ಮೈಸೂರು: ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಇಲ್ಲಿನ ಅರಮನೆ ಆವರಣದಲ್ಲಿ ಗಜಪಡೆಯ ಮಾವುತರು, ಕಾವಾಡಿಗಳು ಹಾಗೂ ಕುಟುಂಬದವರಿಗೆ ಶುಕ್ರವಾರ ಉಪಾಹಾರ ಕೂಟ ಆಯೋಜಿಸಿದರು.
ಹೋಳಿಗೆ- ತುಪ್ಪದ ಜೊತೆ ಉಪಾಹಾರವನ್ನು ಬಡಿಸಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಆರ್ಎಸ್ಸ್ ಮುಖಂಡ ಮಾ. ವೆಂಕಟರಾಮ್, ಮಾಜಿ ಸಂಸದ ಪ್ರತಾಪ ಸಿಂಹ, ಬಿಜೆಪಿ ಮುಖಂಡರಾದ ಮೈ.ವಿ ರವಿಶಂಕರ್, ಮಂಜುನಾಥ್, ಎಂ .ಸತೀಶ್, ಶಿವಕುಮಾರ್, ಸಿದ್ದರಾಜು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಶೋಭಾ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವೆ ಆಗಿದ್ದಾಗ ಮಾವುತರಿಗೆ ಉಪಾಹಾರದ ವ್ಯವಸ್ಥೆ ಮಾಡುತ್ತಿದ್ದರು. ಅದನ್ನು ನಂತರವೂ ದಸರಾ ಸಂದರ್ಭದಲ್ಲಿ ಆಯುಧಪೂಜೆಯ ದಿನದಂದು ಮುಂದುವರಿಸಿಕೊಂಡು ಬರುತ್ತಿದ್ದಾರೆ.