<p><strong>ಮೈಸೂರು:</strong> ಇಲ್ಲಿನ ಪುರಭವನದ ಆವರಣದಲ್ಲಿ ಮಹಿಷ ದಸರಾ ಕಾರ್ಯಕ್ರಮ ಪೊಲೀಸ್ ಭದ್ರತೆಯಲ್ಲಿ ಆರಂಭವಾಗಿದೆ.</p><p>ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ, ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಭವನದ ಆವರಣದಲ್ಲಿ ಮಾತ್ರ ಕಾರ್ಯಕ್ರಮಕ್ಕೆ ಪೊಲೀಸರು ಅವಕಾಶ ನೀಡಿದ್ದಾರೆ. </p><h2>ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ... </h2><p>ಚಾಮುಂಡಿಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಮಾಲಾರ್ಪಣೆ ಮಾಡಲು, ಮೆರವಣಿಗೆ ನಡೆಸಲು ಅವಕಾಶವನ್ನು ನೀಡಿಲ್ಲ. ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ಇತ್ತ ಪುರಭವನದ ಕಾರ್ಯಕ್ರಮಕ್ಕೆ ಜನರು ತಂಡೋಪತಂಡವಾಗಿ ಬರುತ್ತಿದ್ದಾರೆ. ನೀಲಿ ಪಟ್ಟಿ ಧರಿಸಿಕೊಂಡು ಅವರು ಭಾಗವಹಿಸಿದ್ದಾರೆ. ಜೈ ಭೀಮ್ ಘೋಷಣೆಗಳು ಮೊಳಗುತ್ತಿವೆ. ಮಹಿಷಾಸುರನಿಗೂ ಜೈಕಾರ ಮೊಳಗುತ್ತಿವೆ. ಮೈಸೂರಿನ ಅಸ್ಮಿತೆಗಾಗಿ ಮಹಿಷ ದಸರಾ ಎಂಬ ಫಲಕವನ್ನೂ ಹಾಕಲಾಗಿದೆ.</p><p>ಮಹಿಷಾಸುರನಿಗೆ ಪುಷ್ಪಾರ್ಚನೆ ಹಾಗೂ ದಮ್ಮದೀಕ್ಷೆ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಬುದ್ಧ, ಬಸವ ಹಾಗೂ ಮಹಿಷಾಸುರನ ಚಿಕ್ಕ ಪ್ರತಿಮೆಗಳಿಗೆ ಪುಷ್ಪಾರ್ಚನೆ ನೆರವೇರಲಿದೆ.</p><p>ಮುಂಜಾಗ್ರತಾ ಕ್ರಮವಾಗಿ ಪುರಭವನದ ಸುತ್ತಲೂ ಪೊಲೀಸ್ ಪಹರೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಪುರಭವನದ ಆವರಣದಲ್ಲಿ ಮಹಿಷ ದಸರಾ ಕಾರ್ಯಕ್ರಮ ಪೊಲೀಸ್ ಭದ್ರತೆಯಲ್ಲಿ ಆರಂಭವಾಗಿದೆ.</p><p>ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ, ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪುರಭವನದ ಆವರಣದಲ್ಲಿ ಮಾತ್ರ ಕಾರ್ಯಕ್ರಮಕ್ಕೆ ಪೊಲೀಸರು ಅವಕಾಶ ನೀಡಿದ್ದಾರೆ. </p><h2>ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ... </h2><p>ಚಾಮುಂಡಿಬೆಟ್ಟದಲ್ಲಿರುವ ಮಹಿಷ ಪ್ರತಿಮೆಗೆ ಮಾಲಾರ್ಪಣೆ ಮಾಡಲು, ಮೆರವಣಿಗೆ ನಡೆಸಲು ಅವಕಾಶವನ್ನು ನೀಡಿಲ್ಲ. ಚಾಮುಂಡಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.</p><p>ಇತ್ತ ಪುರಭವನದ ಕಾರ್ಯಕ್ರಮಕ್ಕೆ ಜನರು ತಂಡೋಪತಂಡವಾಗಿ ಬರುತ್ತಿದ್ದಾರೆ. ನೀಲಿ ಪಟ್ಟಿ ಧರಿಸಿಕೊಂಡು ಅವರು ಭಾಗವಹಿಸಿದ್ದಾರೆ. ಜೈ ಭೀಮ್ ಘೋಷಣೆಗಳು ಮೊಳಗುತ್ತಿವೆ. ಮಹಿಷಾಸುರನಿಗೂ ಜೈಕಾರ ಮೊಳಗುತ್ತಿವೆ. ಮೈಸೂರಿನ ಅಸ್ಮಿತೆಗಾಗಿ ಮಹಿಷ ದಸರಾ ಎಂಬ ಫಲಕವನ್ನೂ ಹಾಕಲಾಗಿದೆ.</p><p>ಮಹಿಷಾಸುರನಿಗೆ ಪುಷ್ಪಾರ್ಚನೆ ಹಾಗೂ ದಮ್ಮದೀಕ್ಷೆ ಕಾರ್ಯಕ್ರಮಕ್ಕೆ ವೇದಿಕೆ ಸಜ್ಜಾಗಿದೆ. ಬುದ್ಧ, ಬಸವ ಹಾಗೂ ಮಹಿಷಾಸುರನ ಚಿಕ್ಕ ಪ್ರತಿಮೆಗಳಿಗೆ ಪುಷ್ಪಾರ್ಚನೆ ನೆರವೇರಲಿದೆ.</p><p>ಮುಂಜಾಗ್ರತಾ ಕ್ರಮವಾಗಿ ಪುರಭವನದ ಸುತ್ತಲೂ ಪೊಲೀಸ್ ಪಹರೆ ಹಾಕಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>