<p><strong>ಮೈಸೂರು:</strong> ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಭಾನುವಾರ ಬೆಳಿಗ್ಗೆ ಇಲ್ಲಿನ ಕುಕ್ಕರಹಳ್ಳಿ ಕೆರೆಗೆ ಭೇಟಿ ನೀಡಿ ವಾಯುವಿಹಾರಿಗಳಿಂದ ಮತ ಯಾಚನೆ ಮಾಡಿದರು.</p><p>ಯುವಕ, ಯುವತಿಯರು, ಮಹಿಳೆಯರು ಹಾಗೂ ವೃದ್ಧರ ಬಳಿ ತೆರಳಿ ಮತ ಕೇಳಿದರು. ಕೆಲವರು, ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು.</p><p>ಬಳಿಕ ಸಮೀಪದ ರಸ್ತೆ ಬದಿಯ ಫಾಸ್ಟ್ಫುಡ್ನಲ್ಲಿ ಅಭಿಮಾನಿಗಳೊಂದಿಗೆ ಉಪಾಹಾರ ಸೇವಿಸಿದರು.</p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಎಲ್. ಭಾಸ್ಕರ್ ಗೌಡ, ಮುಖಂಡರಾದ ಆರ್.ಗಿರೀಶ್, ಬಿ.ಕೆ.ಪ್ರಕಾಶ್, ಪುರುಷೋತ್ತಮ್, ಬೀರಿಹುಂಡಿ ಬಸವಣ್ಣ, ಬಿ.ಎಂ. ರಾಮು ಪಾಲ್ಗೊಂಡಿದ್ದರು.</p><p><strong>ಕನಕಗಿರಿಯಲ್ಲಿ: </strong>ಬಳಿಕ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನಕಗಿರಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ನಿವಾಸಿಗಳಿಂದ ಮತ ಯಾಚಿಸಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಪಂಚ ಗ್ಯಾರಂಟಿಗಳಿಂದ ಎಲ್ಲರಿಗೂ ಉಪಯೋಗ ಆಗುತ್ತಿದೆ. ಕೇಂದ್ರದಲ್ಲೂ ನಮ್ಮದೇ ಸರ್ಕಾರ ಬಂದರೆ ಮತ್ತಷ್ಟು ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡಲಿದ್ದೇವೆ. ಸಾಮಾನ್ಯ ಕಾರ್ಯಕರ್ತನಾದ ನನಗೊಂದು ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.</p><p>ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಮುಖಂಡರಾದ ಎಚ್.ವಿ ರಾಜೀವ್, ಸೋಮಶೇಖರ್, ಭವ್ಯಾ, ಬಿ.ಎಂ. ರಾಮು, ಗಿರೀಶ್ ಹಾಗೂ ವೆಂಕಟೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು– ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ ಭಾನುವಾರ ಬೆಳಿಗ್ಗೆ ಇಲ್ಲಿನ ಕುಕ್ಕರಹಳ್ಳಿ ಕೆರೆಗೆ ಭೇಟಿ ನೀಡಿ ವಾಯುವಿಹಾರಿಗಳಿಂದ ಮತ ಯಾಚನೆ ಮಾಡಿದರು.</p><p>ಯುವಕ, ಯುವತಿಯರು, ಮಹಿಳೆಯರು ಹಾಗೂ ವೃದ್ಧರ ಬಳಿ ತೆರಳಿ ಮತ ಕೇಳಿದರು. ಕೆಲವರು, ಅವರೊಂದಿಗೆ ಸೆಲ್ಫಿ ತೆಗೆದುಕೊಂಡರು.</p><p>ಬಳಿಕ ಸಮೀಪದ ರಸ್ತೆ ಬದಿಯ ಫಾಸ್ಟ್ಫುಡ್ನಲ್ಲಿ ಅಭಿಮಾನಿಗಳೊಂದಿಗೆ ಉಪಾಹಾರ ಸೇವಿಸಿದರು.</p><p>ಪಕ್ಷದ ಪ್ರಧಾನ ಕಾರ್ಯದರ್ಶಿ ಎಲ್. ಭಾಸ್ಕರ್ ಗೌಡ, ಮುಖಂಡರಾದ ಆರ್.ಗಿರೀಶ್, ಬಿ.ಕೆ.ಪ್ರಕಾಶ್, ಪುರುಷೋತ್ತಮ್, ಬೀರಿಹುಂಡಿ ಬಸವಣ್ಣ, ಬಿ.ಎಂ. ರಾಮು ಪಾಲ್ಗೊಂಡಿದ್ದರು.</p><p><strong>ಕನಕಗಿರಿಯಲ್ಲಿ: </strong>ಬಳಿಕ ಅವರು ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕನಕಗಿರಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ನಿವಾಸಿಗಳಿಂದ ಮತ ಯಾಚಿಸಿದರು.</p><p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪರ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ. ಪಂಚ ಗ್ಯಾರಂಟಿಗಳಿಂದ ಎಲ್ಲರಿಗೂ ಉಪಯೋಗ ಆಗುತ್ತಿದೆ. ಕೇಂದ್ರದಲ್ಲೂ ನಮ್ಮದೇ ಸರ್ಕಾರ ಬಂದರೆ ಮತ್ತಷ್ಟು ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡಲಿದ್ದೇವೆ. ಸಾಮಾನ್ಯ ಕಾರ್ಯಕರ್ತನಾದ ನನಗೊಂದು ಅವಕಾಶ ಮಾಡಿಕೊಡಬೇಕು’ ಎಂದು ಕೋರಿದರು.</p><p>ಮಾಜಿ ಶಾಸಕ ಎಂ.ಕೆ ಸೋಮಶೇಖರ್, ಮುಖಂಡರಾದ ಎಚ್.ವಿ ರಾಜೀವ್, ಸೋಮಶೇಖರ್, ಭವ್ಯಾ, ಬಿ.ಎಂ. ರಾಮು, ಗಿರೀಶ್ ಹಾಗೂ ವೆಂಕಟೇಶ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>