<p><strong>ಮೈಸೂರು:</strong> ‘ನಾಟಕ ಕಲಾವಿದರು ಸಂಕಷ್ಟದಲ್ಲಿದ್ದು, ಪಿಂಚಣಿ, ವಸತಿ ಸೌಲಭ್ಯಗಳು ಇಲ್ಲ. ಸರ್ಕಾರ ಕೂಡಲೇ ಅವರನ್ನು ಗುರುತಿಸಿ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಸೌಭಾಗ್ಯಮೂರ್ತಿ ಆಗ್ರಹಿಸಿದರು.</p>.<p>ಮೈಸೂರು ಜಿಲ್ಲಾ ರಂಗಭೂಮಿ ವೃತ್ತಿ ಕಲಾವಿದೆಯರ ಸಂಘವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರ ಪುರಭವನದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಎಸ್.ಎಸ್.ಗಾಯಿತ್ರಿ ನೆನಪಿನ ನಾಟಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸುತ್ತಿಲ್ಲ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.</p>.<p>ಜಲವಾಸುದೇವ ನಾಟಕ ಸಭಾ ಟ್ರಸ್ಟ್ ಅಧ್ಯಕ್ಷ ಓಂ ಶ್ರೀನಿವಾಸ್ ಮಾತನಾಡಿ, ‘ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 30 ವರ್ಷಗಳಿಂದ ನಾಟಕಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ರಂಗಕಲಾವಿದೆ ಕೆ.ಎಂ.ಗಿರಿಜಮ್ಮ ಅವರನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷೆ ಎಸ್. ವಸಂತಕೃಷ್ಣ, ಕಾರ್ಯದರ್ಶಿ ಎನ್.ಲೀಲಾವತಿ, ಬಿ.ಎ. ಶಾಂತದೇವಿ, ಇಂದ್ರಮ್ಮ , ಜಲವಾಸುದೇವ ನಾಟಕ ಸಭಾ ಟ್ರಸ್ಟ್ನ ಸತ್ಯನಾರಾಯಣ ಜಿ. ಹಾಜರಿದ್ದರು.</p>.<p>ಕಾರ್ಯಕ್ರಮದ ಬಳಿಕ ಜಲವಾಸುದೇವ ನಾಟಕ ಸಭಾ ಟ್ರಸ್ಟ್ ನೇತೃತ್ವದಲ್ಲಿ ಮಕ್ಕಳು ‘ಶ್ರೀ ಕೃಷ್ಣಲೀಲೆ’ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನಾಟಕ ಕಲಾವಿದರು ಸಂಕಷ್ಟದಲ್ಲಿದ್ದು, ಪಿಂಚಣಿ, ವಸತಿ ಸೌಲಭ್ಯಗಳು ಇಲ್ಲ. ಸರ್ಕಾರ ಕೂಡಲೇ ಅವರನ್ನು ಗುರುತಿಸಿ ಸೌಲಭ್ಯ ಕಲ್ಪಿಸಿಕೊಡಬೇಕು’ ಎಂದು ಮಹಾನಗರ ಪಾಲಿಕೆ ಮಾಜಿ ಸದಸ್ಯೆ ಸೌಭಾಗ್ಯಮೂರ್ತಿ ಆಗ್ರಹಿಸಿದರು.</p>.<p>ಮೈಸೂರು ಜಿಲ್ಲಾ ರಂಗಭೂಮಿ ವೃತ್ತಿ ಕಲಾವಿದೆಯರ ಸಂಘವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಭಾನುವಾರ ಪುರಭವನದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಎಸ್.ಎಸ್.ಗಾಯಿತ್ರಿ ನೆನಪಿನ ನಾಟಕೋತ್ಸವದಲ್ಲಿ ಅವರು ಮಾತನಾಡಿದರು.</p>.<p>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸುತ್ತಿಲ್ಲ. ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.</p>.<p>ಜಲವಾಸುದೇವ ನಾಟಕ ಸಭಾ ಟ್ರಸ್ಟ್ ಅಧ್ಯಕ್ಷ ಓಂ ಶ್ರೀನಿವಾಸ್ ಮಾತನಾಡಿ, ‘ಕಲಾವಿದರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 30 ವರ್ಷಗಳಿಂದ ನಾಟಕಗಳನ್ನು ಆಯೋಜಿಸುತ್ತಾ ಬಂದಿದ್ದೇವೆ. ಕಲಾವಿದರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ರಂಗಕಲಾವಿದೆ ಕೆ.ಎಂ.ಗಿರಿಜಮ್ಮ ಅವರನ್ನು ಅಭಿನಂದಿಸಲಾಯಿತು. ಸಂಘದ ಅಧ್ಯಕ್ಷೆ ಎಸ್. ವಸಂತಕೃಷ್ಣ, ಕಾರ್ಯದರ್ಶಿ ಎನ್.ಲೀಲಾವತಿ, ಬಿ.ಎ. ಶಾಂತದೇವಿ, ಇಂದ್ರಮ್ಮ , ಜಲವಾಸುದೇವ ನಾಟಕ ಸಭಾ ಟ್ರಸ್ಟ್ನ ಸತ್ಯನಾರಾಯಣ ಜಿ. ಹಾಜರಿದ್ದರು.</p>.<p>ಕಾರ್ಯಕ್ರಮದ ಬಳಿಕ ಜಲವಾಸುದೇವ ನಾಟಕ ಸಭಾ ಟ್ರಸ್ಟ್ ನೇತೃತ್ವದಲ್ಲಿ ಮಕ್ಕಳು ‘ಶ್ರೀ ಕೃಷ್ಣಲೀಲೆ’ ನಾಟಕ ಪ್ರದರ್ಶಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>