‘ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿದ್ದ ಲೋಕಾಯುಕ್ತ ಪೊಲೀಸರು, ಲೋಕಾಯುಕ್ತರಿಂದ ಸರ್ಚ್ ವಾರಂಟ್ ಪಡೆದು ಮುಡಾ ಕಚೇರಿ ಮೇಲೆ ದಾಳಿಗೆ ಯೋಜಿಸಿದ್ದರು. ಆದರೆ, ಈ ಮಾಹಿತಿಯನ್ನು ಎಸ್.ಪಿ. ಸುಜೀತ್ ಸಚಿವ ಬೈರತಿ ಸುರೇಶ್ಗೆ ತಿಳಿಸಿದ್ದರು. ನಂತರದಲ್ಲಿ ಬೈರತಿ ಸುರೇಶ್ ಹೆಲಿಕಾಪ್ಟರ್ನಲ್ಲಿ ಮೈಸೂರಿಗೆ ಬಂದು ಮುಡಾ ಕಚೇರಿಯಲ್ಲಿದ್ದ ಪ್ರಮುಖ ದಾಖಲೆಗಳನ್ನು ಬೆಂಗಳೂರಿಗೆ ಒಯ್ದರು. ಇದೇ ದಾಖಲೆಗಳನ್ನು ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ರೀತಿ ಸಹಾಯ ಮಾಡಿದ್ದಕ್ಕೆ ಪ್ರತಿಯಾಗಿ ಸುಜೀತ್ ಅವರನ್ನು ಸರ್ಕಾರ ಮೈಸೂರಿನಿಂದ ಬೆಂಗಳೂರಿಗೆ ಆಯಕಟ್ಟಿನ ಜಾಗಕ್ಕೆ ವರ್ಗಾಯಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ದೂರಿನಲ್ಲಿ ಕೋರಿದ್ದಾರೆ.