‘ಪಾಶ್ಚಿಮಾತ್ಯ ದೇಶಗಳಲ್ಲಿ ಅಳವಡಿಕೆ’
‘ಭಾರತದ ನ್ಯಾಯಾಂಗ ವ್ಯವಸ್ಥೆಗೆ ತೀರಾ ಅಪರಿಚಿತ ಅನ್ನಿಸುವಂತಿದ್ದ ಕೃತಕ ಬುದ್ಧಿಮತ್ತೆಯನ್ನು ಪಾಶ್ಚಿಮಾತ್ಯ ದೇಶಗಳು ತಮ್ಮ ನಿತ್ಯದ ನ್ಯಾಯಾಂಗೀಯ ವಿಚಾರಣಾ ಪ್ರಕ್ರಿಯೆಗಳಲ್ಲಿ ಈಗಾಗಲೇ ಅಳವಡಿಸಿಕೊಂಡು ತೀರ್ಪು ನೀಡುವ ಸಾಧ್ಯತೆಗಳತ್ತ ಮುಖಮಾಡಿವೆ’ ಎಂದು ಶುಕುರೆ ಕಮಲ್ ತಿಳಿಸಿದರು. ‘ಭಾರತಕ್ಕೆ ತೀರಾ ಹೊಸದೆನ್ನುವ ಎಐ ಪಶ್ಚಿಮದ ದೇಶಗಳಿಗೆ ತೀರಾ ಹಳೆಯದೇ ಎನ್ನುವಂತಾಗಿದೆ. ನ್ಯಾಯ ನೀಡಿಕೆಯ ವ್ಯವಸ್ಥೆಗೆ ತಂತ್ರಜ್ಞಾನದ ಮೂಗು ತೂರಿಸುವಿಕೆಯನ್ನು ಅಲ್ಲಗಳೆಯುವಂತೆಯೂ ಇಲ್ಲ; ಆ ಸಾಧ್ಯತೆಯನ್ನು ನಿರಾಕರಿಸುವಂತೆಯೂ ಇಲ್ಲ’ ಎಂದು ಹೇಳಿದರು. ‘ನ್ಯಾಯ ನೀಡಿಕೆಯ ಪ್ರಕ್ರಿಯೆಯಲ್ಲಿ ಮನುಷ್ಯರು ಎಸಗಬಹುದಾದ ತಪ್ಪುಗಳನ್ನು ಮನುಷ್ಯರೇ ಸರಿಪಡಿಸಬಹುದಾದ ಸಾಧ್ಯತೆಗಳು ನಮ್ಮಲ್ಲಿ ಹೇರಳವಾಗಿವೆ. ಆದರೆ ತಂತ್ರಜ್ಞಾನ ಎಸಗುವ ತಪ್ಪುಗಳನ್ನು ಈ ಮನುಷ್ಯ ಜಗತ್ತು ನ್ಯಾಯಿಕ ವ್ಯವಸ್ಥೆ ಹೇಗೆ ಎದುರಿಸಲಿದೆ ಎಂಬುದು ನಿಜಕ್ಕೂ ಸವಾಲಿನ ವಿಷಯವಾಗಿದೆ’ ಎಂದರು.