<p><strong>ಮೈಸೂರು</strong>: ‘ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಒಂದು ತಿಂಗಳಿಂದ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ದೈನಂದಿನ ಕೆಲಸಗಳನ್ನು ಎಂದಿನಂತೆ ನಿರ್ವಹಿಸಲು ಅನುಮತಿ ನೀಡಬೇಕು’ ಎಂದು ಕೋರಿ ಆಯುಕ್ತರು ಬುಧವಾರ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ.</p>.<p>ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದರಿಂದ, ಮುಡಾದ ಎಲ್ಲ ವ್ಯವಹಾರಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಸರ್ಕಾರ ಜುಲೈ 2ರಂದು ಸೂಚನೆ ನೀಡಿತ್ತು. ಪ್ರಮುಖ ನಿರ್ಣಯಗಳನ್ನು ಕೈಗೊಳ್ಳದಂತೆ ಆದೇಶಿಸಿತ್ತು. ನಂತರದಲ್ಲಿ ತನಿಖಾ ಆಯೋಗವು ಭೇಟಿ ನೀಡಿದ್ದು, ದಾಖಲೆಗಳ ಕೊಠಡಿಯನ್ನು ಸೀಜ್ ಮಾಡಿತ್ತು.</p>.<p>ಅಂದಿನಿಂದ ಮುಡಾದಲ್ಲಿ ಖಾತೆ, ಎನ್ಒಸಿ, ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆ, ಪೌತಿ ಖಾತೆ ವರ್ಗಾವಣೆ, ಕ್ರಯಪತ್ರ ಸೇರಿದಂತೆ ಬಹುತೇಕ ಸೇವೆಗಳು ಸ್ಥಗಿತಗೊಂಡಿವೆ. ಸಾರ್ವಜನಿಕರು ಕಚೇರಿಗೆ ಅಲೆಯುವುದು ಸಾಮಾನ್ಯವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಜುಲೈ ತಿಂಗಳ ವೇತನ ಪಾವತಿಗೆ ಸಹ ಅಡ್ಡಿಯಾಗಿದೆ ಎನ್ನಲಾಗಿದೆ.</p>.<p>ಈ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಯೋಜನಾ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರಿಗೆ ಪತ್ರ ಬರೆದಿರುವ ಆಯುಕ್ತ ರಘುನಂದನ್, ‘ ನೌಕರರ ವೇತನ ಪಾವತಿ, ನ್ಯಾಯಾಲಯದ ಆದೇಶಗಳ ಪಾಲನೆ, ಖಾಸಗಿ ಬಡಾವಣೆಗಳಿಗೆ ಸಂಬಂಧಿಸಿದ ಖಾತೆ, ಎನ್ಒಸಿ, ಕಂದಾಯ ಸೇವೆಗಳು, ಕಟ್ಟಡ ನಕ್ಷೆಗಳ ಅನುಮೋದನೆ, ಪ್ರಾಧಿಕಾರ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲ ಸೌಕರ್ಯ ಹಾಗೂ ಸ್ವಚ್ಛತೆ, ಟೆಂಡರ್ ಪ್ರಕ್ರಿಯೆಗಳನ್ನು ನಡೆಸಲು ಅನುವು ಮಾಡಿಕೊಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಒಂದು ತಿಂಗಳಿಂದ ವಿವಿಧ ಸೇವೆಗಳಲ್ಲಿ ವ್ಯತ್ಯಯವಾಗಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ದೈನಂದಿನ ಕೆಲಸಗಳನ್ನು ಎಂದಿನಂತೆ ನಿರ್ವಹಿಸಲು ಅನುಮತಿ ನೀಡಬೇಕು’ ಎಂದು ಕೋರಿ ಆಯುಕ್ತರು ಬುಧವಾರ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ.</p>.<p>ಮುಡಾ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದರಿಂದ, ಮುಡಾದ ಎಲ್ಲ ವ್ಯವಹಾರಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸುವಂತೆ ಸರ್ಕಾರ ಜುಲೈ 2ರಂದು ಸೂಚನೆ ನೀಡಿತ್ತು. ಪ್ರಮುಖ ನಿರ್ಣಯಗಳನ್ನು ಕೈಗೊಳ್ಳದಂತೆ ಆದೇಶಿಸಿತ್ತು. ನಂತರದಲ್ಲಿ ತನಿಖಾ ಆಯೋಗವು ಭೇಟಿ ನೀಡಿದ್ದು, ದಾಖಲೆಗಳ ಕೊಠಡಿಯನ್ನು ಸೀಜ್ ಮಾಡಿತ್ತು.</p>.<p>ಅಂದಿನಿಂದ ಮುಡಾದಲ್ಲಿ ಖಾತೆ, ಎನ್ಒಸಿ, ಖಾಸಗಿ ಬಡಾವಣೆಗಳ ನಕ್ಷೆ ಅನುಮೋದನೆ, ಪೌತಿ ಖಾತೆ ವರ್ಗಾವಣೆ, ಕ್ರಯಪತ್ರ ಸೇರಿದಂತೆ ಬಹುತೇಕ ಸೇವೆಗಳು ಸ್ಥಗಿತಗೊಂಡಿವೆ. ಸಾರ್ವಜನಿಕರು ಕಚೇರಿಗೆ ಅಲೆಯುವುದು ಸಾಮಾನ್ಯವಾಗಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಗೂ ಜುಲೈ ತಿಂಗಳ ವೇತನ ಪಾವತಿಗೆ ಸಹ ಅಡ್ಡಿಯಾಗಿದೆ ಎನ್ನಲಾಗಿದೆ.</p>.<p>ಈ ಹಿನ್ನೆಲೆಯಲ್ಲಿ, ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಯೋಜನಾ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರಿಗೆ ಪತ್ರ ಬರೆದಿರುವ ಆಯುಕ್ತ ರಘುನಂದನ್, ‘ ನೌಕರರ ವೇತನ ಪಾವತಿ, ನ್ಯಾಯಾಲಯದ ಆದೇಶಗಳ ಪಾಲನೆ, ಖಾಸಗಿ ಬಡಾವಣೆಗಳಿಗೆ ಸಂಬಂಧಿಸಿದ ಖಾತೆ, ಎನ್ಒಸಿ, ಕಂದಾಯ ಸೇವೆಗಳು, ಕಟ್ಟಡ ನಕ್ಷೆಗಳ ಅನುಮೋದನೆ, ಪ್ರಾಧಿಕಾರ ವ್ಯಾಪ್ತಿಯ ಬಡಾವಣೆಗಳಲ್ಲಿ ಮೂಲ ಸೌಕರ್ಯ ಹಾಗೂ ಸ್ವಚ್ಛತೆ, ಟೆಂಡರ್ ಪ್ರಕ್ರಿಯೆಗಳನ್ನು ನಡೆಸಲು ಅನುವು ಮಾಡಿಕೊಡಬೇಕು’ ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>