ನಗರ ಹಾಗೂ ಸುತ್ತಮುತ್ತಲಿನ ಹೋಟೆಲ್ಗಳ ಕೊಠಡಿಗಳು ಹೊಸ ವರ್ಷಾಚರಣೆವರೆಗೂ ಭರ್ತಿಯಾಗಿವೆ. ಹೊರ ರಾಜ್ಯದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ
ಸಿ.ನಾರಾಯಣಗೌಡ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ
ಮಂಡ್ಯ ಜಿಲ್ಲೆಯ ಕೆಆರ್ಎಸ್ ಬೃಂದಾವನ, ರಂಗನತಿಟ್ಟು, ಶ್ರೀರಂಗಪಟ್ಟಣ ಮೊದಲಾದ ಕಡೆಗಳಲ್ಲಿ ಶನಿವಾರದಿಂದಲೇ ಪ್ರವಾಸಿಗರ ಸಂಖ್ಯೆ ದುಪ್ಪಟ್ಟಾಗಿದೆ. ಪ್ರವಾಸಿಗರ ಅನುಕೂಲಕ್ಕಾಗಿ ರಂಗನತಿಟ್ಟು ಪಕ್ಷಿಧಾಮವನ್ನು ಬೆಳಿಗ್ಗೆ 6ರಿಂದಲೇ ವೀಕ್ಷಣೆಗೆ ಮುಕ್ತವಾಗಿರಿಸಲಾಗಿದೆ. ಪಕ್ಷಿಧಾಮಕ್ಕೆ ಭಾನುವಾರ ವಿದೇಶಿ ಪ್ರವಾಸಿಗರು ಸೇರಿ 4,885 ಮಂದಿ ಭೇಟಿ ನೀಡಿದ್ದು, ಒಂದೇ ದಿನ ₹5.99ಲಕ್ಷ ಆದಾಯ ಬಂದಿದೆ. ಇದು ಇದುವರೆಗಿನ ದಾಖಲೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.