ್.ಹೊರಟ್ಟಿ
ಹಾಸನ ತಾಲ್ಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು ನೂರಾರು ಜನ ಈ ದೃಶ್ಯವನ್ನು ಕಣ್ತುಂಬಿಕೊಂಡರು. ಪ್ರಜಾವಾಣಿ ಚಿತ್ರ/ಅತೀಖುರ್ ರಹಮಾನ್.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ರಾಜ್ಯಹೆದ್ದಾರಿಗೆ ಗುರುವಾರ ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ 70 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದ್ದು ಅಣೆಕಟ್ಟೆಯ ತಗ್ಗಿನಲ್ಲಿರುವ ಸಂಗೀತ ಕಾರಂಜಿ ಸೇತುವೆ ಜಲಾವೃತವಾಗಿದೆ