<p><strong>ಮೈಸೂರು:</strong> ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. </p><p>12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು, ಅಧಿಕಾರಿಗಳ ವಿಚಾರಣೆ ಮಾಡುತ್ತಿದ್ದಾರೆ.</p><p>20ಕ್ಕೂ ಹೆಚ್ಚು ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿ ಇದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ನಗರದ ತಾಲ್ಲೂಕು ಕಚೇರಿಯಲ್ಲೂ ನಾಲ್ವರು ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.</p><p>ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ಕಚೇರಿಗೆ ಭೇಟಿ ನೀಡಿದ್ದು, ಅ.18 ಹಾಗೂ 19ರಂದು ಕಡತಗಳ ಪರಿಶೀಲನೆ ನಡೆಸಲಿದೆ. ಅವರು ಕೇಳುವ ಎಲ್ಲ ಮಾಹಿತಿಗಳನ್ನು ನೀಡಲಾಗುವುದು' ಎಂದು ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಸುದ್ದಿಗಾರರಿಗೆ ತಿಳಿಸಿದರು. </p><p>ಮುಖ್ಯದ್ವಾರಕ್ಕೆ ಬೀಗ: ಕಚೇರಿಯ ಮುಖ್ಯದ್ವಾರಕ್ಕೆ ಬೀಗ ಹಾಕಲಾಗಿದ್ದು, ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು. </p><p>'ಬೋಗಾದಿಯ ಎಸ್ ಬಿಎಂ ಬಡಾವಣೆಯಲ್ಲಿ ನಿವೇಶನವಿದ್ದು, ಕಂದಾಯ ಕಟ್ಟಲು ಚಿಕ್ಕಮಗಳೂರಿನ ಕಡೂರಿನಿಂದ ಕುಟುಂಬದ ನಾಲ್ವರು ಬಂದಿದ್ದೆವು. ಇದೀಗ ಕಚೇರಿ ಪ್ರವೇಶವಿಲ್ಲ. ಸೋಮವಾರದವರೆಗೂ ಕಾಯಬೇಕಿದೆ' ಎಂದು ಸುಮಾಕಾಂತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಕಚೇರಿ ಮೇಲೆ ಶುಕ್ರವಾರ ಬೆಳಿಗ್ಗೆ 10.50ರ ವೇಳೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. </p><p>12 ಮಂದಿ ಅಧಿಕಾರಿಗಳ ತಂಡವು ದಾಖಲೆಗಳ ಪರಿಶೀಲನೆ ನಡೆಸಿದ್ದು, ಕಚೇರಿಯಲ್ಲಿ ಮುಡಾ ಆಯುಕ್ತರು, ಅಧಿಕಾರಿಗಳ ವಿಚಾರಣೆ ಮಾಡುತ್ತಿದ್ದಾರೆ.</p><p>20ಕ್ಕೂ ಹೆಚ್ಚು ಸಿಆರ್ ಪಿಎಫ್ ಭದ್ರತಾ ಸಿಬ್ಬಂದಿ ಇದ್ದು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ನಗರದ ತಾಲ್ಲೂಕು ಕಚೇರಿಯಲ್ಲೂ ನಾಲ್ವರು ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.</p><p>ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವು ಕಚೇರಿಗೆ ಭೇಟಿ ನೀಡಿದ್ದು, ಅ.18 ಹಾಗೂ 19ರಂದು ಕಡತಗಳ ಪರಿಶೀಲನೆ ನಡೆಸಲಿದೆ. ಅವರು ಕೇಳುವ ಎಲ್ಲ ಮಾಹಿತಿಗಳನ್ನು ನೀಡಲಾಗುವುದು' ಎಂದು ಮುಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಸುದ್ದಿಗಾರರಿಗೆ ತಿಳಿಸಿದರು. </p><p>ಮುಖ್ಯದ್ವಾರಕ್ಕೆ ಬೀಗ: ಕಚೇರಿಯ ಮುಖ್ಯದ್ವಾರಕ್ಕೆ ಬೀಗ ಹಾಕಲಾಗಿದ್ದು, ಸಾರ್ವಜನಿಕರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು. </p><p>'ಬೋಗಾದಿಯ ಎಸ್ ಬಿಎಂ ಬಡಾವಣೆಯಲ್ಲಿ ನಿವೇಶನವಿದ್ದು, ಕಂದಾಯ ಕಟ್ಟಲು ಚಿಕ್ಕಮಗಳೂರಿನ ಕಡೂರಿನಿಂದ ಕುಟುಂಬದ ನಾಲ್ವರು ಬಂದಿದ್ದೆವು. ಇದೀಗ ಕಚೇರಿ ಪ್ರವೇಶವಿಲ್ಲ. ಸೋಮವಾರದವರೆಗೂ ಕಾಯಬೇಕಿದೆ' ಎಂದು ಸುಮಾಕಾಂತ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>