<p><strong>ಮೈಸೂರು</strong>: ‘ಮುಡಾದಲ್ಲಿ ವಿರೋಧ ಪಕ್ಷದ ನಾಯಕರಿಗೆ ನಿವೇಶನ ಹಂಚಿಕೆ ಮಾಡಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪಟ್ಟಿ ಬಿಡುಗಡೆ ಮಾಡಿದ್ದು, ಆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಳಪಡಿಸಬೇಕು’ ಎಂದು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಒತ್ತಾಯಿಸಿದರು.</p>.<p>‘ಸಚಿವರು ಆರೋಪಿಸಿರುವಂತೆ ನಾನು ಹಾಗೂ ನನ್ನ ಕುಟುಂಬ ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದಿಲ್ಲ. ನಿವೇಶನಕ್ಕಾಗಿ ಶಿಫಾರಸು ಮಾಡಿಲ್ಲ. ಅದಕ್ಕೆ ದಾಖಲೆ ಕೊಟ್ಟರೆ ಅಷ್ಟೂ ನಿವೇಶನಗಳನ್ನು ಹಿಂತಿರುಗಿಸುತ್ತೇವೆ. ರೇವಣ್ಣ ಪ್ರಕರಣದಲ್ಲಿ ಒಂದೇ ದಿನದಲ್ಲಿ ಎಸ್ಐಟಿ ರಚಿಸಿದಂತೆ ಈ ಪ್ರಕರಣದಲ್ಲೂ ತ್ವರಿತ ತನಿಖೆ ನಡೆಸಬೇಕು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>'ಮಾನನಷ್ಟ ಮೊಕದ್ದಮೆ ಎಚ್ಚರಿಕೆ': ‘ಮುಡಾದಿಂದ ನಾನು ಯಾವುದೇ ನಿವೇಶನ ಪಡೆದಿಲ್ಲ. ಆರೋಪ ಮಾಡಿರುವ ಸಚಿವ ಭೈರತಿ ಸುರೇಶ್ಗೆ ಪತ್ರ ಬರೆದು, ನನ್ನ ಹೆಸರಿಗೆ ಕಳಂಕ ತಂದಿರುವುದಕ್ಕೆ ಕಾರಣ ಕೇಳುತ್ತೇನೆ. ಒಂದು ವಾರದೊಳಗೆ ಉತ್ತರಿಸದಿದ್ದರೆ, ಮಾನನಷ್ಟ ಮೊಕದ್ದಮೆ ಹೂಡುವೆ’ ಎಂದು ಶಾಸಕ ಜಿ.ಟಿ. ದೇವೇಗೌಡ ಎಚ್ಚರಿಸಿದರು.</p>.<p>‘ಸಚಿವರು ಪ್ರಾಮಾಣಿಕವಾಗಿ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿದ್ದರೆ ಪ್ರಮಾದವಾಗುತ್ತಿರಲಿಲ್ಲ. ಸಿದ್ದರಾಮಯ್ಯ ಅಂತಹವರು ಸುಳಿಯಲ್ಲಿ ಸಿಲುಕುತ್ತಿರಲಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಡಾದಲ್ಲಿ ವಿರೋಧ ಪಕ್ಷದ ನಾಯಕರಿಗೆ ನಿವೇಶನ ಹಂಚಿಕೆ ಮಾಡಿರುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಪಟ್ಟಿ ಬಿಡುಗಡೆ ಮಾಡಿದ್ದು, ಆ ಪ್ರಕರಣವನ್ನು ಎಸ್ಐಟಿ ತನಿಖೆಗೆ ಒಳಪಡಿಸಬೇಕು’ ಎಂದು ಜೆಡಿಎಸ್ ಮುಖಂಡ ಸಾ.ರಾ. ಮಹೇಶ್ ಒತ್ತಾಯಿಸಿದರು.</p>.<p>‘ಸಚಿವರು ಆರೋಪಿಸಿರುವಂತೆ ನಾನು ಹಾಗೂ ನನ್ನ ಕುಟುಂಬ ಮುಡಾದಿಂದ ಅಕ್ರಮವಾಗಿ ನಿವೇಶನ ಪಡೆದಿಲ್ಲ. ನಿವೇಶನಕ್ಕಾಗಿ ಶಿಫಾರಸು ಮಾಡಿಲ್ಲ. ಅದಕ್ಕೆ ದಾಖಲೆ ಕೊಟ್ಟರೆ ಅಷ್ಟೂ ನಿವೇಶನಗಳನ್ನು ಹಿಂತಿರುಗಿಸುತ್ತೇವೆ. ರೇವಣ್ಣ ಪ್ರಕರಣದಲ್ಲಿ ಒಂದೇ ದಿನದಲ್ಲಿ ಎಸ್ಐಟಿ ರಚಿಸಿದಂತೆ ಈ ಪ್ರಕರಣದಲ್ಲೂ ತ್ವರಿತ ತನಿಖೆ ನಡೆಸಬೇಕು’ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.</p>.<p>'ಮಾನನಷ್ಟ ಮೊಕದ್ದಮೆ ಎಚ್ಚರಿಕೆ': ‘ಮುಡಾದಿಂದ ನಾನು ಯಾವುದೇ ನಿವೇಶನ ಪಡೆದಿಲ್ಲ. ಆರೋಪ ಮಾಡಿರುವ ಸಚಿವ ಭೈರತಿ ಸುರೇಶ್ಗೆ ಪತ್ರ ಬರೆದು, ನನ್ನ ಹೆಸರಿಗೆ ಕಳಂಕ ತಂದಿರುವುದಕ್ಕೆ ಕಾರಣ ಕೇಳುತ್ತೇನೆ. ಒಂದು ವಾರದೊಳಗೆ ಉತ್ತರಿಸದಿದ್ದರೆ, ಮಾನನಷ್ಟ ಮೊಕದ್ದಮೆ ಹೂಡುವೆ’ ಎಂದು ಶಾಸಕ ಜಿ.ಟಿ. ದೇವೇಗೌಡ ಎಚ್ಚರಿಸಿದರು.</p>.<p>‘ಸಚಿವರು ಪ್ರಾಮಾಣಿಕವಾಗಿ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಂಡಿದ್ದರೆ ಪ್ರಮಾದವಾಗುತ್ತಿರಲಿಲ್ಲ. ಸಿದ್ದರಾಮಯ್ಯ ಅಂತಹವರು ಸುಳಿಯಲ್ಲಿ ಸಿಲುಕುತ್ತಿರಲಿಲ್ಲ’ ಎಂದು ಟೀಕಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>