ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Muda Case | ಸಿಎಂ ಪತ್ನಿ ‘ಮುಡಾ’ಗೆ ಬರೆದ ಪತ್ರ ತಲುಪಿಸಿದ ಯತೀಂದ್ರ

Published : 1 ಅಕ್ಟೋಬರ್ 2024, 7:32 IST
Last Updated : 1 ಅಕ್ಟೋಬರ್ 2024, 7:32 IST
ಫಾಲೋ ಮಾಡಿ
Comments

ಮೈಸೂರು: ಮುಡಾದಿಂದ ನೀಡಲಾದ 14 ಬದಲಿ ನಿವೇಶನಗಳನ್ನು ವಾಪಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಬರೆದ ಪತ್ರವನ್ನು ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮುಡಾ ಆಯುಕ್ತರಿಗೆ ಸಲ್ಲಿಸಿದ್ದಾರೆ‌.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮುಡಾ ಆಯುಕ್ತ ರಘುನಂದನ್ 'ಪಾರ್ವತಿ ಅವರ ಪರವಾಗಿ ಡಾ. ಯತೀಂದ್ರ ಪತ್ರವನ್ನು ನೀಡಿದ್ದಾರೆ. ಈ ಕುರಿತು ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಜರುಗಿಸುತ್ತೇವೆ' ಎಂದರು.

'ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464ಕ್ಕೆ ಸಂಬಂಧಿಸಿ ಲೋಕಾಯುಕ್ತ ಪೊಲೀಸರು ಕೆಲವು ದಾಖಲೆಗಳನ್ನು ಕೇಳಿದ್ದು, ತನಿಖೆಗೆ ಸಹಕಾರ ನೀಡುತ್ತಿದ್ದೇವೆ. ಇ.ಡಿ‌. ಯಿಂದ ಈವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT