ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉರ್ದು ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. ದೇಶದ ಪ್ರಮುಖ ಉರ್ದು ಕವಿಗಳಾದ ಇಮ್ರಾನ್ ಪ್ರತಾಪ್ ಘರ್ಹಿ, ಸಂಪತ್ ಸರಳ್, ಉತ್ತರ ಪ್ರದೇಶದ ಶಾಂಭವಿ ಸಿಂಗ್, ನದೀಂ ಫಾರುಖ್ ನಿಜಾಮತ್, ಅಬುಜರ್ ನವೀದ್, ಜಮೀಲ್ ಅಸ್ಗರ್ ಭಾಗವಹಿಸುವರು. ಮೆಹಜಬೀನ್ ನಜಮ್ ಗಜಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ತನ್ವೀರ್ ಸೇಠ್ ಭಾಗವಹಿಸುವರು’ ಎಂದು ಮಾಹಿತಿ ನೀಡಿದರು.