<p><strong>ಮೈಸೂರು:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದೆ. ನೆರೆಯ ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಪರಿಣಾಮ, ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 70ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.</p>.<p>ಕಪಿಲಾ ನದಿಯಲ್ಲಿ ಪ್ರವಾಹ ಹೆಚ್ಚಿದ್ದರಿಂದ, ನಂಜನಗೂಡು ಹೊರವಲಯದ ಮಲ್ಲನ ಮೂಲೆ ಮಠದ ಬಳಿ ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.</p>.<p>ಹೆದ್ದಾರಿಯಲ್ಲಿ 4 ಅಡಿಗೂ ಹೆಚ್ಚು ನೀರು ಬಂದಿದ್ದು, ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.</p><p>ಮೈಸೂರಿನಿಂದ ನಂಜನಗೂಡಿಗೆ ತೆರಳುವ ವಾಹನಗಳನ್ನು ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬ್ಯಾರಿಕೇಡ್ ಅಳವಡಿಸಿ ತಡೆಯಲಾಗಿದೆ. ಅಡಕನಹಳ್ಳಿ ಮಾರ್ಗವಾಗಿ ನಂಜನಗೂಡಿಗೆ ಸಂಚರಿಸುವಂತೆ ತಿಳಿಸಲಾಗುತ್ತಿದೆ. ನಂಜನಗೂಡಿನಿಂದ ಮೈಸೂರಿಗೆ ತೆರಳುವ ವಾಹನಗಳು ತಾಂಡವಪುರ ಮೂಲಕ ಹೆಜ್ಜಿಗೆ ಸೇತುವೆ ಮೂಲಕ ಸಂಚರಿಸಲು ತಿಳಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದೆ. ನೆರೆಯ ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಪರಿಣಾಮ, ಕಬಿನಿ ಜಲಾಶಯದಿಂದ ಕಪಿಲಾ ನದಿಗೆ 70ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದ್ದು, ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.</p>.<p>ಕಪಿಲಾ ನದಿಯಲ್ಲಿ ಪ್ರವಾಹ ಹೆಚ್ಚಿದ್ದರಿಂದ, ನಂಜನಗೂಡು ಹೊರವಲಯದ ಮಲ್ಲನ ಮೂಲೆ ಮಠದ ಬಳಿ ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.</p>.<p>ಹೆದ್ದಾರಿಯಲ್ಲಿ 4 ಅಡಿಗೂ ಹೆಚ್ಚು ನೀರು ಬಂದಿದ್ದು, ಈ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.</p><p>ಮೈಸೂರಿನಿಂದ ನಂಜನಗೂಡಿಗೆ ತೆರಳುವ ವಾಹನಗಳನ್ನು ಅಡಕನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಬ್ಯಾರಿಕೇಡ್ ಅಳವಡಿಸಿ ತಡೆಯಲಾಗಿದೆ. ಅಡಕನಹಳ್ಳಿ ಮಾರ್ಗವಾಗಿ ನಂಜನಗೂಡಿಗೆ ಸಂಚರಿಸುವಂತೆ ತಿಳಿಸಲಾಗುತ್ತಿದೆ. ನಂಜನಗೂಡಿನಿಂದ ಮೈಸೂರಿಗೆ ತೆರಳುವ ವಾಹನಗಳು ತಾಂಡವಪುರ ಮೂಲಕ ಹೆಜ್ಜಿಗೆ ಸೇತುವೆ ಮೂಲಕ ಸಂಚರಿಸಲು ತಿಳಿಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>