<p><strong>ಹುಣಸೂರು:</strong> ‘ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಸಂಪರ್ಕಿಸುವ ರಸ್ತೆಯು ಹದಗೆಟ್ಟಿದ್ದು, ಅಭಿವೃದ್ಧಿ ಕಾಮಗಾರಿಯಿಲ್ಲದೆ ಗ್ರಾಮದ ಮಕ್ಕಳು ನಿತ್ಯ ಯಮಯಾತನೆ ಅನುಭವಿಸುತ್ತಿದ್ದಾರೆ’ ಎಂದು ಪಂಚಾಯಿತಿ ಸದಸ್ಯ ಸುರೇಶ್ ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಪದವಿಪೂರ್ವ ಕಾಲೇಜಿಗೂ ಸಂಪರ್ಕಿಸುವ ಈ ರಸ್ತೆಯಲ್ಲಿ ಮಳೆಗಾಲದಲ್ಲಿ ಓಡಾಡದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದು, ನರೇಗಾ ಯೋಜನೆಯಲ್ಲಿ ರಸ್ತೆ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿದರು ಕ್ರಮವಹಿಸಿಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>‘ಕಳೆದ ಸಾಲಿನಲ್ಲಿ ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರ ನೇತೃತ್ವದಲ್ಲಿ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಲಾಗಿತ್ತು. ಈ ಮುಂಗಾರಿನಲ್ಲೂ ಅದೇ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ಕ್ರಮಕೈಗೊಳ್ಳದಿದ್ದರೆ ಪಂಚಾಯಿತಿ ಎದುರು ಪ್ರತಿಭಟನೆಗೆ ಮುಂದಾಗುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<p>‘ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತಲೂ ಮಳೆ ನೀರು ನಿಲ್ಲುತ್ತಿದೆ. ರಸ್ತೆಯಲ್ಲಿಯೂ ನೀರು ನಿಂತು ಡೆಂಗಿ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಆತಂಕ ಸೃಷ್ಟಿಸುತ್ತಿದೆ’ ಎಂದು ಸ್ಥಳಿಯ ನಿವಾಸಿಗಳಾದ ರಾಧಾ, ಸರೋಜಮ್ಮ, ರಮೇಶ್ ತಿಳಿಸಿದ್ದಾರೆ.</p>.<p><strong>ಕಾಮಗಾರಿಗೆ ಯೋಜನೆ:</strong> ‘ನರೇಗಾ ಯೋಜನೆಯಲ್ಲಿ ಕಳೆದ ಸಾಲಿನಲ್ಲಿ ರಸ್ತೆ ಅಭಿವೃದ್ಧಿಗೆ ಮೆಟಲಿಂಗ್ ಕಾಮಗಾರಿ ನಡೆಸಲು ಮುಂದಾಗಿದ್ದೆವು, ಸ್ಥಳೀಯರು ಕಾಂಕ್ರೀಟ್ ಅಥವಾ ಡಾಂಬಾರು ರಸ್ತೆ ಮಾಡುವಂತೆ ಪಟ್ಟು ಹಿಡಿದ ಕಾರಣ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಈ ಸಾಲಿನಲ್ಲಿ ಸ್ಥಳೀಯರನ್ನು ಮನವೊಲಿಸಿ ಮೆಟಲಿಂಗ್ ಕಾಮಗಾರಿಗೆ ಸೇರಿಸಲಾಗಿದೆ’ ಎಂದು ಬನ್ನಿಕುಪ್ಪೆ ಪಿಡಿಒ ರಾಘವೇಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ‘ತಾಲ್ಲೂಕಿನ ಬನ್ನಿಕುಪ್ಪೆ ಗ್ರಾಮದ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಸಂಪರ್ಕಿಸುವ ರಸ್ತೆಯು ಹದಗೆಟ್ಟಿದ್ದು, ಅಭಿವೃದ್ಧಿ ಕಾಮಗಾರಿಯಿಲ್ಲದೆ ಗ್ರಾಮದ ಮಕ್ಕಳು ನಿತ್ಯ ಯಮಯಾತನೆ ಅನುಭವಿಸುತ್ತಿದ್ದಾರೆ’ ಎಂದು ಪಂಚಾಯಿತಿ ಸದಸ್ಯ ಸುರೇಶ್ ಮತ್ತು ಗ್ರಾಮಸ್ಥರು ಆರೋಪಿಸಿದ್ದಾರೆ.</p>.<p>‘ಪದವಿಪೂರ್ವ ಕಾಲೇಜಿಗೂ ಸಂಪರ್ಕಿಸುವ ಈ ರಸ್ತೆಯಲ್ಲಿ ಮಳೆಗಾಲದಲ್ಲಿ ಓಡಾಡದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದು, ನರೇಗಾ ಯೋಜನೆಯಲ್ಲಿ ರಸ್ತೆ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿದರು ಕ್ರಮವಹಿಸಿಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.</p>.<p>‘ಕಳೆದ ಸಾಲಿನಲ್ಲಿ ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಅವರ ನೇತೃತ್ವದಲ್ಲಿ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ರಸ್ತೆಯಲ್ಲಿ ಗಿಡ ನೆಟ್ಟು ಪ್ರತಿಭಟನೆ ನಡೆಸಲಾಗಿತ್ತು. ಈ ಮುಂಗಾರಿನಲ್ಲೂ ಅದೇ ಪರಿಸ್ಥಿತಿ ಎದುರಾಗಿದ್ದು, ಕೂಡಲೇ ಕ್ರಮಕೈಗೊಳ್ಳದಿದ್ದರೆ ಪಂಚಾಯಿತಿ ಎದುರು ಪ್ರತಿಭಟನೆಗೆ ಮುಂದಾಗುತ್ತೇವೆ’ ಎಂದು ಎಚ್ಚರಿಸಿದ್ದಾರೆ.</p>.<p>‘ಗ್ರಾಮದ ಅಂಗನವಾಡಿ ಕೇಂದ್ರದ ಸುತ್ತಲೂ ಮಳೆ ನೀರು ನಿಲ್ಲುತ್ತಿದೆ. ರಸ್ತೆಯಲ್ಲಿಯೂ ನೀರು ನಿಂತು ಡೆಂಗಿ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಹರಡುವಿಕೆಯ ಆತಂಕ ಸೃಷ್ಟಿಸುತ್ತಿದೆ’ ಎಂದು ಸ್ಥಳಿಯ ನಿವಾಸಿಗಳಾದ ರಾಧಾ, ಸರೋಜಮ್ಮ, ರಮೇಶ್ ತಿಳಿಸಿದ್ದಾರೆ.</p>.<p><strong>ಕಾಮಗಾರಿಗೆ ಯೋಜನೆ:</strong> ‘ನರೇಗಾ ಯೋಜನೆಯಲ್ಲಿ ಕಳೆದ ಸಾಲಿನಲ್ಲಿ ರಸ್ತೆ ಅಭಿವೃದ್ಧಿಗೆ ಮೆಟಲಿಂಗ್ ಕಾಮಗಾರಿ ನಡೆಸಲು ಮುಂದಾಗಿದ್ದೆವು, ಸ್ಥಳೀಯರು ಕಾಂಕ್ರೀಟ್ ಅಥವಾ ಡಾಂಬಾರು ರಸ್ತೆ ಮಾಡುವಂತೆ ಪಟ್ಟು ಹಿಡಿದ ಕಾರಣ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಈ ಸಾಲಿನಲ್ಲಿ ಸ್ಥಳೀಯರನ್ನು ಮನವೊಲಿಸಿ ಮೆಟಲಿಂಗ್ ಕಾಮಗಾರಿಗೆ ಸೇರಿಸಲಾಗಿದೆ’ ಎಂದು ಬನ್ನಿಕುಪ್ಪೆ ಪಿಡಿಒ ರಾಘವೇಂದ್ರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>