ಶುಕ್ರವಾರ, 27 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ಅಧ್ಯಕ್ಷ ಮರೀಗೌಡಗೆ ಸ್ವಪಕ್ಷೀಯರಿಂದಲೇ ಘೇರಾವ್

'ಸಿದ್ದರಾಮಯ್ಯಗೆ ಎದುರಾಗಿರುವ ಸ್ಥಿತಿಗೆ ನೀನೇ ಕಾರಣ'
Published : 27 ಸೆಪ್ಟೆಂಬರ್ 2024, 7:32 IST
Last Updated : 27 ಸೆಪ್ಟೆಂಬರ್ 2024, 7:32 IST
ಫಾಲೋ ಮಾಡಿ
Comments

ಮೈಸೂರು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುಡಾ ಅಧ್ಯಕ್ಷ ಕೆ.ಮರೀಗೌಡ ಅವರಿಗೆ ಗುರುವಾರ ಕಾಂಗ್ರೆಸ್ ಕಾರ್ಯಕರ್ತರೇ ಘೇರಾವ್ ಹಾಕಿದರು.

ಸಿದ್ದರಾಮಯ್ಯ ಅವರ ಆಪ್ತ ಮರೀಗೌಡ ಅವರಿಗೆ ಘೇರಾವ್ ಹಾಕಿ ವಾಪಸ್ ಕಳುಹಿಸಿದರು.

ಸಿದ್ದರಾಮಯ್ಯ ಅವರಿಗೆ ಈಗ ಎದುರಾಗಿರುವ ಸ್ಥಿತಿಗೆ ನೀನೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಸಮಜಾಯಿಷಿ ನೀಡಲು ಮುಂದಾದ ಮರೀಗೌಡ ಅವರಿಗೆ, ನಿನ್ನ ಭಾಷಣ ಬೇಡ, ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ, ಕಾರನ್ನು ಬಡಿಯುತ್ತಾ ವಾಪಸ್ ಕಳುಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT