<p><strong>ಮೈಸೂರು:</strong> ‘ಕೇಂದ್ರ ಸರ್ಕಾರವು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ’ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಎರಡು ಅವಧಿಯಿಂದಲೂ ಅಧಿಕಾರದಲ್ಲಿದ್ದರೂ ಜನರಿಗೆ ಯಾವ ಅನುಕೂಲವನ್ನೂ ಬಿಜೆಪಿ ಸರ್ಕಾರ ಕಲ್ಪಿಸಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲಿಲ್ಲ. ಇಂಧನ ಬೆಲೆಯೂ ಏರಿಕೆಯಾಗುತ್ತಲೇ ಹೋಯಿತು’ ಎಂದು ಟೀಕಿಸಿದರು.</p>.<p>‘ಬಿಜೆಪಿಯು ಮೋದಿ ಗ್ಯಾರಂಟಿಗಳ ಹೆಸರಿನಲ್ಲಿ ಮತ ಕೇಳುತ್ತಿದೆ. ಕೇಂದ್ರ ಸರ್ಕಾರ ಕೇವಲ ಸುಳ್ಳಿನ ಗ್ಯಾರಂಟಿ ಕೊಡುತ್ತಿದೆ’ ಎಂದು ದೂರಿದರು.</p>.<p>‘ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆ, ಅನುದಾನ ಹಾಗೂ ವಿವಿಧ ಪರಿಹಾರದಲ್ಲೂ ಅನ್ಯಾಯವನ್ನು ಮಾಡಲಾಗಿದೆ. ಪ್ರಧಾನಿ ಮೋದಿ ಭರವಸೆಗಳು ಕೇವಲ ಭರವಸೆಗಳಾಗಿಯೇ ಉಳಿದಿವೆ. ನಮ್ಮ ರಾಜ್ಯಕ್ಕೆ ಬರಬೇಕಿದ್ದ ಹಣವನ್ನು ಬೇರೆ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಜನರು, ಆ ಪಕ್ಷದ ನಾಯಕರ ಭರವಸೆಗಳನ್ನು ನಂಬಬಾರದು’ ಎಂದು ಕೋರಿದರು.</p>.<p>‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಪಂಚ ಗ್ಯಾರಂಟಿಗಳನ್ನೂ ಜಾರಿಗೆ ತಂದಿದೆ. ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಇದಕ್ಕೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.</p>.<p>‘ಮಹಿಳಾ ಮೀಸಲಾತಿ ಆದಷ್ಟು ಬೇಗ ಜಾರಿಯಾಗಬೇಕು. ಅದು ಜಾರಿಯಾಗಿದ್ದರೆ ನಮ್ಮಂತಹ ಆಕಾಂಕ್ಷಿಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಟಿಕೆಟ್ ಸಿಗುತ್ತಿತ್ತು. ಮಹಿಳೆಯರನ್ನು ಕಡೆಗಣಿಸಲಾಗುತ್ತಿತ್ತು. ಈಗಲೂ ನಾನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದರು.</p>.<p>‘ಮಹಿಳೆಯರ ಮೇಲಿನ ತಾರತಮ್ಯ ನಿಲ್ಲಬೇಕೆಂದರೆ, ಅವರಿಗೆ ಎಲ್ಲ ಕ್ಷೇತ್ರಗಳಲ್ಲೂ ಶೇ 50ರಷ್ಟು ಮೀಸಲಾತಿ ಜಾರಿಗೆ ಬರಬೇಕು’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿಯಿಂದ ನೀಡಲಾಗಿರುವ ‘ನಾರಿ ನ್ಯಾಯ’ ಐದು ಗ್ಯಾರಂಟಿ ಕಾರ್ಯಕ್ರಮಗಳು ಮಹಿಳಾ ಸ್ವಾವಲಂಬನೆಗೆ ಮತ್ತು ರಕ್ಷಣೆಗೆ ಒತ್ತು ನೀಡಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸಲಿಲ್ಲ. ಪ್ರಶ್ನೆಗಳನ್ನು ಎದುರಿಸಲಾಗದೇ ಮನ್ ಕಿ ಬಾತ್ನಲ್ಲಿ ಮಾತನಾಡಿದರು. ಚುನಾವಣಾ ಬಾಂಡ್ ಹಗರಣ ಬೆಳಕಿಗೆ ಬಂದಿದ್ದು, ಇಂಥದ್ದಕ್ಕೆ ಯಾರು ಉತ್ತರಿಸಬೇಕು’ ಎಂದು ಕೇಳಿದರು.</p>.<p>ಪಕ್ಷದ ನಾಯಕಿಯರಾದ ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಪುಷ್ಪವಲ್ಲಿ, ರಾಧಾಮಣಿ, ಸುಜಾತಾರಾವ್, ಲತಾ ಮೋಹನ್, ಸುಶೀಲಾ ಮರೀಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕೇಂದ್ರ ಸರ್ಕಾರವು ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಮಾಡುತ್ತಿದೆ’ ಎಂದು ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಆರೋಪಿಸಿದರು.</p>.<p>ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ‘ಎರಡು ಅವಧಿಯಿಂದಲೂ ಅಧಿಕಾರದಲ್ಲಿದ್ದರೂ ಜನರಿಗೆ ಯಾವ ಅನುಕೂಲವನ್ನೂ ಬಿಜೆಪಿ ಸರ್ಕಾರ ಕಲ್ಪಿಸಲಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಡೆಯಲಿಲ್ಲ. ಇಂಧನ ಬೆಲೆಯೂ ಏರಿಕೆಯಾಗುತ್ತಲೇ ಹೋಯಿತು’ ಎಂದು ಟೀಕಿಸಿದರು.</p>.<p>‘ಬಿಜೆಪಿಯು ಮೋದಿ ಗ್ಯಾರಂಟಿಗಳ ಹೆಸರಿನಲ್ಲಿ ಮತ ಕೇಳುತ್ತಿದೆ. ಕೇಂದ್ರ ಸರ್ಕಾರ ಕೇವಲ ಸುಳ್ಳಿನ ಗ್ಯಾರಂಟಿ ಕೊಡುತ್ತಿದೆ’ ಎಂದು ದೂರಿದರು.</p>.<p>‘ಕರ್ನಾಟಕಕ್ಕೆ ತೆರಿಗೆ ಪಾಲಿನ ಹಂಚಿಕೆ, ಅನುದಾನ ಹಾಗೂ ವಿವಿಧ ಪರಿಹಾರದಲ್ಲೂ ಅನ್ಯಾಯವನ್ನು ಮಾಡಲಾಗಿದೆ. ಪ್ರಧಾನಿ ಮೋದಿ ಭರವಸೆಗಳು ಕೇವಲ ಭರವಸೆಗಳಾಗಿಯೇ ಉಳಿದಿವೆ. ನಮ್ಮ ರಾಜ್ಯಕ್ಕೆ ಬರಬೇಕಿದ್ದ ಹಣವನ್ನು ಬೇರೆ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಜನರು, ಆ ಪಕ್ಷದ ನಾಯಕರ ಭರವಸೆಗಳನ್ನು ನಂಬಬಾರದು’ ಎಂದು ಕೋರಿದರು.</p>.<p>‘ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಪಂಚ ಗ್ಯಾರಂಟಿಗಳನ್ನೂ ಜಾರಿಗೆ ತಂದಿದೆ. ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದ್ದು, ಇದಕ್ಕೆ ಶಕ್ತಿ ತುಂಬಬೇಕು’ ಎಂದು ಮನವಿ ಮಾಡಿದರು.</p>.<p>‘ಮಹಿಳಾ ಮೀಸಲಾತಿ ಆದಷ್ಟು ಬೇಗ ಜಾರಿಯಾಗಬೇಕು. ಅದು ಜಾರಿಯಾಗಿದ್ದರೆ ನಮ್ಮಂತಹ ಆಕಾಂಕ್ಷಿಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಟಿಕೆಟ್ ಸಿಗುತ್ತಿತ್ತು. ಮಹಿಳೆಯರನ್ನು ಕಡೆಗಣಿಸಲಾಗುತ್ತಿತ್ತು. ಈಗಲೂ ನಾನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ’ ಎಂದರು.</p>.<p>‘ಮಹಿಳೆಯರ ಮೇಲಿನ ತಾರತಮ್ಯ ನಿಲ್ಲಬೇಕೆಂದರೆ, ಅವರಿಗೆ ಎಲ್ಲ ಕ್ಷೇತ್ರಗಳಲ್ಲೂ ಶೇ 50ರಷ್ಟು ಮೀಸಲಾತಿ ಜಾರಿಗೆ ಬರಬೇಕು’ ಎಂದು ಹೇಳಿದರು.</p>.<p>‘ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಐಸಿಸಿಯಿಂದ ನೀಡಲಾಗಿರುವ ‘ನಾರಿ ನ್ಯಾಯ’ ಐದು ಗ್ಯಾರಂಟಿ ಕಾರ್ಯಕ್ರಮಗಳು ಮಹಿಳಾ ಸ್ವಾವಲಂಬನೆಗೆ ಮತ್ತು ರಕ್ಷಣೆಗೆ ಒತ್ತು ನೀಡಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘10 ವರ್ಷಗಳ ಆಡಳಿತದಲ್ಲಿ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಪತ್ರಿಕಾಗೋಷ್ಠಿ ನಡೆಸಲಿಲ್ಲ. ಪ್ರಶ್ನೆಗಳನ್ನು ಎದುರಿಸಲಾಗದೇ ಮನ್ ಕಿ ಬಾತ್ನಲ್ಲಿ ಮಾತನಾಡಿದರು. ಚುನಾವಣಾ ಬಾಂಡ್ ಹಗರಣ ಬೆಳಕಿಗೆ ಬಂದಿದ್ದು, ಇಂಥದ್ದಕ್ಕೆ ಯಾರು ಉತ್ತರಿಸಬೇಕು’ ಎಂದು ಕೇಳಿದರು.</p>.<p>ಪಕ್ಷದ ನಾಯಕಿಯರಾದ ಪುಷ್ಪಾಲತಾ ಚಿಕ್ಕಣ್ಣ, ಮೋದಾಮಣಿ, ಪುಷ್ಪವಲ್ಲಿ, ರಾಧಾಮಣಿ, ಸುಜಾತಾರಾವ್, ಲತಾ ಮೋಹನ್, ಸುಶೀಲಾ ಮರೀಗೌಡ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>