ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಣಿಗಾರಿಕೆಗೆ ಲೈಸೆನ್ಸ್ ಪಡೆದವರು, ಡ್ಯಾಂ ಸುತ್ತಲೂ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಿರುವುದು ವಿರೋಧಿಸಿ ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ಗಣಿಗಾರಿಕೆ ಬೇಕು, ಬೇಡ ಎಂಬುದಕ್ಕೆ ವೈಜ್ಞಾನಿಕ ಕಾರಣ ಅಗತ್ಯವಿದ್ದು, ಪ್ರಾಯೋಗಿಕ ಸ್ಫೋಟ ನಡೆಸುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಇಲ್ಲಿ, ತಮಗೆ ಬೇಕಾದಂತೆ ವರದಿ ಪಡೆದು ಗಣಿಗಾರಿಕೆಗೆ ಅವಕಾಶ ದೊರಕಿಸುವ ಹುನ್ನಾರದ ಶಂಕೆಯೂ ಕಾಡುತ್ತಿದೆ’ ಎಂದರು.