<p><strong>ಮೈಸೂರು:</strong> ಕಲಬುರಗಿಯ ಆಳಂದ ತಾಲ್ಲೂಕಿನ ಆಳಂದ್ ಫೌಂಡೇಶನ್ ನೀಡುವ ಪ್ರಸಕ್ತ ಸಾಲಿನ ಆದರ್ಶ ಪರಿಸರವಾದಿ ಪ್ರಶಸ್ತಿಗೆ ನಗರದ ಬೋಧಿ ವೃಕ್ಷ ಸೇವಾ ಸಂಸ್ಥೆ ಆಯ್ಕೆಯಾಗಿದೆ.</p>.<p>ಸಂಸ್ಥೆಯಿಂದ ನಡೆದ ಪರಿಸರ ಸಂರಕ್ಷಣೆ ಮತ್ತು ಅದರ ಅಗತ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏ.24ರಂದು ಆಳಂದದ ಎ.ವಿ.ಪಾಟೀಲ್ ಪದವಿ ಕಾಲೇಜಿನಲ್ಲಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.</p>.<p>ಸಂಸ್ಥೆಯು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕಲ್ಯಾಣ ವನ’ ಯೋಜನೆಯನ್ನು ಜಾರಿಗೊಳಿಸಿದ್ದು, 25 ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ಅರಣ್ಯೀಕರಣಕ್ಕೆ ಮುಂದಾಗಿದೆ. ಜನರಲ್ಲೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗಿದೆ.</p>.<p>‘ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಸ್ಯ ಶಾಸ್ತ್ರೀಯ ವನ ಹಾಗೂ ಕೆರೆ ಅಭಿವೃದ್ಧಿಯ ಯೋಜನೆಗಳನ್ನು ಭವಿಷ್ಯದಲ್ಲಿ ಹಮ್ಮಿಕೊಳ್ಳಲು ಆಲೋಚಿಸಿದ್ದೇವೆ. ಪ್ರಸಕ್ತ ಯೋಜನೆಗೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಸಹಕಾರ ನೀಡಿದ್ದಾರೆ. ಈ ಪ್ರಶಸ್ತಿ ಮತ್ತಷ್ಟು ಉತ್ಸಾಹ ನೀಡಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಮೈಸೂರ್ ಸತೀಶ್ ಚಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕಲಬುರಗಿಯ ಆಳಂದ ತಾಲ್ಲೂಕಿನ ಆಳಂದ್ ಫೌಂಡೇಶನ್ ನೀಡುವ ಪ್ರಸಕ್ತ ಸಾಲಿನ ಆದರ್ಶ ಪರಿಸರವಾದಿ ಪ್ರಶಸ್ತಿಗೆ ನಗರದ ಬೋಧಿ ವೃಕ್ಷ ಸೇವಾ ಸಂಸ್ಥೆ ಆಯ್ಕೆಯಾಗಿದೆ.</p>.<p>ಸಂಸ್ಥೆಯಿಂದ ನಡೆದ ಪರಿಸರ ಸಂರಕ್ಷಣೆ ಮತ್ತು ಅದರ ಅಗತ್ಯಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಏ.24ರಂದು ಆಳಂದದ ಎ.ವಿ.ಪಾಟೀಲ್ ಪದವಿ ಕಾಲೇಜಿನಲ್ಲಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.</p>.<p>ಸಂಸ್ಥೆಯು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ‘ಕಲ್ಯಾಣ ವನ’ ಯೋಜನೆಯನ್ನು ಜಾರಿಗೊಳಿಸಿದ್ದು, 25 ಎಕರೆ ಪ್ರದೇಶದಲ್ಲಿ ಗಿಡಗಳನ್ನು ನೆಡುವ ಮೂಲಕ ಅರಣ್ಯೀಕರಣಕ್ಕೆ ಮುಂದಾಗಿದೆ. ಜನರಲ್ಲೂ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಗಿದೆ.</p>.<p>‘ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಸ್ಯ ಶಾಸ್ತ್ರೀಯ ವನ ಹಾಗೂ ಕೆರೆ ಅಭಿವೃದ್ಧಿಯ ಯೋಜನೆಗಳನ್ನು ಭವಿಷ್ಯದಲ್ಲಿ ಹಮ್ಮಿಕೊಳ್ಳಲು ಆಲೋಚಿಸಿದ್ದೇವೆ. ಪ್ರಸಕ್ತ ಯೋಜನೆಗೆ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಸಹಕಾರ ನೀಡಿದ್ದಾರೆ. ಈ ಪ್ರಶಸ್ತಿ ಮತ್ತಷ್ಟು ಉತ್ಸಾಹ ನೀಡಿದೆ’ ಎಂದು ಸಂಸ್ಥೆಯ ಅಧ್ಯಕ್ಷ ಮೈಸೂರ್ ಸತೀಶ್ ಚಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>