<p>ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿರುವ ನಮ್ಮ ದೇಶದಲ್ಲಿ ಜನತಂತ್ರದ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅದು ನಮ್ಮ ಆದ್ಯ ಕರ್ತವ್ಯವೂ ಹೌದು.</p>.<p>ಈ ಸಮಯದಲ್ಲಿ ಮತದಾರ ಅತ್ಯಂತ ಜಾಗರೂಕವಾಗಿ ಹಕ್ಕು ಚಲಾಯಿಸಬೇಕು. ಪ್ರತಿ ಮತವೂ ನಮ್ಮ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂಬುದನ್ನು ಎಲ್ಲರೂ ಮನಗಾಣಬೇಕು. ಯಾವುದೇ ಆಸೆ–ಆಮಿಷಕ್ಕೆ ಒಳಗಾಗದೇ ಸೂಕ್ತ ಎನಿಸುವವರಿಗೆ ಮತದಾನ ಮಾಡಬೇಕು. ಈ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕು. ಇತರರಿಗೂ ಪ್ರೇರಣೆ ನೀಡಬೇಕು.</p>.<p>ಇಂದಿನ ವ್ಯವಸ್ಥೆ ನೋಡಿ ಎಷ್ಟೋ ಮತದಾರರು ಭ್ರಮನಿರಸನಕ್ಕೆ ಒಳಗಾಗಿ ಮತದಾನದಿಂದ ದೂರ ಉಳಿಯಬಹುದು. ಈ ಮನಸ್ಥಿತಿ ಉಳ್ಳವರಿಗೆ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಿ ಮತಗಟ್ಟೆಗೆ ಕರೆತರುವ ಕಾರ್ಯ ಜರೂರಾಗಿ ಆಗಬೇಕಾಗಿದೆ. ಎಲ್ಲರೂ ತಮ್ಮ ಹಕ್ಕು ಚಲಾಯಿಸಿದಾಗಲೇ ಪ್ರಜಾಪ್ರಭುತ್ವಕ್ಕೆ ಸೊಬಗು. ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು.</p>.<p><strong>–ಸಾಲುಂಡಿ ದೊರೆಸ್ವಾಮಿ, ಉಪಾಧ್ಯಕ್ಷ, ಸರ್ಕಾರಿ ನೌಕರರ ಸಂಘ, ಮೈಸೂರು ಜಿಲ್ಲಾ ಘಟಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿರುವ ನಮ್ಮ ದೇಶದಲ್ಲಿ ಜನತಂತ್ರದ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಅರ್ಹ ಮತದಾರರೆಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಅದು ನಮ್ಮ ಆದ್ಯ ಕರ್ತವ್ಯವೂ ಹೌದು.</p>.<p>ಈ ಸಮಯದಲ್ಲಿ ಮತದಾರ ಅತ್ಯಂತ ಜಾಗರೂಕವಾಗಿ ಹಕ್ಕು ಚಲಾಯಿಸಬೇಕು. ಪ್ರತಿ ಮತವೂ ನಮ್ಮ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂಬುದನ್ನು ಎಲ್ಲರೂ ಮನಗಾಣಬೇಕು. ಯಾವುದೇ ಆಸೆ–ಆಮಿಷಕ್ಕೆ ಒಳಗಾಗದೇ ಸೂಕ್ತ ಎನಿಸುವವರಿಗೆ ಮತದಾನ ಮಾಡಬೇಕು. ಈ ಮೂಲಕ ಜವಾಬ್ದಾರಿಯನ್ನು ನಿರ್ವಹಿಸಬೇಕು. ಇತರರಿಗೂ ಪ್ರೇರಣೆ ನೀಡಬೇಕು.</p>.<p>ಇಂದಿನ ವ್ಯವಸ್ಥೆ ನೋಡಿ ಎಷ್ಟೋ ಮತದಾರರು ಭ್ರಮನಿರಸನಕ್ಕೆ ಒಳಗಾಗಿ ಮತದಾನದಿಂದ ದೂರ ಉಳಿಯಬಹುದು. ಈ ಮನಸ್ಥಿತಿ ಉಳ್ಳವರಿಗೆ ಮತದಾನದ ಪ್ರಾಮುಖ್ಯತೆ ಬಗ್ಗೆ ಅರಿವು ಮೂಡಿಸಿ ಮತಗಟ್ಟೆಗೆ ಕರೆತರುವ ಕಾರ್ಯ ಜರೂರಾಗಿ ಆಗಬೇಕಾಗಿದೆ. ಎಲ್ಲರೂ ತಮ್ಮ ಹಕ್ಕು ಚಲಾಯಿಸಿದಾಗಲೇ ಪ್ರಜಾಪ್ರಭುತ್ವಕ್ಕೆ ಸೊಬಗು. ಈ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು.</p>.<p><strong>–ಸಾಲುಂಡಿ ದೊರೆಸ್ವಾಮಿ, ಉಪಾಧ್ಯಕ್ಷ, ಸರ್ಕಾರಿ ನೌಕರರ ಸಂಘ, ಮೈಸೂರು ಜಿಲ್ಲಾ ಘಟಕ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>