ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿ ಹುಲಿ ದಾಳಿ: ವ್ಯಕ್ತಿ ಸಾವು

Published 3 ಅಕ್ಟೋಬರ್ 2023, 7:26 IST
Last Updated 3 ಅಕ್ಟೋಬರ್ 2023, 7:26 IST
ಅಕ್ಷರ ಗಾತ್ರ

ಹನಗೋಡು: ಇಲ್ಲಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಪಕ್ಕದಲ್ಲಿ ದನ ಮೇಯಿಸುತ್ತಿದ್ದ ಉಡುವೆಪುರ ಗ್ರಾಮದ ಗಣೇಶ್ (58) ಅವರು ಸೋಮವಾರ ಹುಲಿ ದಾಳಿಗೆ ಸಿಲುಕಿ ಮೃತಪಟ್ಟರು.

ಸಂಜೆ ದನಗಳಷ್ಟೆ ಮನೆಗೆ ಬಂದಿದ್ದವು. ಆದರೆ, ಗಣೇಶ್ ಬಾರದಿರುವುದನ್ನು ಗಮನಿಸಿದ ಕುಟುಂಬದವರು ಆತಂಕಗೊಂಡು ಹುಡುಕಾಡಿದಾಗ ಶವ ಪತ್ತೆಯಾಗಿದೆ.

ಆ ಪ್ರದೇಶದ ಜನರಲ್ಲಿ ಆತಂಕ ನಿರ್ಮಾಣವಾಗಿದೆ. ಜನರು ಓಡಾಡಲು ಹೆದರುತ್ತಿದ್ದು, ಹುಲಿ ಸೆರೆಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT