‘ಹಿಂದಿನ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರ ಅಮಾನತು ಆದೇಶ ವಾಪಸ್ ಪಡೆದಿರುವ ಬಗ್ಗೆ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಆದರೆ, ಆದೇಶದ ಪ್ರತಿ ಸಿಕ್ಕಿಲ್ಲ. ಅಧಿಕಾರಿಗಳೇ ಸರ್ಕಾರದ ಮೇಲೆ ಹಿಡಿತ ಹೊಂದಿದ್ದಾರೆ. ಅವರ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಮಂಗಳವಾರ (ಸೆ.17) ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮತ್ತೊಮ್ಮೆ ದೂರು ಸಲ್ಲಿಸುವೆ. ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ’ ಎಂದು ತಿಳಿಸಿದರು.