<p><strong>ಕವಿತಾಳ:</strong> ’ಹಳ್ಳಿಗಳಿಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಕ್ಷೇತ್ರದ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೂ ಅನುದಾನ ನೀಡಲಾಗಿದೆʼ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪರಸಾಪುರ ಗ್ರಾಮದಲ್ಲಿ ಅಂದಾಜು ₹ 5 ಲಕ್ಷ ವೆಚ್ಚದಲ್ಲಿ ಮಾರುತೇಶ್ವರ ದೇವಸ್ಥಾನದ ಅಭಿವೃದ್ದಿ, ಯಕ್ಲಾಸ್ಪುರದಲ್ಲಿ ₹ 5 ಲಕ್ಷದಲ್ಲಿ ಗಾಳಿಮಾರೆಮ್ಮ ದೇವಿ ದೇವಸ್ಥಾನ ನಿರ್ಮಾಣ, ವಟಗಲ್ ಗ್ರಾಮದಲ್ಲಿ ₹ 5 ಲಕ್ಷ ದಲ್ಲಿ ಚಂದಪ್ಪ ತಾತನ ದೇವಸ್ಥಾನದ ಅಭಿವೃದ್ದಿ ಹಾಗೂ ₹10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.</p>.<p>’ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಧಿಕಾರಿಗಳು ಕಾಳಜಿ ವಹಿಸಬೇಕು ಮತ್ತು ಗ್ರಾಮೀಣ ಭಾಗದ ಅಭಿವೃದ್ದಿ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕುʼ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸನಗೌಡ ಬಾಲರಡ್ಡಿ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ, ಬಲವಂತರಾಯ ವಟಗಲ್, ಕರಿಯಪ್ಪ ಯಕ್ಲಾಸ್ಪುರ, ಸೋಮನಗೌಡ, ಅಮರೇಶ ವಟಗಲ್, ಅಮರೇಗೌಡ ಅಮೀನಗಡ, ಮಾಳಪ್ಪ, ಚಂದ್ರಶೇಖರ, ಶಿವಪ್ಪ, ಹನುಮಂತ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕವಿತಾಳ:</strong> ’ಹಳ್ಳಿಗಳಿಗೆ ಮೂಲ ಸೌಕರ್ಯ ಒದಗಿಸುವುದರ ಜತೆಗೆ ಕ್ಷೇತ್ರದ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ದೇವಸ್ಥಾನಗಳ ಅಭಿವೃದ್ಧಿಗೂ ಅನುದಾನ ನೀಡಲಾಗಿದೆʼ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.</p>.<p>ಪರಸಾಪುರ ಗ್ರಾಮದಲ್ಲಿ ಅಂದಾಜು ₹ 5 ಲಕ್ಷ ವೆಚ್ಚದಲ್ಲಿ ಮಾರುತೇಶ್ವರ ದೇವಸ್ಥಾನದ ಅಭಿವೃದ್ದಿ, ಯಕ್ಲಾಸ್ಪುರದಲ್ಲಿ ₹ 5 ಲಕ್ಷದಲ್ಲಿ ಗಾಳಿಮಾರೆಮ್ಮ ದೇವಿ ದೇವಸ್ಥಾನ ನಿರ್ಮಾಣ, ವಟಗಲ್ ಗ್ರಾಮದಲ್ಲಿ ₹ 5 ಲಕ್ಷ ದಲ್ಲಿ ಚಂದಪ್ಪ ತಾತನ ದೇವಸ್ಥಾನದ ಅಭಿವೃದ್ದಿ ಹಾಗೂ ₹10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಮಾತನಾಡಿದರು.</p>.<p>’ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ಅಧಿಕಾರಿಗಳು ಕಾಳಜಿ ವಹಿಸಬೇಕು ಮತ್ತು ಗ್ರಾಮೀಣ ಭಾಗದ ಅಭಿವೃದ್ದಿ ಕೆಲಸಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕುʼ ಎಂದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸನಗೌಡ ಬಾಲರಡ್ಡಿ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ, ಬಲವಂತರಾಯ ವಟಗಲ್, ಕರಿಯಪ್ಪ ಯಕ್ಲಾಸ್ಪುರ, ಸೋಮನಗೌಡ, ಅಮರೇಶ ವಟಗಲ್, ಅಮರೇಗೌಡ ಅಮೀನಗಡ, ಮಾಳಪ್ಪ, ಚಂದ್ರಶೇಖರ, ಶಿವಪ್ಪ, ಹನುಮಂತ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>