<p><strong>ರಾಯಚೂರು:</strong> ‘ರೈತ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಯಶ ಸಾಧಿಸಲು ಸಾಧ್ಯವಿದೆ. ಕೃಷಿಯ ಜತೆಗೆ ಜಾನುವಾರು ಪಾಲನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಕೃಷಿ ಸಖಿಯರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕೃಷಿಕರು ಉಪ ಕಸುಬುಗಳಾದ ಕುರಿ ಸಾಕಾಣಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಪೋಷಣೆ ಕೈ ತೋಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಕೃಷಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕೃಷಿ ಸಖಿಯರು ಆರು ದಿನಗಳ ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ಗ್ರಾಮ ಮಟ್ಟದಲ್ಲಿ ರೈತರಿಗೆ ತಿಳಿಸಬೇಕು. ಹೊಸ ತಂತ್ರಗಳ ಮಾಹಿತಿ ಪಡೆದು ರೈತರಿಗೆ ವಿವರಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಅಧಿಕಾರಿ ಶ್ರೀನಾಥ್ ಮಾತನಾಡಿ, ‘ಗ್ರಾಮೀಣ ಭಾಗದ ರೈತರಿಗೆ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ಪಡೆದು ರೈತರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ರೈತ ಸಂಪರ್ಕ ಕೇಂದ್ರ, ಬೀಜ ಹಾಗೂ ಕೃಷಿ ಪರಿಕರ ಪಡೆದುಕೊಳ್ಳುವ ಮಾಹಿತಿಯನ್ನು ರೈತರಿಗೆ ನೀಡಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಮಾತನಾಡಿ ಸಂಜೀವಿನಿ ಯೋಜನೆ ಅಡಿ ಗ್ರಾಮೀಣ ರೈತ ಮಹಿಳೆಯರ ಪಾಲ್ಗೊಳ್ಳುವಿಕೆ. ಮಹಿಳಾ ಸಬಲೀಕರಣ ಮತ್ತು ಮಹಿಳಾ ಕಿಸಾನ್ ವಿಷಯಗಳ ಕುರಿತು ಕೃಷಿ ಸಖಿಯರಿಗೆ ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎಸ್.ಬಿ.ಗೌಡಪ್ಪ ಮಾತನಾಡಿ, ‘ಆಧುನಿಕ ಆಹಾರ ಪದ್ಧತಿಯಿಂದ ಇಂದಿನ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅಪೌಷ್ಟಿಕ ಹಾಗೂ ಕಲುಷಿತ ಆಹಾರವೇ ಇದಕ್ಕೆ ಮೂಲ ಕಾರಣವಾಗಿದೆ’ ಎಂದು ತಿಳಿಸಿದರು.</p>.<p>‘ಗುಣಮಟ್ಟ ಅಹಾರೋತ್ಪಾದನೆಯಲ್ಲಿ ಮಣ್ಣಿನ ಅರೋಗ್ಯ ಅತಿ ಮುಖ್ಯ. ಆದ್ದರಿಂದ ಮಣ್ಣಿನ ಅರೋಗ್ಯ ಸುಧಾರಣೆಗೆ ಜೈವಿಕ ಗೊಬ್ಬರ ಮುಖ್ಯವಾಗಿದೆ. ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆಗಳ ಕುರಿತು ರೈತರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕಡಿಮೆ ಖರ್ಚಿನಲ್ಲಿ ಉತ್ತಮ ಆದಾಯ ಪಡೆಯಬಹುದಾದ ಬೆಳೆಗಳು. ಬೆಳೆಗಳ ಮೌಲ್ಯವರ್ಧನೆಗಳ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಂಡು ರೈತರಿಗೆ ಮನವರಿಕೆ ಮಾಡುವ ಕೆಲಸವನ್ನು ಕೃಷಿ ಸಖಿಯರು ಮಾಡಬೇಕು’ ಎಂದು ಹೇಳಿದರು.</p>.<p>ವಿಸ್ತರಣಾ ನಿರ್ದೇಶನಾಲಯದ ತಾಂತ್ರಿಕ ಸಹಾಯಕ ಹನುಮಂತ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಜ್ಞಾನಿಗಳಾದ ಹೇಮಲತಾ ಕೆ.ಜೆ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹನುಮಂತಪ್ಪ ಶ್ರೀಹರಿ ಸ್ವಾಗತಿಸಿದರು. ಶ್ರೀವಾಣಿ ಜಿ.ಎನ್. ನಿರೂಪಿಸಿದರು. ಶ್ರೀಕಾಂತ ವಂದಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರ, ರಾಯಚೂರು ಜಿಲ್ಲಾ ಪಂಚಾಯಿತಿ ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ರೈತ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡರೆ ಯಶ ಸಾಧಿಸಲು ಸಾಧ್ಯವಿದೆ. ಕೃಷಿಯ ಜತೆಗೆ ಜಾನುವಾರು ಪಾಲನೆ ಮಾಡಿ ಆದಾಯ ಹೆಚ್ಚಿಸಿಕೊಳ್ಳಬಹುದಾಗಿದೆ’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ.ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಕೃಷಿ ಸಖಿಯರ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ಕೃಷಿಕರು ಉಪ ಕಸುಬುಗಳಾದ ಕುರಿ ಸಾಕಾಣಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಪೋಷಣೆ ಕೈ ತೋಟ ಮಾಡಿ ಆದಾಯವನ್ನು ಹೆಚ್ಚಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ಕೃಷಿಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಕೃಷಿ ಸಖಿಯರು ಆರು ದಿನಗಳ ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ಗ್ರಾಮ ಮಟ್ಟದಲ್ಲಿ ರೈತರಿಗೆ ತಿಳಿಸಬೇಕು. ಹೊಸ ತಂತ್ರಗಳ ಮಾಹಿತಿ ಪಡೆದು ರೈತರಿಗೆ ವಿವರಿಸಬೇಕು’ ಎಂದು ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಅಧಿಕಾರಿ ಶ್ರೀನಾಥ್ ಮಾತನಾಡಿ, ‘ಗ್ರಾಮೀಣ ಭಾಗದ ರೈತರಿಗೆ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಮಾಹಿತಿ ಪಡೆದು ರೈತರಿಗೆ ತಿಳಿಸುವ ಕೆಲಸವನ್ನು ಮಾಡಬೇಕು. ರೈತ ಸಂಪರ್ಕ ಕೇಂದ್ರ, ಬೀಜ ಹಾಗೂ ಕೃಷಿ ಪರಿಕರ ಪಡೆದುಕೊಳ್ಳುವ ಮಾಹಿತಿಯನ್ನು ರೈತರಿಗೆ ನೀಡಬೇಕು’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಜಿಲ್ಲಾ ವ್ಯವಸ್ಥಾಪಕ ಶ್ರೀಕಾಂತ ಮಾತನಾಡಿ ಸಂಜೀವಿನಿ ಯೋಜನೆ ಅಡಿ ಗ್ರಾಮೀಣ ರೈತ ಮಹಿಳೆಯರ ಪಾಲ್ಗೊಳ್ಳುವಿಕೆ. ಮಹಿಳಾ ಸಬಲೀಕರಣ ಮತ್ತು ಮಹಿಳಾ ಕಿಸಾನ್ ವಿಷಯಗಳ ಕುರಿತು ಕೃಷಿ ಸಖಿಯರಿಗೆ ಮಾಹಿತಿ ನೀಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಎಸ್.ಬಿ.ಗೌಡಪ್ಪ ಮಾತನಾಡಿ, ‘ಆಧುನಿಕ ಆಹಾರ ಪದ್ಧತಿಯಿಂದ ಇಂದಿನ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅಪೌಷ್ಟಿಕ ಹಾಗೂ ಕಲುಷಿತ ಆಹಾರವೇ ಇದಕ್ಕೆ ಮೂಲ ಕಾರಣವಾಗಿದೆ’ ಎಂದು ತಿಳಿಸಿದರು.</p>.<p>‘ಗುಣಮಟ್ಟ ಅಹಾರೋತ್ಪಾದನೆಯಲ್ಲಿ ಮಣ್ಣಿನ ಅರೋಗ್ಯ ಅತಿ ಮುಖ್ಯ. ಆದ್ದರಿಂದ ಮಣ್ಣಿನ ಅರೋಗ್ಯ ಸುಧಾರಣೆಗೆ ಜೈವಿಕ ಗೊಬ್ಬರ ಮುಖ್ಯವಾಗಿದೆ. ಕೃಷಿ ವಿಜ್ಞಾನಿಗಳು ಹಾಗೂ ಕೃಷಿ ಅಧಿಕಾರಿಗಳೊಂದಿಗೆ ಚರ್ಚಿಸಿ ಯೋಜನೆಗಳ ಕುರಿತು ರೈತರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಸಲಹೆ ನೀಡಿದರು.</p>.<p>‘ಕಡಿಮೆ ಖರ್ಚಿನಲ್ಲಿ ಉತ್ತಮ ಆದಾಯ ಪಡೆಯಬಹುದಾದ ಬೆಳೆಗಳು. ಬೆಳೆಗಳ ಮೌಲ್ಯವರ್ಧನೆಗಳ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಂಡು ರೈತರಿಗೆ ಮನವರಿಕೆ ಮಾಡುವ ಕೆಲಸವನ್ನು ಕೃಷಿ ಸಖಿಯರು ಮಾಡಬೇಕು’ ಎಂದು ಹೇಳಿದರು.</p>.<p>ವಿಸ್ತರಣಾ ನಿರ್ದೇಶನಾಲಯದ ತಾಂತ್ರಿಕ ಸಹಾಯಕ ಹನುಮಂತ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p>ವಿಜ್ಞಾನಿಗಳಾದ ಹೇಮಲತಾ ಕೆ.ಜೆ. ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.</p>.<p>ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಹನುಮಂತಪ್ಪ ಶ್ರೀಹರಿ ಸ್ವಾಗತಿಸಿದರು. ಶ್ರೀವಾಣಿ ಜಿ.ಎನ್. ನಿರೂಪಿಸಿದರು. ಶ್ರೀಕಾಂತ ವಂದಿಸಿದರು.</p>.<p>ಕೃಷಿ ವಿಜ್ಞಾನ ಕೇಂದ್ರ, ರಾಯಚೂರು ಜಿಲ್ಲಾ ಪಂಚಾಯಿತಿ ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>