<p><strong>ಮೈಸೂರು:</strong> ಚೀನಾದ ದಮನಕಾರಿ ನೀತಿ ವಿರುದ್ಧ ಟಿಬೆಟನ್ ಯುವ ಕಾಂಗ್ರೆಸ್ ಹಾಗೂ ಪ್ರಾಂತೀಯ ಟಿಬೆಟನ್ ಮಹಿಳಾ ಸಂಘಟನೆ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಟಿಬೆಟನ್ನರ 65ನೇ ರಾಷ್ಟ್ರೀಯ ಬಂಡಾಯ ದಿನದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಚೀನಾ ವಿರುದ್ಧ ಘೋಷಣೆ ಕೂಗಿದರು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ತ್ಸೆರಿಂಗ್ ಲಕ್ಯಪ್ ಜನ್ಯೀಲ್ ಮಾತನಾಡಿ, ‘1959ರ ಮಾರ್ಚ್ 10ರಂದು ಲಕ್ಷಾಂತರ ಟಿಬೆಟನ್ನರು ಚೀನಿಯರ ಆಕ್ರಮಣದ ವಿರುದ್ಧ ಲಾಸಾದಲ್ಲಿ ಬೀದಿಗಿಳಿದು ಪ್ರತಿಭಟಿದ್ದರು. ಅಂದಿನಿಂದಲೂ ಪ್ರತಿ ವರ್ಷವೂ ಬಂಡಾಯ ದಿನದ ನೆನಪಿಗಾಗಿ ಟಿಬೆಟನ್ನರು ವಿಶ್ವದಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಾರೆ’ ಎಂದರು.</p>.<p>‘ಚೀನಿಯ ಆಕ್ರಮಣ, ದಬ್ಬಾಳಿಕೆ ಆಡಳಿತದಲ್ಲಿ 12 ಲಕ್ಷ ಟಿಬೆಟನ್ನರು ಪ್ರಾಣ ತ್ಯಾಗ ಮಾಡಿದ್ದಾರೆ. ಚೀನಿಯರು ಟಿಬೆಟನ್ ಭಾಷೆ, ಸಂಸ್ಕೃತಿ, ಧರ್ಮ ಹಾಗೂ ಗುರುತನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದ್ದಾರೆ’ ಎಂದರು.</p>.<p>‘ದಲೈಲಾಮಾ ಟಿಬೆಟ್ ಸಮಸ್ಯೆಗೆ ಪರಿಹಾರ ಸೂತ್ರ ಸೂಚಿಸಿದ್ದು, ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಚೀನಾದ ಆಕ್ರಮಣದಿಂದ ಟಿಬೆಟನ್ನರನ್ನು ರಕ್ಷಿಸಬೇಕು. ಡಿಜೆ ವ್ಯಾಗೋ ಗ್ರಾಮದ ಡ್ರಿಜು ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಹೊರಟಿರುವ ನಿರ್ಧಾರವನ್ನು ವಾಪಸ್ ಪಡೆಯಬೇಕು. ಅಲ್ಲಿಂದ ಟಿಬೆಟನ್ನರ ಸ್ಥಳಾಂತರ ಮಾಡಬಾರದು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರೀಯ ಟಿಬೆಟಿಯನ್ ಆಡಳಿತದೊಂದಿಗೆ ಮಾತುಕತೆಗೆ ಮುಂದಾಗಬೇಕು. ಪಂಚೆನ್ ಲಾಮಾ ಹಾಗೂ ಇತರೆ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಬೇಕು’ ಎಂದರು.</p>.<p>ಬೈಲುಕುಪ್ಪೆ, ಕೊಳ್ಳೇಗಾಲ, ಹುಣಸೂರಿನ ಪ್ರತಿನಿಧಿಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚೀನಾದ ದಮನಕಾರಿ ನೀತಿ ವಿರುದ್ಧ ಟಿಬೆಟನ್ ಯುವ ಕಾಂಗ್ರೆಸ್ ಹಾಗೂ ಪ್ರಾಂತೀಯ ಟಿಬೆಟನ್ ಮಹಿಳಾ ಸಂಘಟನೆ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.</p>.<p>ಟಿಬೆಟನ್ನರ 65ನೇ ರಾಷ್ಟ್ರೀಯ ಬಂಡಾಯ ದಿನದ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಕಾರರು ಚೀನಾ ವಿರುದ್ಧ ಘೋಷಣೆ ಕೂಗಿದರು.</p>.<p>ಯುವ ಕಾಂಗ್ರೆಸ್ ಅಧ್ಯಕ್ಷ ತ್ಸೆರಿಂಗ್ ಲಕ್ಯಪ್ ಜನ್ಯೀಲ್ ಮಾತನಾಡಿ, ‘1959ರ ಮಾರ್ಚ್ 10ರಂದು ಲಕ್ಷಾಂತರ ಟಿಬೆಟನ್ನರು ಚೀನಿಯರ ಆಕ್ರಮಣದ ವಿರುದ್ಧ ಲಾಸಾದಲ್ಲಿ ಬೀದಿಗಿಳಿದು ಪ್ರತಿಭಟಿದ್ದರು. ಅಂದಿನಿಂದಲೂ ಪ್ರತಿ ವರ್ಷವೂ ಬಂಡಾಯ ದಿನದ ನೆನಪಿಗಾಗಿ ಟಿಬೆಟನ್ನರು ವಿಶ್ವದಾದ್ಯಂತ ಬೀದಿಗಿಳಿದು ಪ್ರತಿಭಟಿಸುತ್ತಾರೆ’ ಎಂದರು.</p>.<p>‘ಚೀನಿಯ ಆಕ್ರಮಣ, ದಬ್ಬಾಳಿಕೆ ಆಡಳಿತದಲ್ಲಿ 12 ಲಕ್ಷ ಟಿಬೆಟನ್ನರು ಪ್ರಾಣ ತ್ಯಾಗ ಮಾಡಿದ್ದಾರೆ. ಚೀನಿಯರು ಟಿಬೆಟನ್ ಭಾಷೆ, ಸಂಸ್ಕೃತಿ, ಧರ್ಮ ಹಾಗೂ ಗುರುತನ್ನು ವ್ಯವಸ್ಥಿತವಾಗಿ ನಾಶಪಡಿಸುತ್ತಿದ್ದಾರೆ’ ಎಂದರು.</p>.<p>‘ದಲೈಲಾಮಾ ಟಿಬೆಟ್ ಸಮಸ್ಯೆಗೆ ಪರಿಹಾರ ಸೂತ್ರ ಸೂಚಿಸಿದ್ದು, ವಿಶ್ವಸಂಸ್ಥೆ ಮಧ್ಯಪ್ರವೇಶಿಸಿ ಚೀನಾದ ಆಕ್ರಮಣದಿಂದ ಟಿಬೆಟನ್ನರನ್ನು ರಕ್ಷಿಸಬೇಕು. ಡಿಜೆ ವ್ಯಾಗೋ ಗ್ರಾಮದ ಡ್ರಿಜು ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲು ಹೊರಟಿರುವ ನಿರ್ಧಾರವನ್ನು ವಾಪಸ್ ಪಡೆಯಬೇಕು. ಅಲ್ಲಿಂದ ಟಿಬೆಟನ್ನರ ಸ್ಥಳಾಂತರ ಮಾಡಬಾರದು’ ಎಂದು ಒತ್ತಾಯಿಸಿದರು.</p>.<p>‘ಕೇಂದ್ರೀಯ ಟಿಬೆಟಿಯನ್ ಆಡಳಿತದೊಂದಿಗೆ ಮಾತುಕತೆಗೆ ಮುಂದಾಗಬೇಕು. ಪಂಚೆನ್ ಲಾಮಾ ಹಾಗೂ ಇತರೆ ರಾಜಕೀಯ ಕೈದಿಗಳನ್ನು ಬಿಡುಗಡೆಗೊಳಿಸಬೇಕು’ ಎಂದರು.</p>.<p>ಬೈಲುಕುಪ್ಪೆ, ಕೊಳ್ಳೇಗಾಲ, ಹುಣಸೂರಿನ ಪ್ರತಿನಿಧಿಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>