<p><strong>ಮೈಸೂರು</strong>: ‘ವಿದ್ಯಾರ್ಥಿಗಳು ಅಂಕ ಗಳಿಕೆಯೊಂದಿಗೆ ಉತ್ತಮ ಕೌಶಲ ಬೆಳೆಸಿಕೊಳ್ಳಲು ಗಮನ ಹರಿಸಬೇಕು. ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳು ಅಣಿಯಾಗಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ ಸಲಹೆ ನೀಡಿದರು.</p>.<p>ಇಲ್ಲಿನ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಬುಧವಾರ ನಡೆದ ಜ್ಞಾನವಾಹಿನಿಯ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಯಾವ ರೀತಿ ಸ್ಪರ್ಧೆಗಳು ಎದುರಾಗುತ್ತವೆ ಎಂಬುದನ್ನು ವಿದ್ಯಾರ್ಥಿಗಳು ಮೊದಲು ಅರ್ಥ ಮಾಡಿಕೊಳ್ಳಬೇಕು. ನಂತರ ಅದನ್ನು ಎದುರಿಸಲು ಬೇಕಾದ ತಯಾರಿ ಮಾಡಿಕೊಳ್ಳಬೇಕು. ಶಿಸ್ತು ಬೆಳೆಸಿಕೊಂಡರೆ ಸಾಧನೆ ನಿಮ್ಮದಾಗುತ್ತದೆ. ಪರಿಶ್ರಮದಿಂದ ಹಂತ ಹಂತವಾಗಿ ಬೆಳೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಹಾರಾಜ ಕಾಲೇಜು ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಎ.ಶ್ರೀಧರ್ ಮಾತನಾಡಿ, ‘ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿಗಳು ದೃಢ ವಿಶ್ವಾಸ, ನಿರಂತರ ಪರಿಶ್ರಮದಿಂದ ವಿದ್ಯಾರ್ಜನೆ ಕೈಗೊಳ್ಳಬೇಕು. ಪ್ರಪಂಚದಲ್ಲಿನ ಉತ್ತಮ ವಿಚಾರಗಳನ್ನು ಸೆಳೆಯುವ ಧೀ ಶಕ್ತಿಯನ್ನು ಹೊಂದಬೇಕು’ ಎಂದರು.</p>.<p>‘ಸಮಯ ಎಂಬುದು ಅನರ್ಘ್ಯ. ಅದನ್ನು ವ್ಯರ್ಥ ಮಾಡಬೇಡಿ. ತರಗತಿಗೆ ತಪ್ಪದೆ ಹಾಜರಾಗಿ. ಗುರು, ಹಿರಿಯರನ್ನು ಗೌರವಿಸಿ. ಸಮಾಜಕ್ಕೆ ಇಂದು ಅರಿವುಳ್ಳ ವ್ಯಕ್ತಿಗಳ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಸಾಹಿತ್ಯ, ನಾಟಕ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳು ನಮ್ಮಲ್ಲಿ ಸಂಸ್ಕಾರ ಉಂಟುಮಾಡುತ್ತವೆ. ಶೈಕ್ಷಣಿಕ ಸಂಪರ್ಕ ಮತ್ತು ಕ್ರೀಡೆಯು ಸಾಮಾಜಿಕ ಅಭ್ಯುದಯ, ದೈಹಿಕ ಸದೃಢತೆಗೆ ಸಹಕಾರ ನೀಡುತ್ತವೆ. ಈ ಎಲ್ಲವೂ ನಮ್ಮನ್ನು ಮಾನವರನ್ನಾಗಿ ರೂಪಿಸುತ್ತವೆ’ ಎಂದರು.</p>.<p>ಪ್ರಾಂಶುಪಾಲ ಪ್ರೊ.ಎಚ್.ಸೋಮಶೇಖರಪ್ಪ, ಆಡಳಿತಾಧಿಕಾರಿ ಪ್ರೊ.ಎಂ.ಕೆ. ಮಹೇಶ್, ಜ್ಞಾನವಾಹಿನಿ ಸಮಿತಿ ಸಂಚಾಲಕ ಜಿ.ಕೃಷ್ಣಮೂರ್ತಿ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಕೆ.ಅಜಯ್ಕುಮಾರ್, ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಎಂ.ವೆಂಕಟೇಶ್ ಉಪಸ್ಥಿತರಿದ್ದರು.</p>.<p>ಸ್ಪರ್ಧೆಗಳನ್ನು ಅರಿತು ತಯಾರಿ ನಡೆಸಿ: ಸಲಹೆ ಗ್ರಾಮೀಣ ವಿದ್ಯಾರ್ಥಿಗಳು ದೃಢ ವಿಶ್ವಾಸ ಹೊಂದಲಿ ಸಾಂಸ್ಕೃತಿಕ ಚಟುವಟಿಕೆಯಿಂದ ಸಂಸ್ಕಾರ ವೃದ್ಧಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ವಿದ್ಯಾರ್ಥಿಗಳು ಅಂಕ ಗಳಿಕೆಯೊಂದಿಗೆ ಉತ್ತಮ ಕೌಶಲ ಬೆಳೆಸಿಕೊಳ್ಳಲು ಗಮನ ಹರಿಸಬೇಕು. ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳು ಅಣಿಯಾಗಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಎನ್.ನಾಗರಾಜ ಸಲಹೆ ನೀಡಿದರು.</p>.<p>ಇಲ್ಲಿನ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಬುಧವಾರ ನಡೆದ ಜ್ಞಾನವಾಹಿನಿಯ ಸಾಂಸ್ಕೃತಿಕ, ಕ್ರೀಡೆ, ಎನ್.ಸಿ.ಸಿ. ಮತ್ತು ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಯಾವ ರೀತಿ ಸ್ಪರ್ಧೆಗಳು ಎದುರಾಗುತ್ತವೆ ಎಂಬುದನ್ನು ವಿದ್ಯಾರ್ಥಿಗಳು ಮೊದಲು ಅರ್ಥ ಮಾಡಿಕೊಳ್ಳಬೇಕು. ನಂತರ ಅದನ್ನು ಎದುರಿಸಲು ಬೇಕಾದ ತಯಾರಿ ಮಾಡಿಕೊಳ್ಳಬೇಕು. ಶಿಸ್ತು ಬೆಳೆಸಿಕೊಂಡರೆ ಸಾಧನೆ ನಿಮ್ಮದಾಗುತ್ತದೆ. ಪರಿಶ್ರಮದಿಂದ ಹಂತ ಹಂತವಾಗಿ ಬೆಳೆಯಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಹಾರಾಜ ಕಾಲೇಜು ನಿವೃತ್ತ ಪ್ರಾಂಶುಪಾಲ ಪ್ರೊ.ಸಿ.ಎ.ಶ್ರೀಧರ್ ಮಾತನಾಡಿ, ‘ಗ್ರಾಮೀಣ ಪ್ರದೇಶದಿಂದ ಬಂದ ವಿದ್ಯಾರ್ಥಿಗಳು ದೃಢ ವಿಶ್ವಾಸ, ನಿರಂತರ ಪರಿಶ್ರಮದಿಂದ ವಿದ್ಯಾರ್ಜನೆ ಕೈಗೊಳ್ಳಬೇಕು. ಪ್ರಪಂಚದಲ್ಲಿನ ಉತ್ತಮ ವಿಚಾರಗಳನ್ನು ಸೆಳೆಯುವ ಧೀ ಶಕ್ತಿಯನ್ನು ಹೊಂದಬೇಕು’ ಎಂದರು.</p>.<p>‘ಸಮಯ ಎಂಬುದು ಅನರ್ಘ್ಯ. ಅದನ್ನು ವ್ಯರ್ಥ ಮಾಡಬೇಡಿ. ತರಗತಿಗೆ ತಪ್ಪದೆ ಹಾಜರಾಗಿ. ಗುರು, ಹಿರಿಯರನ್ನು ಗೌರವಿಸಿ. ಸಮಾಜಕ್ಕೆ ಇಂದು ಅರಿವುಳ್ಳ ವ್ಯಕ್ತಿಗಳ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಸಾಹಿತ್ಯ, ನಾಟಕ ಮುಂತಾದ ಸಾಂಸ್ಕೃತಿಕ ಚಟುವಟಿಕೆಗಳು ನಮ್ಮಲ್ಲಿ ಸಂಸ್ಕಾರ ಉಂಟುಮಾಡುತ್ತವೆ. ಶೈಕ್ಷಣಿಕ ಸಂಪರ್ಕ ಮತ್ತು ಕ್ರೀಡೆಯು ಸಾಮಾಜಿಕ ಅಭ್ಯುದಯ, ದೈಹಿಕ ಸದೃಢತೆಗೆ ಸಹಕಾರ ನೀಡುತ್ತವೆ. ಈ ಎಲ್ಲವೂ ನಮ್ಮನ್ನು ಮಾನವರನ್ನಾಗಿ ರೂಪಿಸುತ್ತವೆ’ ಎಂದರು.</p>.<p>ಪ್ರಾಂಶುಪಾಲ ಪ್ರೊ.ಎಚ್.ಸೋಮಶೇಖರಪ್ಪ, ಆಡಳಿತಾಧಿಕಾರಿ ಪ್ರೊ.ಎಂ.ಕೆ. ಮಹೇಶ್, ಜ್ಞಾನವಾಹಿನಿ ಸಮಿತಿ ಸಂಚಾಲಕ ಜಿ.ಕೃಷ್ಣಮೂರ್ತಿ, ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ.ಕೆ.ಅಜಯ್ಕುಮಾರ್, ಐಕ್ಯೂಎಸಿ ಸಂಯೋಜಕ ಪ್ರೊ.ಬಿ.ಎಂ.ವೆಂಕಟೇಶ್ ಉಪಸ್ಥಿತರಿದ್ದರು.</p>.<p>ಸ್ಪರ್ಧೆಗಳನ್ನು ಅರಿತು ತಯಾರಿ ನಡೆಸಿ: ಸಲಹೆ ಗ್ರಾಮೀಣ ವಿದ್ಯಾರ್ಥಿಗಳು ದೃಢ ವಿಶ್ವಾಸ ಹೊಂದಲಿ ಸಾಂಸ್ಕೃತಿಕ ಚಟುವಟಿಕೆಯಿಂದ ಸಂಸ್ಕಾರ ವೃದ್ಧಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>