<p><strong>ಮೈಸೂರು:</strong> ‘ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರು ಸಾತ್ವಿಕ ಆಲೋಚನೆಯುಳ್ಳ ಸಂತತನದ ಚಿಂತಕ’ ಎಂದು ವಿಶ್ರಾಂತ ಪ್ರಾಧ್ಯಾಪಕ ಎಸ್. ಶಿವರಾಜಪ್ಪ ಬಣ್ಣಿಸಿದರು.</p>.<p>ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನವು 60 ವರ್ಷ ಪೂರೈಸಿದ ಬನ್ನೂರು ರಾಜು ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ರಾಜು ಅವರು ಬರವಣಿಗೆ ಮೂಲಕ ಮಾಡಿದ್ದಾರೆ’ ಎಂದರು.</p>.<p>ಸಾಹಿತಿ ಬನ್ನೂರು ಕೆ.ರಾಜು, ಪತ್ನಿ ಮಹಾಲಕ್ಷ್ಮಿ ಅವರನ್ನು ಅಭಿನಂದಿಸಲಾಯಿತು.</p>.<p>ಹೊಸಮಠದ ಚಿದಾನಂದ ಸ್ವಾಮೀಜಿ, ಸಂಸ್ಕೃತ ವಿದ್ವಾಂಸರಾದ ಕೆ.ಲೀಲಾ ಪ್ರಕಾಶ್, ಸಮಾಜ ಸೇವಕ ರಘುರಾಂ ವಾಜಪೇಯಿ, ಪ್ರತಿಷ್ಠಾನದ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ, ಕಲಾವಿದೆ ಸುಮಾ ರಾಜ್ಕುಮಾರ್, ನಟ ಸುಪ್ರೀತ್, ಮೂಗೂರು ನಂಜುಂಡ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಸಾಹಿತಿ, ಪತ್ರಕರ್ತ ಬನ್ನೂರು ಕೆ.ರಾಜು ಅವರು ಸಾತ್ವಿಕ ಆಲೋಚನೆಯುಳ್ಳ ಸಂತತನದ ಚಿಂತಕ’ ಎಂದು ವಿಶ್ರಾಂತ ಪ್ರಾಧ್ಯಾಪಕ ಎಸ್. ಶಿವರಾಜಪ್ಪ ಬಣ್ಣಿಸಿದರು.</p>.<p>ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬಸವೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನವು 60 ವರ್ಷ ಪೂರೈಸಿದ ಬನ್ನೂರು ರಾಜು ಅವರಿಗೆ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ರಾಜು ಅವರು ಬರವಣಿಗೆ ಮೂಲಕ ಮಾಡಿದ್ದಾರೆ’ ಎಂದರು.</p>.<p>ಸಾಹಿತಿ ಬನ್ನೂರು ಕೆ.ರಾಜು, ಪತ್ನಿ ಮಹಾಲಕ್ಷ್ಮಿ ಅವರನ್ನು ಅಭಿನಂದಿಸಲಾಯಿತು.</p>.<p>ಹೊಸಮಠದ ಚಿದಾನಂದ ಸ್ವಾಮೀಜಿ, ಸಂಸ್ಕೃತ ವಿದ್ವಾಂಸರಾದ ಕೆ.ಲೀಲಾ ಪ್ರಕಾಶ್, ಸಮಾಜ ಸೇವಕ ರಘುರಾಂ ವಾಜಪೇಯಿ, ಪ್ರತಿಷ್ಠಾನದ ಅಧ್ಯಕ್ಷ ಬಸವರಾಜೇಂದ್ರ ಸ್ವಾಮಿ, ಕಲಾವಿದೆ ಸುಮಾ ರಾಜ್ಕುಮಾರ್, ನಟ ಸುಪ್ರೀತ್, ಮೂಗೂರು ನಂಜುಂಡ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>