<p><strong>ನಂಜನಗೂಡು</strong>: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಪ್ರೌಢಶಾಲೆ ಸಮೀಪದ ಹಳ್ಳದಲ್ಲಿ ಶುಕ್ರವಾರ ಮಲ್ಕುಂಡಿ ಗ್ರಾಮದ ಸದಾಶಿವ (48) ಎಂಬುವವರನ್ನು ಅಪರಿಚಿತ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.</p>.<p>ಮೃತರಿಗೆ ಪತ್ನಿ ಒಬ್ಬ ಮಗಹಾಗೂ ಮಗಳು ಇದ್ದಾರೆ. ಮೃತ ಸದಾಶಿವು ಅವರ ಅಣ್ಣ ರಂಗರಾಮು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ, ಗುರುವಾರ ಮೈಸೂರಿಗೆ ಟೊಮೆಟೊ ಹಣ್ಣನ್ನು ಮಾರಾಟ ಮಾಡಿ ಶುಕ್ರವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮನೆಗೆ ಬಂದ. ಯಾರೋ ದೂರವಾಣಿ ಕರೆ ಮಾಡಿರುವುದಾಗಿ ಹೇಳಿ ಹೋದವನು, ಮಡುವಿನಹಳ್ಳಿ ಗ್ರಾಮದ ಬಳಿ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.</p>.<p>ನಂಜನಗೂಡಿನ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸೆಗಾಗಿ ಆಂಬುಲೆನ್ಸ್ನಲ್ಲಿ ಕೊಂಡೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕತ್ತು ಕೊಯ್ದು ಕೊಲೆ ಮಾಡಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷೆ ವಿಧಿಸಬೇಕು ಎಂದು ದೂರು ನೀಡಿದ್ದಾರೆ.</p>.<p>ಘಟನೆ ಸ್ಥಳಕ್ಕೆ ಶ್ವಾನದಳದವರು ಭೇಟಿ ನೀಡಿ ಮಹಜರು ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಅರಿ ವಿಷ್ಣುವರ್ದನ್, ಡಿ.ವೈ.ಎಸ್.ಪಿ.ರಘು, ಪಿ.ಎಸ್.ಪಿ.ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು</strong>: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಪ್ರೌಢಶಾಲೆ ಸಮೀಪದ ಹಳ್ಳದಲ್ಲಿ ಶುಕ್ರವಾರ ಮಲ್ಕುಂಡಿ ಗ್ರಾಮದ ಸದಾಶಿವ (48) ಎಂಬುವವರನ್ನು ಅಪರಿಚಿತ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ.</p>.<p>ಮೃತರಿಗೆ ಪತ್ನಿ ಒಬ್ಬ ಮಗಹಾಗೂ ಮಗಳು ಇದ್ದಾರೆ. ಮೃತ ಸದಾಶಿವು ಅವರ ಅಣ್ಣ ರಂಗರಾಮು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿ, ಗುರುವಾರ ಮೈಸೂರಿಗೆ ಟೊಮೆಟೊ ಹಣ್ಣನ್ನು ಮಾರಾಟ ಮಾಡಿ ಶುಕ್ರವಾರ ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಮನೆಗೆ ಬಂದ. ಯಾರೋ ದೂರವಾಣಿ ಕರೆ ಮಾಡಿರುವುದಾಗಿ ಹೇಳಿ ಹೋದವನು, ಮಡುವಿನಹಳ್ಳಿ ಗ್ರಾಮದ ಬಳಿ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.</p>.<p>ನಂಜನಗೂಡಿನ ಸರ್ಕಾರಿ ಅಸ್ಪತ್ರೆಗೆ ಚಿಕಿತ್ಸೆಗಾಗಿ ಆಂಬುಲೆನ್ಸ್ನಲ್ಲಿ ಕೊಂಡೊಯ್ಯುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಕತ್ತು ಕೊಯ್ದು ಕೊಲೆ ಮಾಡಿದ್ದು, ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷೆ ವಿಧಿಸಬೇಕು ಎಂದು ದೂರು ನೀಡಿದ್ದಾರೆ.</p>.<p>ಘಟನೆ ಸ್ಥಳಕ್ಕೆ ಶ್ವಾನದಳದವರು ಭೇಟಿ ನೀಡಿ ಮಹಜರು ನಡೆಸಿದರು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಅರಿ ವಿಷ್ಣುವರ್ದನ್, ಡಿ.ವೈ.ಎಸ್.ಪಿ.ರಘು, ಪಿ.ಎಸ್.ಪಿ.ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>