<p><strong>ಮೈಸೂರು: ‘</strong>ಹೊಸ ತಲೆಮಾರಿನವರು ಸಂಸ್ಕೃತಿ, ಪರಂಪರೆ ಮರೆಯುತ್ತಿದ್ದಾರೆ. ಹೀಗಾಗಿ ಹಿರಿಯರನ್ನು ಸ್ಮರಿಸುವ ಕೆಲಸ ನಡೆಯಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ವಿಜಯನಗರದಲ್ಲಿ ಹೊಯ್ಸಳ ಕರ್ನಾಟಕ ಸಂಘವು ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಸಮುದಾಯದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮುದಾಯವು ವಿಶಿಷ್ಟ ಆಚರಣೆ, ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ. ಆದರಾತಿಥ್ಯ, ಸ್ವಾಭಿಮಾನಕ್ಕೆ ಹೆಸರುವಾಸಿಯಾಗಿದೆ. ಆಡುನುಡಿಯೂ ವಿಭಿನ್ನತೆಯನ್ನು ಹೊಂದಿದೆ’ ಎಂದರು.</p>.<p>‘ಹೊಯ್ಸಳ ಕರ್ನಾಟಕದವರು ಎಲ್ಲ ಸಮುದಾಯದವರೊಡನೆ ಸೌಹಾರ್ದವನ್ನು ಬೆಳೆಸಿಕೊಂಡು ಬಂದಿದ್ದಾರೆ. ನಾಡಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಅರಮನೆ ಹಾಗೂ ಸಮುದಾಯದೊಂದಿಗೆ ಅವಿನಾಭಾವ ಸಂಬಂಧವಿದೆ’ ಎಂದು ಸ್ಮರಿಸಿದರು.</p>.<p>‘ಮುಂದಿನ ಐದು ವರ್ಷದಲ್ಲಿ ಮೈಸೂರು ಪಾರಂಪರಿಕ ನಗರವಾಗಿಯೇ ಉಳಿಯಲು ಜನರ ಸಹಕಾರ ಅಗತ್ಯ. ಲಕ್ಷ್ಮೀಪುರಂ ಕಟ್ಟಡವು ಪಾರಂಪರಿಕವಾಗಿದೆ. ಅದರೊಂದಿಗೆ ನೆನಪುಗಳಿವೆ. ಸಮುದಾಯವು ನಡೆಸಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗೊತ್ತಿದ್ದು, ಸಂಘದ ಕಾರ್ಯಗಳಿಗೆ ನೆರವಾಗುವೆ’ ಎಂದರು. </p>.<p>80 ವರ್ಷ ಮೇಲ್ಪಟ್ಟ 80 ಹಿರಿಯರನ್ನು ಸನ್ಮಾನಿಸಲಾಯಿತು. ಸಂಸ್ಥಾಪಕರ 20 ಕುಟುಂಬದ ಸದಸ್ಯರಿಗೆ ಗೌರವ, 20ಕ್ಕೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧನೆ ಮಾಡಿದ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.</p>.<p>ಶಾಸಕ ಟಿ.ಎಸ್.ಶ್ರೀವತ್ಸ, ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ, ಮೈಸೂರು ಬ್ರಾಹ್ಮಣ ಸಭಾದ ಜಿಲ್ಲಾಧ್ಯಕ್ಷ ಡಿ.ಟಿ.ಪ್ರಕಾಶ್, ಲೇಖಕ ಎ.ವಿ.ಸೂರ್ಯನಾರಾಯಣ ಸ್ವಾಮಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: ‘</strong>ಹೊಸ ತಲೆಮಾರಿನವರು ಸಂಸ್ಕೃತಿ, ಪರಂಪರೆ ಮರೆಯುತ್ತಿದ್ದಾರೆ. ಹೀಗಾಗಿ ಹಿರಿಯರನ್ನು ಸ್ಮರಿಸುವ ಕೆಲಸ ನಡೆಯಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.</p>.<p>ವಿಜಯನಗರದಲ್ಲಿ ಹೊಯ್ಸಳ ಕರ್ನಾಟಕ ಸಂಘವು ಸಂಸ್ಥಾಪಕರ ದಿನಾಚರಣೆ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಸಮುದಾಯದ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಸಮುದಾಯವು ವಿಶಿಷ್ಟ ಆಚರಣೆ, ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ಪಾಲಿಸಿಕೊಂಡು ಬಂದಿದೆ. ಆದರಾತಿಥ್ಯ, ಸ್ವಾಭಿಮಾನಕ್ಕೆ ಹೆಸರುವಾಸಿಯಾಗಿದೆ. ಆಡುನುಡಿಯೂ ವಿಭಿನ್ನತೆಯನ್ನು ಹೊಂದಿದೆ’ ಎಂದರು.</p>.<p>‘ಹೊಯ್ಸಳ ಕರ್ನಾಟಕದವರು ಎಲ್ಲ ಸಮುದಾಯದವರೊಡನೆ ಸೌಹಾರ್ದವನ್ನು ಬೆಳೆಸಿಕೊಂಡು ಬಂದಿದ್ದಾರೆ. ನಾಡಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಅರಮನೆ ಹಾಗೂ ಸಮುದಾಯದೊಂದಿಗೆ ಅವಿನಾಭಾವ ಸಂಬಂಧವಿದೆ’ ಎಂದು ಸ್ಮರಿಸಿದರು.</p>.<p>‘ಮುಂದಿನ ಐದು ವರ್ಷದಲ್ಲಿ ಮೈಸೂರು ಪಾರಂಪರಿಕ ನಗರವಾಗಿಯೇ ಉಳಿಯಲು ಜನರ ಸಹಕಾರ ಅಗತ್ಯ. ಲಕ್ಷ್ಮೀಪುರಂ ಕಟ್ಟಡವು ಪಾರಂಪರಿಕವಾಗಿದೆ. ಅದರೊಂದಿಗೆ ನೆನಪುಗಳಿವೆ. ಸಮುದಾಯವು ನಡೆಸಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಗೊತ್ತಿದ್ದು, ಸಂಘದ ಕಾರ್ಯಗಳಿಗೆ ನೆರವಾಗುವೆ’ ಎಂದರು. </p>.<p>80 ವರ್ಷ ಮೇಲ್ಪಟ್ಟ 80 ಹಿರಿಯರನ್ನು ಸನ್ಮಾನಿಸಲಾಯಿತು. ಸಂಸ್ಥಾಪಕರ 20 ಕುಟುಂಬದ ಸದಸ್ಯರಿಗೆ ಗೌರವ, 20ಕ್ಕೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧನೆ ಮಾಡಿದ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು.</p>.<p>ಶಾಸಕ ಟಿ.ಎಸ್.ಶ್ರೀವತ್ಸ, ಸಂಘದ ಅಧ್ಯಕ್ಷ ಕೆ.ಆರ್.ಸತ್ಯನಾರಾಯಣ, ಮೈಸೂರು ಬ್ರಾಹ್ಮಣ ಸಭಾದ ಜಿಲ್ಲಾಧ್ಯಕ್ಷ ಡಿ.ಟಿ.ಪ್ರಕಾಶ್, ಲೇಖಕ ಎ.ವಿ.ಸೂರ್ಯನಾರಾಯಣ ಸ್ವಾಮಿ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>