ಈ ಬಗ್ಗೆ ಫೇಸ್ಬುಕ್ ಖಾತೆಯಲ್ಲಿ ಭಾನುವಾರ ಪೋಸ್ಟ್ ಹಾಕಿರುವ ಅವರು, ‘ನಾನು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಲು ಒಪ್ಪಿದ್ದೆ. ಈ ಹಿಂದೆ ನಾನು ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದೆ. ಆದರೆ, ಇತ್ತೀಚಿಗಿನ ಕೆಲವು ಸಂವಾದಗಳನ್ನು ಗಮನಿಸಿದಾಗ, ಬೇರೆಯವರಿಗೆ ಅವಕಾಶಗಳನ್ನು ಕೊಡುವುದು ಕೂಡ ಅಗತ್ಯವೆಂದು ಅನಿಸಿದೆ. ಆದ್ದರಿಂದ ನಾನು 2024ರ ದಸರಾ ಕವಿಗೋಷ್ಠಿಯಲ್ಲಿ ಭಾಗವಹಿಸದೇ ಇರಲು ನಿರ್ಧರಿಸಿದ್ದೇನೆ. ನಿಮಗೆ ಉಂಟಾಗಿರುವ ಅನಾನುಕೂಲಕ್ಕೆ ಕ್ಷಮೆ ಇರಲಿ’ ಎಂದು ಬರೆದಿದ್ದಾರೆ.
ಕವಿಗೋಷ್ಠಿಯಲ್ಲಿ ಈ ಹಿಂದೆ ಪಾಲ್ಗೊಂಡಿದ್ದವರಿಗೇ ಮತ್ತೆ ಅವಕಾಶ ಕೊಟ್ಟಿರುವುದು, ದಕ್ಷಿಣ ಕರ್ನಾಟಕದವರಿಗೇ ಹೆಚ್ಚಿನ ಆದ್ಯತೆ ನೀಡಿರುವ ಉಪಸಮಿತಿಯ ನಡೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಕಾರಣದಿಂದ ಅವರು ಭಾಗವಹಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದರೊಂದಿಗೆ, ಕವಿಗೋಷ್ಠಿಯಿಂದ ಹಿಂದೆ ಸರಿದವರಲ್ಲಿ ಬಾನು 2ನೇಯವರಾಗಿದ್ದಾರೆ. ನಾನು ಪಾಲ್ಗೊಳ್ಳದಿರಲು ನಿರ್ಧರಿಸಿದ್ದೇನೆ ಎಂದು ಕವಿ ಆರಿಫ್ ರಾಜಾ ಶನಿವಾರ ತಿಳಿಸಿದ್ದರು. ಅ.9ರಂದು ಸಮೃದ್ಧ ಕವಿಗೋಷ್ಠಿ ನಡೆಯಲಿದೆ.