<p><strong>ಮೈಸೂರು: </strong>ಜನರ ನಡುವಿನ ಭಾವನಾತ್ಮಕ ಸಂಕೇತ ಹಾಗೂ ರಾಜಪ್ರಭುತ್ವದ, ಪ್ರಜೆಗಳ ನಡುವಿನ ಸಂಕೇತವಾಗಿ ಉಳಿದಿರುವುದು ಕನ್ನಂಬಾಡಿ (ಕೆಆರ್ಎಸ್) ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕನ್ನಂಬಾಡಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, 'ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಕನ್ನಂಬಾಡಿ ನಿರ್ಮಾಣವಾಗುವ ವೇಳೆ ಬಹಳಷ್ಟು ತ್ಯಾಗ ನಡೆದಿದೆ. ಸಾಕಷ್ಟು ಗ್ರಾಮಗಳು ಮುಳುಗಡೆ ಆಗಿವೆ. ಕನ್ನಂಬಾಡಿ ನಮ್ಮ ಅಭಿಮಾನದ ಸಂಕೇತ. ರಾಜಮನೆತನದ ಹೆಣ್ಣುಮಕ್ಕಳು ತಮ್ಮ ಒಡವೆಗಳನ್ನು ಮಾರಿ, ಸುಮಾರು ₹ 70 ಲಕ್ಷ ಹಣವನ್ನು ಈ ಅಣೆಕಟ್ಟೆಯ ನಿರ್ಮಾಣಕ್ಕಾಗಿ ಕೊಟ್ಟಿದ್ದಾರೆ. ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಂದಲೂ ಡ್ಯಾಂ ನಿರ್ಮಾಣಕ್ಕೆ ವಸ್ತುಗಳು ಬಂದಿವೆ. ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಹಲವು ದೇಶಗಳ ಎಂಜಿನಿಯರ್ಗಳ ಬುದ್ಧಿಶಕ್ತಿ ಇಲ್ಲಿ ಬಳಕೆಯಾಗಿದೆ. ಕನ್ನಂಬಾಡಿ ಬಿರುಕು ಬಿಟ್ಟಿದೆ ಎಂಬುದು ಆತಂಕ ತಂದಿದೆ' ಎಂದರು.</p>.<p>ಬಹುಶಃ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿರ್ಮಾಣವಾಗಿದ್ದರೆ, ಕಮಿಷನ್, ಕಿಕ್ ಬ್ಯಾಕ್ ತಗೊಂಡು ನಿರ್ಮಾಣ ಮಾಡುತ್ತಿದ್ದರು. ಆದರೆ, ಕನ್ನಂಬಾಡಿ ರಾಜ ಪ್ರಭುತ್ವದಲ್ಲಿ ನಿರ್ಮಾಣ ಆಗಿದ್ದರಿಂದ ಬಿರುಕು ಬಿಟ್ಟಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/drone-survey-thousands-of-crores-of-rupees-lost-from-illegal-mining-to-government-coffers-846254.html">ಅಕ್ರಮ ಗಣಿಗಾರಿಕೆ: ನನೆಗುದಿಗೆ ಬಿದ್ದ ಡ್ರೋಣ್ ಕ್ಯಾಮೆರಾ ಸರ್ವೆ</a></p>.<p>'ಸಂಸದೆ ಬಿರುಕು ಬಿಟ್ಟಿದೆ ಎಂದು ಹೇಳುತ್ತಿದ್ದಾರೆ, ಮಾಜಿ ಸಿಎಂ ಕುಮಾರಸ್ವಾಮಿ ಬಿರುಕು ಬಿಟ್ಟಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಈ ವಿಚಾರವನ್ನು ಸ್ಪಷ್ಟಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಸದ್ದಿಲ್ಲದೆ ಕುಳಿತಿರುವುದೇಕೆ. ಈಗಾಗಲೇ ಮುಖ್ಯಮಂತ್ರಿ, ತಾಂತ್ರಿಕ ತಂಡ, ಗಣಿ ತಜ್ಞರ ತಂಡ, ನೀರಾವರಿ ಇಲಾಖೆಯ ತಂಡಗಳು ಬಂದು ಬೀಡು ಬಿಡಬೇಕಾಗಿತ್ತು. ಜನರು ಆತಂಕದಲ್ಲಿದ್ದಾರೆ, ಸರ್ಕಾರವು ಜೀವಂತವಾಗಿದೆಯೋ ಸತ್ತಿದೆಯೋ' ಎಂದು ವಿಶ್ವನಾಥ್ ಪ್ರಶ್ನಿಸಿದರು.</p>.<p>'ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದನ್ನ ಸುಮಲತಾ ಹೇಳೋದಲ್ಲ; ಕನ್ನಂಬಾಡಿ ಸುರಕ್ಷಿತ ಅಂತ ಕುಮಾರಸ್ವಾಮಿ ಹೇಳೋದಲ್ಲ. ಈ ಬಗ್ಗೆ ಶಾಸಕರು ಹೇಳಿಕೆ ನೀಡುವುದಲ್ಲ, ತಾಂತ್ರಿಕ ತಂಡ ತಿಳಿಸಬೇಕು. ಈ ಬಗ್ಗೆ ತಂಡವನ್ನು ರಚಿಸಿ ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಲಿ' ಎಂದು ಸಲಹೆ ಮಾಡಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/protest-against-sumalatha-over-miss-information-on-krs-dam-safety-846349.html">ಜನರಲ್ಲಿ ಆತಂಕ ಸೃಷ್ಟಿ ಮಾಡುತ್ತಿರುವ ಆರೋಪ: ಸಂಸದೆ ವಿರುದ್ಧ ಕ್ರಮಕ್ಕೆ ಆಗ್ರಹ</a></p>.<p>'ಕೆಆರ್ಎಸ್ ವಿಚಾರ ಹಾದಿ-ಬೀದಿ ರಂಪ ಆಗುತ್ತಿದೆ. ಆದರೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕೆ ಪ್ರತಿಕ್ರಿಯಿಸುತ್ತಿಲ್ಲ. ಸಿದ್ದರಾಮಯ್ಯ ಮೈಸೂರಿನವರೇ ಆಗಿ ಏಕೆ ಮಾತನಾಡುತ್ತಿಲ್ಲ, ಅವರು ಮಾತನಾಡಬೇಕಿತ್ತು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಜನರ ನಡುವಿನ ಭಾವನಾತ್ಮಕ ಸಂಕೇತ ಹಾಗೂ ರಾಜಪ್ರಭುತ್ವದ, ಪ್ರಜೆಗಳ ನಡುವಿನ ಸಂಕೇತವಾಗಿ ಉಳಿದಿರುವುದು ಕನ್ನಂಬಾಡಿ (ಕೆಆರ್ಎಸ್) ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು.</p>.<p>ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕನ್ನಂಬಾಡಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, 'ಅಂತರರಾಷ್ಟ್ರೀಯ ಪ್ರವಾಸಿ ತಾಣವಾಗಿರುವ ಕನ್ನಂಬಾಡಿ ನಿರ್ಮಾಣವಾಗುವ ವೇಳೆ ಬಹಳಷ್ಟು ತ್ಯಾಗ ನಡೆದಿದೆ. ಸಾಕಷ್ಟು ಗ್ರಾಮಗಳು ಮುಳುಗಡೆ ಆಗಿವೆ. ಕನ್ನಂಬಾಡಿ ನಮ್ಮ ಅಭಿಮಾನದ ಸಂಕೇತ. ರಾಜಮನೆತನದ ಹೆಣ್ಣುಮಕ್ಕಳು ತಮ್ಮ ಒಡವೆಗಳನ್ನು ಮಾರಿ, ಸುಮಾರು ₹ 70 ಲಕ್ಷ ಹಣವನ್ನು ಈ ಅಣೆಕಟ್ಟೆಯ ನಿರ್ಮಾಣಕ್ಕಾಗಿ ಕೊಟ್ಟಿದ್ದಾರೆ. ಇಂಗ್ಲೆಂಡ್ ಸೇರಿದಂತೆ ವಿವಿಧ ದೇಶಗಳಿಂದಲೂ ಡ್ಯಾಂ ನಿರ್ಮಾಣಕ್ಕೆ ವಸ್ತುಗಳು ಬಂದಿವೆ. ಸರ್.ಎಂ.ವಿಶ್ವೇಶ್ವರಯ್ಯ ಹಾಗೂ ಹಲವು ದೇಶಗಳ ಎಂಜಿನಿಯರ್ಗಳ ಬುದ್ಧಿಶಕ್ತಿ ಇಲ್ಲಿ ಬಳಕೆಯಾಗಿದೆ. ಕನ್ನಂಬಾಡಿ ಬಿರುಕು ಬಿಟ್ಟಿದೆ ಎಂಬುದು ಆತಂಕ ತಂದಿದೆ' ಎಂದರು.</p>.<p>ಬಹುಶಃ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿರ್ಮಾಣವಾಗಿದ್ದರೆ, ಕಮಿಷನ್, ಕಿಕ್ ಬ್ಯಾಕ್ ತಗೊಂಡು ನಿರ್ಮಾಣ ಮಾಡುತ್ತಿದ್ದರು. ಆದರೆ, ಕನ್ನಂಬಾಡಿ ರಾಜ ಪ್ರಭುತ್ವದಲ್ಲಿ ನಿರ್ಮಾಣ ಆಗಿದ್ದರಿಂದ ಬಿರುಕು ಬಿಟ್ಟಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/drone-survey-thousands-of-crores-of-rupees-lost-from-illegal-mining-to-government-coffers-846254.html">ಅಕ್ರಮ ಗಣಿಗಾರಿಕೆ: ನನೆಗುದಿಗೆ ಬಿದ್ದ ಡ್ರೋಣ್ ಕ್ಯಾಮೆರಾ ಸರ್ವೆ</a></p>.<p>'ಸಂಸದೆ ಬಿರುಕು ಬಿಟ್ಟಿದೆ ಎಂದು ಹೇಳುತ್ತಿದ್ದಾರೆ, ಮಾಜಿ ಸಿಎಂ ಕುಮಾರಸ್ವಾಮಿ ಬಿರುಕು ಬಿಟ್ಟಿಲ್ಲವೆಂದು ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿಗಳು ತಕ್ಷಣ ಈ ವಿಚಾರವನ್ನು ಸ್ಪಷ್ಟಪಡಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಸದ್ದಿಲ್ಲದೆ ಕುಳಿತಿರುವುದೇಕೆ. ಈಗಾಗಲೇ ಮುಖ್ಯಮಂತ್ರಿ, ತಾಂತ್ರಿಕ ತಂಡ, ಗಣಿ ತಜ್ಞರ ತಂಡ, ನೀರಾವರಿ ಇಲಾಖೆಯ ತಂಡಗಳು ಬಂದು ಬೀಡು ಬಿಡಬೇಕಾಗಿತ್ತು. ಜನರು ಆತಂಕದಲ್ಲಿದ್ದಾರೆ, ಸರ್ಕಾರವು ಜೀವಂತವಾಗಿದೆಯೋ ಸತ್ತಿದೆಯೋ' ಎಂದು ವಿಶ್ವನಾಥ್ ಪ್ರಶ್ನಿಸಿದರು.</p>.<p>'ಡ್ಯಾಂ ಬಿರುಕು ಬಿಟ್ಟಿದೆ ಅನ್ನೋದನ್ನ ಸುಮಲತಾ ಹೇಳೋದಲ್ಲ; ಕನ್ನಂಬಾಡಿ ಸುರಕ್ಷಿತ ಅಂತ ಕುಮಾರಸ್ವಾಮಿ ಹೇಳೋದಲ್ಲ. ಈ ಬಗ್ಗೆ ಶಾಸಕರು ಹೇಳಿಕೆ ನೀಡುವುದಲ್ಲ, ತಾಂತ್ರಿಕ ತಂಡ ತಿಳಿಸಬೇಕು. ಈ ಬಗ್ಗೆ ತಂಡವನ್ನು ರಚಿಸಿ ಸತ್ಯಾಸತ್ಯತೆಯನ್ನು ಜನರಿಗೆ ತಿಳಿಸಲಿ' ಎಂದು ಸಲಹೆ ಮಾಡಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/district/mandya/protest-against-sumalatha-over-miss-information-on-krs-dam-safety-846349.html">ಜನರಲ್ಲಿ ಆತಂಕ ಸೃಷ್ಟಿ ಮಾಡುತ್ತಿರುವ ಆರೋಪ: ಸಂಸದೆ ವಿರುದ್ಧ ಕ್ರಮಕ್ಕೆ ಆಗ್ರಹ</a></p>.<p>'ಕೆಆರ್ಎಸ್ ವಿಚಾರ ಹಾದಿ-ಬೀದಿ ರಂಪ ಆಗುತ್ತಿದೆ. ಆದರೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕೆ ಪ್ರತಿಕ್ರಿಯಿಸುತ್ತಿಲ್ಲ. ಸಿದ್ದರಾಮಯ್ಯ ಮೈಸೂರಿನವರೇ ಆಗಿ ಏಕೆ ಮಾತನಾಡುತ್ತಿಲ್ಲ, ಅವರು ಮಾತನಾಡಬೇಕಿತ್ತು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>