<p><strong>ನಂಜನಗೂಡು: ‘</strong>ದೇಶದ ಆಡಳಿತ ಚುಕ್ಕಾಣಿ ಯಾರ ಕೈಗೆ ಕೊಡಬೇಕು ಎಂದು ನಿರ್ಧರಿಸುವ ಮಹತ್ವದ ಚುನಾವಣೆಯಲ್ಲಿ ಬಿಜೆಪಿಗೆ ಮರುಳಾಗದೆ, ಸುಳ್ಳುಗಳಿಗೆ ಬಲಿಯಾಗದೆ ಯೋಚಿಸಿ ಮತ ನೀಡಿ’ ಎಂದು ವರುಣ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ತಾಲ್ಲೂಕಿನ ವರುಣ ಕ್ಷೇತ್ರದ ತುಂಬುನೆರಳೆ, ಎಸ್.ಹೊಸಕೋಟೆ, ಮೂಡಹಳ್ಳಿ, ಹದಿನಾರು, ಹುಳಿಮಾವು, ತಾಂಡವಪುರ, ಮರಳೂರು, ರಾಂಪುರದಲ್ಲಿ ಸೋಮವಾರ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚನೆ ಮಾಡಿದರು.</p>.<p>‘ಹತ್ತು ವರ್ಷ ದೇಶದ ಆಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕುತ್ತೇನೆ, 2 ಕೋಟಿ ಉದ್ಯೋಗ ನೀಡುತ್ತೇನೆ, ರೈತರ ಆದಾಯ ದ್ವಿಗುಣಗೊಳಿಸುತ್ತೇನೆ ಎಂದು ನೀಡಿದ ಭರವಸೆ ಹುಸಿಯಾಗಿವೆ. ದೇಶದ ಎಚ್.ಎ.ಎಲ್, ಬಿ.ಇ.ಎಂ.ಎಲ್ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ್ದಾರೆ’ ಎಂದು ದೂರಿದರು.</p>.<p>‘ರೈತ ವಿರೋಧಿ ಕೃಷಿ ನೀತಿಯನ್ನು ರೈತರು 1 ವರ್ಷ ಸತತ ಹೋರಾಟ ನಡೆಸಿದ ಪರಿಣಾಮ ವಾಪಸ್ ಪಡೆದರು. ರಸಗೊಬ್ಬರ, ಕ್ರಿಮಿನಾಶಕಗಳ ಬೆಲೆ ಏರಿಕೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ಬಾರಿಯೂ ಸಹ ಜನರಿಗೆ ನೀಡದ್ದ ಭರವಸೆಗಳನ್ನು ಈಡೇರಿಸಿದೆ. ಈ ಹಿಂದೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಲಾಗಿತ್ತು, ಇದೀಗ ನೀಡಿದ್ದ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ನುಡಿದಂತೆ ನಡೆದಿದೆ’ ಎಂದು ನುಡಿದರು.</p>.<p>‘ಕಾಂಗ್ರೆಸ್ ಬಡವರ ಪರ ಕಾಳಜಿ ಹೊಂದಿರುವ ಪಕ್ಷ ಎಂದು ಸಾಬೀತು ಮಾಡಿದೆ. ಬಿಜೆಪಿ ಶ್ರೀಮಂತರ ಪಕ್ಷ. ಶ್ರೀಮಂತ ಉದ್ಯಮಿಗಳ ಮೇಲಿನ ತೆರಿಗೆಯನ್ನು ಶೇ10 ರಷ್ಟು ಕಡಿಮೆ ಮಾಡಿದ್ದಾರೆ. ರೈತರ ಸಾಲವನ್ನು ಮನ್ನಾ ಮಾಡಲು ಮೀನಾ-ಮೇಷ ಎಣಿಸುವ ಬಿಜೆಪಿ ಉದ್ಯಮಿಗಳ ₹125 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಬಡವರ ಪರವಾಗಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಮತ ನೀಡಿ, ಜಯಶೀಲರನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯರಂಗಸ್ವಾಮಿ, ಲತಾಸಿದ್ದಶೆಟ್ಟಿ, ಮುಖಂಡರಾದ ಸರ್ವೇಶ್, ದಕ್ಷಿಣಮೂರ್ತಿ, ಇಂಧನ್ ಬಾಬು,ಕೆಂಪಣ್ಣ, ಹೊಸಕೋಟೆ ಬಸವರಾಜು, ಗೋಣಹಳ್ಳಿಕುಮಾರ್, ಚಿನ್ನಂಬಳ್ಳಿರಾಜು, ಕೆಂಪಣ್ಣ, ಆರ್.ಮಹದೇವು, ಮುದ್ದುಮಾದೇಗೌಡ, ಗುರುಪಾದಸ್ವಾಮಿ, ಆಲಂಬೂರು ಮೋಹನ್ಕುಮಾರ್, ಗಾರ್ಡನ್ ಮಹೇಶ್, ಸಿ.ಆರ್.ಮಹದೇವು, ಜಗದೀಶ್, ಚಾಮರಾಜು, ಚೋಳರಾಜು, ಎನ್.ಟಿ.ಗಿರೀಶ್, ಪದ್ಮನಾಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು: ‘</strong>ದೇಶದ ಆಡಳಿತ ಚುಕ್ಕಾಣಿ ಯಾರ ಕೈಗೆ ಕೊಡಬೇಕು ಎಂದು ನಿರ್ಧರಿಸುವ ಮಹತ್ವದ ಚುನಾವಣೆಯಲ್ಲಿ ಬಿಜೆಪಿಗೆ ಮರುಳಾಗದೆ, ಸುಳ್ಳುಗಳಿಗೆ ಬಲಿಯಾಗದೆ ಯೋಚಿಸಿ ಮತ ನೀಡಿ’ ಎಂದು ವರುಣ ಆಶ್ರಯ ಸಮಿತಿ ಅಧ್ಯಕ್ಷ ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>ತಾಲ್ಲೂಕಿನ ವರುಣ ಕ್ಷೇತ್ರದ ತುಂಬುನೆರಳೆ, ಎಸ್.ಹೊಸಕೋಟೆ, ಮೂಡಹಳ್ಳಿ, ಹದಿನಾರು, ಹುಳಿಮಾವು, ತಾಂಡವಪುರ, ಮರಳೂರು, ರಾಂಪುರದಲ್ಲಿ ಸೋಮವಾರ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚನೆ ಮಾಡಿದರು.</p>.<p>‘ಹತ್ತು ವರ್ಷ ದೇಶದ ಆಳಿತ ನಡೆಸಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವಿದೇಶದಲ್ಲಿರುವ ಕಪ್ಪುಹಣ ತಂದು ಎಲ್ಲರ ಖಾತೆಗೆ ₹15 ಲಕ್ಷ ಹಾಕುತ್ತೇನೆ, 2 ಕೋಟಿ ಉದ್ಯೋಗ ನೀಡುತ್ತೇನೆ, ರೈತರ ಆದಾಯ ದ್ವಿಗುಣಗೊಳಿಸುತ್ತೇನೆ ಎಂದು ನೀಡಿದ ಭರವಸೆ ಹುಸಿಯಾಗಿವೆ. ದೇಶದ ಎಚ್.ಎ.ಎಲ್, ಬಿ.ಇ.ಎಂ.ಎಲ್ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಿದ್ದಾರೆ’ ಎಂದು ದೂರಿದರು.</p>.<p>‘ರೈತ ವಿರೋಧಿ ಕೃಷಿ ನೀತಿಯನ್ನು ರೈತರು 1 ವರ್ಷ ಸತತ ಹೋರಾಟ ನಡೆಸಿದ ಪರಿಣಾಮ ವಾಪಸ್ ಪಡೆದರು. ರಸಗೊಬ್ಬರ, ಕ್ರಿಮಿನಾಶಕಗಳ ಬೆಲೆ ಏರಿಕೆಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ಬಾರಿಯೂ ಸಹ ಜನರಿಗೆ ನೀಡದ್ದ ಭರವಸೆಗಳನ್ನು ಈಡೇರಿಸಿದೆ. ಈ ಹಿಂದೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆ ಈಡೇರಿಸಲಾಗಿತ್ತು, ಇದೀಗ ನೀಡಿದ್ದ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ನುಡಿದಂತೆ ನಡೆದಿದೆ’ ಎಂದು ನುಡಿದರು.</p>.<p>‘ಕಾಂಗ್ರೆಸ್ ಬಡವರ ಪರ ಕಾಳಜಿ ಹೊಂದಿರುವ ಪಕ್ಷ ಎಂದು ಸಾಬೀತು ಮಾಡಿದೆ. ಬಿಜೆಪಿ ಶ್ರೀಮಂತರ ಪಕ್ಷ. ಶ್ರೀಮಂತ ಉದ್ಯಮಿಗಳ ಮೇಲಿನ ತೆರಿಗೆಯನ್ನು ಶೇ10 ರಷ್ಟು ಕಡಿಮೆ ಮಾಡಿದ್ದಾರೆ. ರೈತರ ಸಾಲವನ್ನು ಮನ್ನಾ ಮಾಡಲು ಮೀನಾ-ಮೇಷ ಎಣಿಸುವ ಬಿಜೆಪಿ ಉದ್ಯಮಿಗಳ ₹125 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಬಡವರ ಪರವಾಗಿ ಯೋಜನೆಗಳನ್ನು ಜಾರಿಗೆ ತಂದಿರುವ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರಿಗೆ ಮತ ನೀಡಿ, ಜಯಶೀಲರನ್ನಾಗಿ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ಎಸ್.ಸಿ.ಬಸವರಾಜು, ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಡ್ಯರಂಗಸ್ವಾಮಿ, ಲತಾಸಿದ್ದಶೆಟ್ಟಿ, ಮುಖಂಡರಾದ ಸರ್ವೇಶ್, ದಕ್ಷಿಣಮೂರ್ತಿ, ಇಂಧನ್ ಬಾಬು,ಕೆಂಪಣ್ಣ, ಹೊಸಕೋಟೆ ಬಸವರಾಜು, ಗೋಣಹಳ್ಳಿಕುಮಾರ್, ಚಿನ್ನಂಬಳ್ಳಿರಾಜು, ಕೆಂಪಣ್ಣ, ಆರ್.ಮಹದೇವು, ಮುದ್ದುಮಾದೇಗೌಡ, ಗುರುಪಾದಸ್ವಾಮಿ, ಆಲಂಬೂರು ಮೋಹನ್ಕುಮಾರ್, ಗಾರ್ಡನ್ ಮಹೇಶ್, ಸಿ.ಆರ್.ಮಹದೇವು, ಜಗದೀಶ್, ಚಾಮರಾಜು, ಚೋಳರಾಜು, ಎನ್.ಟಿ.ಗಿರೀಶ್, ಪದ್ಮನಾಭ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>