<p><strong>ಮೈಸೂರು:</strong> ‘ಹೆಣ್ಣು ಭ್ರೂಣಹತ್ಯೆ ತಡೆಗೆ ಕಾನೂನುಗಳು ಮತ್ತಷ್ಟು ಬಿಗಿಯಾಗಬೇಕು’ ಎಂದು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಜೆ. ಸೋಮಶೇಖರ್ ಅಭಿಪ್ರಾಯಪಟ್ಟರು.</p>.<p>ಮಹಾಜನ ಕಾನೂನು ಕಾಲೇಜಿನಲ್ಲಿ ಶನಿವಾರ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಭ್ರೂಣ ಪತ್ತೆ ಮಾಡುವ ಯಂತ್ರಗಳನ್ನು ಆಲೆಮನೆ, ಜಮೀನುಗಳಲ್ಲೂ ಇಟ್ಟುಕೊಂಡಿರುವುದು ಕಂಡು ಬಂದಿದೆ. ಇವುಗಳನ್ನು ತಡೆಯಲು ಕಾನೂನು ಮತ್ತಷ್ಟು ಕಠಿಣವಾಗಬೇಕು’ ಎಂದರು.</p>.<p>‘ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲರಿಗೂ ಗಂಡು ಮಗುವೇ ಬೇಕು. ಒಂದೇ ಮಗು ಬೇಕು. ಹೆಣ್ಣು ಮಗು ಬೇಡ ಎಂಬ ಭಾವನೆ ಇದೆ. ಇದು ಸರಿಯಲ್ಲ’ ಎಂದು ಹೇಳಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ‘ಪ್ರಕರಣ ಇತ್ಯರ್ಥಕ್ಕಾಗಿ ಮಧ್ಯಸ್ಥಿಕೆ ಕೌಶಲ ಬೆಳೆಸಿಕೊಳ್ಳಬೇಕು. ಪತ್ರಿಕೆಗಳಲ್ಲಿ ಕಾನೂನು ವಿಚಾರಗಳನ್ನು ಓದಿ ಮನನ ಮಾಡಿಕೊಂಡು ಪ್ರತಿಕ್ರಿಯೆ ನೀಡಬೇಕು. ಬಿಡುವಿದ್ದಾಗ ನ್ಯಾಯಾಲಯಗಳಿಗೆ ಭೇಟಿ ನೀಡಿ, ಕಾರ್ಯಕಲಾಪ ವೀಕ್ಷಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಹಾಜನ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಟಿ. ವಿಜಯಲಕ್ಷ್ಮಿ ಮುರಳೀಧರ್ ಮಾತನಾಡಿ, ‘ಮುಂದಿನ ವರ್ಷದಿಂದ ಬಿಬಿಎ, ಎಲ್ಎಲ್ಬಿ ಕೋರ್ಸ್ ಆರಂಭಿಸಲಾಗುವುದು’ ಎಂದರು.</p>.<p>ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ತೇಜಸ್ವಿನಿ, ಪ್ರಾಂಶುಪಾಲೆ ಕೆ. ಸೌಮ್ಯಾ, ಸಹಾಯಕ ಪ್ರಾಧ್ಯಾಪಕಿಯರಾದ ಎಂ. ಭವ್ಯಾ, ರಶ್ಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಹೆಣ್ಣು ಭ್ರೂಣಹತ್ಯೆ ತಡೆಗೆ ಕಾನೂನುಗಳು ಮತ್ತಷ್ಟು ಬಿಗಿಯಾಗಬೇಕು’ ಎಂದು ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ.ಜೆ. ಸೋಮಶೇಖರ್ ಅಭಿಪ್ರಾಯಪಟ್ಟರು.</p>.<p>ಮಹಾಜನ ಕಾನೂನು ಕಾಲೇಜಿನಲ್ಲಿ ಶನಿವಾರ ಅಭಿವಿನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಭ್ರೂಣ ಪತ್ತೆ ಮಾಡುವ ಯಂತ್ರಗಳನ್ನು ಆಲೆಮನೆ, ಜಮೀನುಗಳಲ್ಲೂ ಇಟ್ಟುಕೊಂಡಿರುವುದು ಕಂಡು ಬಂದಿದೆ. ಇವುಗಳನ್ನು ತಡೆಯಲು ಕಾನೂನು ಮತ್ತಷ್ಟು ಕಠಿಣವಾಗಬೇಕು’ ಎಂದರು.</p>.<p>‘ಪುರುಷ ಪ್ರಧಾನ ಸಮಾಜದಲ್ಲಿ ಎಲ್ಲರಿಗೂ ಗಂಡು ಮಗುವೇ ಬೇಕು. ಒಂದೇ ಮಗು ಬೇಕು. ಹೆಣ್ಣು ಮಗು ಬೇಡ ಎಂಬ ಭಾವನೆ ಇದೆ. ಇದು ಸರಿಯಲ್ಲ’ ಎಂದು ಹೇಳಿದರು.</p>.<p>ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಮಾತನಾಡಿ, ‘ಪ್ರಕರಣ ಇತ್ಯರ್ಥಕ್ಕಾಗಿ ಮಧ್ಯಸ್ಥಿಕೆ ಕೌಶಲ ಬೆಳೆಸಿಕೊಳ್ಳಬೇಕು. ಪತ್ರಿಕೆಗಳಲ್ಲಿ ಕಾನೂನು ವಿಚಾರಗಳನ್ನು ಓದಿ ಮನನ ಮಾಡಿಕೊಂಡು ಪ್ರತಿಕ್ರಿಯೆ ನೀಡಬೇಕು. ಬಿಡುವಿದ್ದಾಗ ನ್ಯಾಯಾಲಯಗಳಿಗೆ ಭೇಟಿ ನೀಡಿ, ಕಾರ್ಯಕಲಾಪ ವೀಕ್ಷಿಸಬೇಕು’ ಎಂದು ಸಲಹೆ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಮಹಾಜನ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಟಿ. ವಿಜಯಲಕ್ಷ್ಮಿ ಮುರಳೀಧರ್ ಮಾತನಾಡಿ, ‘ಮುಂದಿನ ವರ್ಷದಿಂದ ಬಿಬಿಎ, ಎಲ್ಎಲ್ಬಿ ಕೋರ್ಸ್ ಆರಂಭಿಸಲಾಗುವುದು’ ಎಂದರು.</p>.<p>ಕಾಲೇಜಿನ ಆಡಳಿತ ಮಂಡಳಿ ಸದಸ್ಯೆ ತೇಜಸ್ವಿನಿ, ಪ್ರಾಂಶುಪಾಲೆ ಕೆ. ಸೌಮ್ಯಾ, ಸಹಾಯಕ ಪ್ರಾಧ್ಯಾಪಕಿಯರಾದ ಎಂ. ಭವ್ಯಾ, ರಶ್ಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>