<p><strong>ಮೈಸೂರು</strong>: ‘ಸಾಂಸ್ಕೃತಿಕ ಉತ್ಸವಗಳಿಂದ ವಿದ್ಯಾರ್ಥಿಗಳು ಸುಪ್ತ ಪ್ರತಿಭೆಯನ್ನು ಅಭಿವ್ಯಕ್ತಿಸಲು ಸಾಧ್ಯವಾಗುತ್ತದೆ. ಇಂತಹ ಉತ್ಸವಗಳಲ್ಲಿ ಭಾಗವಹಿಸುವುದು ಮುಖ್ಯ. ಬಹುಮಾನಕ್ಕಿಂತ ಚಪ್ಪಾಳೆಯೇ ದೊಡ್ಡ ಬಹುಮಾನ’ ಎಂದು ಖ್ಯಾತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಎಂಎಂಕೆ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಪ್ರಭಿಗ್ಯಾನ್’ 2024 ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಯುವಜನರು ಸಾಂಸ್ಕೃತಿಕ ಅಭಿವ್ಯಕ್ತಿಗಳಲ್ಲಿ ಗುಣಮಟ್ಟವನ್ನ ಕಾಯ್ದುಕೊಳ್ಳಬೇಕು. ಸಾಧನೆ ಮಾಡಲು ಪರಿಶ್ರಮ ಮುಖ್ಯ. ಇದಕ್ಕಾಗಿ ನಿರಂತರ ಪ್ರಯತ್ನವೂ ಇರಬೇಕು. ಪೋಷಕರು ಮಕ್ಕಳಿಗೆ ಕಷ್ಟವನ್ನು ತಿಳಿಸಿ ಅವರನ್ನು ರೂಪಿಸಿ ಸಾಮಾಜಿಕ ಬದ್ಧತೆಗೆ ಒಳಗಾಗಿಸಬೇಕು. ಆಗ ಅವರಿಗೂ ಲೋಕಜ್ಞಾನ ತಿಳಿಯುತ್ತದೆ’ ಎಂದರು.</p>.<p>‘ವಿದ್ಯಾರ್ಥಿಗಳು ಯಾವುದಾದರೊಂದು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜನಪದ ಕಲಾವಿದ ಹಾಗೂ ನಟ ಯಶವಂತ್ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸಾಯಿನಾಥ್ ಮಲ್ಲಿಗೆಮಾಡು ಮಾತನಾಡಿದರು.</p>.<p>28 ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದರು. ಹೆಚ್ಚು ಬಹುಮಾನ ಪಡೆದ ನಗರದ ಮೈಕಾ ಪದವಿ ಕಾಲೇಜು ಸಮಗ್ರ ಪ್ರಶಸ್ತಿ (ಪಾರಿತೋಷಕ) ತನ್ನದಾಗಿಸಿಕೊಂಡಿತು.</p>.<p>ಪಿಯು ಕಾಲೇಜಿನ ಪ್ರಾಂಶುಪಾಲೆ ನಯನಕುಮಾರಿ, ಐಕ್ಯೂಎಸಿ ಸಂಚಾಲಕಿ ಕೆ.ಎಸ್. ಸುಕೃತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜ್ಯೋತಿಲಕ್ಷ್ಮಿ, ಕಲಾವಿದೆ ಸೌಮ್ಯಾ ಶ್ರೀಧರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸಾಂಸ್ಕೃತಿಕ ಉತ್ಸವಗಳಿಂದ ವಿದ್ಯಾರ್ಥಿಗಳು ಸುಪ್ತ ಪ್ರತಿಭೆಯನ್ನು ಅಭಿವ್ಯಕ್ತಿಸಲು ಸಾಧ್ಯವಾಗುತ್ತದೆ. ಇಂತಹ ಉತ್ಸವಗಳಲ್ಲಿ ಭಾಗವಹಿಸುವುದು ಮುಖ್ಯ. ಬಹುಮಾನಕ್ಕಿಂತ ಚಪ್ಪಾಳೆಯೇ ದೊಡ್ಡ ಬಹುಮಾನ’ ಎಂದು ಖ್ಯಾತ ಭರತನಾಟ್ಯ ಕಲಾವಿದ ಶ್ರೀಧರ್ ಜೈನ್ ಅಭಿಪ್ರಾಯ ವ್ಯಕ್ತಪಡಿಸಿದರು.</p>.<p>ಇಲ್ಲಿನ ಎಂಎಂಕೆ ಮತ್ತು ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಪ್ರಭಿಗ್ಯಾನ್’ 2024 ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಯುವಜನರು ಸಾಂಸ್ಕೃತಿಕ ಅಭಿವ್ಯಕ್ತಿಗಳಲ್ಲಿ ಗುಣಮಟ್ಟವನ್ನ ಕಾಯ್ದುಕೊಳ್ಳಬೇಕು. ಸಾಧನೆ ಮಾಡಲು ಪರಿಶ್ರಮ ಮುಖ್ಯ. ಇದಕ್ಕಾಗಿ ನಿರಂತರ ಪ್ರಯತ್ನವೂ ಇರಬೇಕು. ಪೋಷಕರು ಮಕ್ಕಳಿಗೆ ಕಷ್ಟವನ್ನು ತಿಳಿಸಿ ಅವರನ್ನು ರೂಪಿಸಿ ಸಾಮಾಜಿಕ ಬದ್ಧತೆಗೆ ಒಳಗಾಗಿಸಬೇಕು. ಆಗ ಅವರಿಗೂ ಲೋಕಜ್ಞಾನ ತಿಳಿಯುತ್ತದೆ’ ಎಂದರು.</p>.<p>‘ವಿದ್ಯಾರ್ಥಿಗಳು ಯಾವುದಾದರೊಂದು ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜನಪದ ಕಲಾವಿದ ಹಾಗೂ ನಟ ಯಶವಂತ್ ಶೆಟ್ಟಿ, ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸಾಯಿನಾಥ್ ಮಲ್ಲಿಗೆಮಾಡು ಮಾತನಾಡಿದರು.</p>.<p>28 ಕಾಲೇಜುಗಳ 250 ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನ ಪಡೆದರು. ಹೆಚ್ಚು ಬಹುಮಾನ ಪಡೆದ ನಗರದ ಮೈಕಾ ಪದವಿ ಕಾಲೇಜು ಸಮಗ್ರ ಪ್ರಶಸ್ತಿ (ಪಾರಿತೋಷಕ) ತನ್ನದಾಗಿಸಿಕೊಂಡಿತು.</p>.<p>ಪಿಯು ಕಾಲೇಜಿನ ಪ್ರಾಂಶುಪಾಲೆ ನಯನಕುಮಾರಿ, ಐಕ್ಯೂಎಸಿ ಸಂಚಾಲಕಿ ಕೆ.ಎಸ್. ಸುಕೃತಾ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜ್ಯೋತಿಲಕ್ಷ್ಮಿ, ಕಲಾವಿದೆ ಸೌಮ್ಯಾ ಶ್ರೀಧರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>