<p><strong>ಲಿಂಗಸುಗೂರು:</strong> ‘ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿಗೆ 50ರ ಸಂಭ್ರಮೋತ್ಸವದ ನಿಮಿತ್ತ ಆಗಸ್ಟ್ 7ರಂದು ಬೆಂಗಳೂರಿನ ವಸಂತನಗರದ ಡಾ.ಅಂಬೇಡ್ಕರ್ ಭವನದಲ್ಲಿ ಸಮಾರೋಪ ಸಮಾರಂಭ ಆಯೋಜಿಸಿದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಚಳವಳಿ ಆರಂಭಗೊಂಡ ನಂತರ ರಾಜ್ಯ ಮಟ್ಟದಿಂದ ಗ್ರಾಮೀಣ ಮಟ್ಟದವರೆಗೆ ವೈವಿಧ್ಯಮಯ ಹೋರಾಟಗಳ ಫಲವಾಗಿ ಪರಿಶಿಷ್ಟರ ಬದುಕು ಹಸನಾಗಿದೆ. ಇನ್ನೂ ಹೆಚ್ಚಿನ ಸ್ವಾವಲಂಬಿ ಬದುಕಿಗೆ ಹಕ್ಕೋತ್ತಾಯ ಮಾಡುವ ಅನಿವಾರ್ಯತೆ ಎದುರಾಗಿದೆ’ ಎಂದರು.</p>.<p>‘ಪ್ರೊ.ಬಿ.ಕೃಷ್ಣಪ್ಪ ಜನ್ಮದಿನವನ್ನು ಸರ್ಕಾರವೇ ಆಚರಣೆ ಮಾಡಲು ಆದೇಶ ಹೊರಡಿಸಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಅನುಷ್ಠಾನಕ್ಕೆ ತರಬೇಕು. ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿರಿಸಿದ ₹ 39 ಸಾವಿರ ಕೋಟಿ ಅನುದಾನ ವಿವಿಧ ನಿಗಮಗಳಿಗೆ ಹಂಚಿಕೆ ಮಾಡಬೇಕು. ಕಾಂತರಾಜ ವರದಿ ಜಾರಿಗೆ ತರಬೇಕು. 2023-24 ಮತ್ತು 2024-25ನೇ ಸಾಲಿನ ಎಸ್ಸಿಎಸ್ಪಿ, ಟಿಎಸ್ಪಿಗೆ ಮೀಸಲಿರಿಸಿದ ಹಣದಲ್ಲಿ ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ₹ 25 ಸಾವಿರ ಕೋಟಿ ಅನುದಾನ ಹಿಂತಿರುಗಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗೆ ಒತ್ತಾಯಿಸಲಾಗುವುದು ಎಂದರು.</p>.<p>ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರೊ.ಬರಗೂರು ರಾಮಚಂದ್ರಪ್ಪ ಸಮಾರೋಪ ಸಮಾರಂಭ ಉದ್ಘಾಟಿಸುವರು.ನಾಡಿನ ಸಚಿವರು, ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ಮುಖಂಡರಾದ ರಮೇಶ ಗೋಸ್ಲೆ, ಸುರೇಶ ಬಳಗಾನೂರು, ಮಹಾದೇವಪ್ಪ ಪರಾಂಪುರ, ದುರುಮಂದೆಪ್ಪ ಕಟ್ಟಿಮನಿ, ಅಮರನಾಥ ಉದ್ಬಾಳ, ಶಿವಪ್ಪ ಪಲಕನಮರಡಿ, ಕಾಶಿಮಪ್ಪ ಡಿ ಮುರಾರಿ, ರಂಜಿತ್ ಕೊಡ್ಲಿ, ಭೀಮಪ್ಪ, ವೀರಘೋಷ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಿಂಗಸುಗೂರು:</strong> ‘ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕದ ದಲಿತ ಚಳವಳಿಗೆ 50ರ ಸಂಭ್ರಮೋತ್ಸವದ ನಿಮಿತ್ತ ಆಗಸ್ಟ್ 7ರಂದು ಬೆಂಗಳೂರಿನ ವಸಂತನಗರದ ಡಾ.ಅಂಬೇಡ್ಕರ್ ಭವನದಲ್ಲಿ ಸಮಾರೋಪ ಸಮಾರಂಭ ಆಯೋಜಿಸಿದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ತಿಳಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಲಿತ ಚಳವಳಿ ಆರಂಭಗೊಂಡ ನಂತರ ರಾಜ್ಯ ಮಟ್ಟದಿಂದ ಗ್ರಾಮೀಣ ಮಟ್ಟದವರೆಗೆ ವೈವಿಧ್ಯಮಯ ಹೋರಾಟಗಳ ಫಲವಾಗಿ ಪರಿಶಿಷ್ಟರ ಬದುಕು ಹಸನಾಗಿದೆ. ಇನ್ನೂ ಹೆಚ್ಚಿನ ಸ್ವಾವಲಂಬಿ ಬದುಕಿಗೆ ಹಕ್ಕೋತ್ತಾಯ ಮಾಡುವ ಅನಿವಾರ್ಯತೆ ಎದುರಾಗಿದೆ’ ಎಂದರು.</p>.<p>‘ಪ್ರೊ.ಬಿ.ಕೃಷ್ಣಪ್ಪ ಜನ್ಮದಿನವನ್ನು ಸರ್ಕಾರವೇ ಆಚರಣೆ ಮಾಡಲು ಆದೇಶ ಹೊರಡಿಸಬೇಕು. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಅನುಷ್ಠಾನಕ್ಕೆ ತರಬೇಕು. ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿರಿಸಿದ ₹ 39 ಸಾವಿರ ಕೋಟಿ ಅನುದಾನ ವಿವಿಧ ನಿಗಮಗಳಿಗೆ ಹಂಚಿಕೆ ಮಾಡಬೇಕು. ಕಾಂತರಾಜ ವರದಿ ಜಾರಿಗೆ ತರಬೇಕು. 2023-24 ಮತ್ತು 2024-25ನೇ ಸಾಲಿನ ಎಸ್ಸಿಎಸ್ಪಿ, ಟಿಎಸ್ಪಿಗೆ ಮೀಸಲಿರಿಸಿದ ಹಣದಲ್ಲಿ ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿರುವ ₹ 25 ಸಾವಿರ ಕೋಟಿ ಅನುದಾನ ಹಿಂತಿರುಗಿಸಬೇಕು. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ನೌಕರರನ್ನು ಕಾಯಂಗೊಳಿಸುವುದು ಸೇರಿದಂತೆ ಇತರೆ ಬೇಡಿಕೆಗೆ ಒತ್ತಾಯಿಸಲಾಗುವುದು ಎಂದರು.</p>.<p>ರಾಯಚೂರು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಪ್ರೊ.ಬರಗೂರು ರಾಮಚಂದ್ರಪ್ಪ ಸಮಾರೋಪ ಸಮಾರಂಭ ಉದ್ಘಾಟಿಸುವರು.ನಾಡಿನ ಸಚಿವರು, ಪ್ರಗತಿಪರ ಚಿಂತಕರು ಭಾಗವಹಿಸಲಿದ್ದಾರೆ’ ಎಂದು ಹೇಳಿದರು.</p>.<p>ಮುಖಂಡರಾದ ರಮೇಶ ಗೋಸ್ಲೆ, ಸುರೇಶ ಬಳಗಾನೂರು, ಮಹಾದೇವಪ್ಪ ಪರಾಂಪುರ, ದುರುಮಂದೆಪ್ಪ ಕಟ್ಟಿಮನಿ, ಅಮರನಾಥ ಉದ್ಬಾಳ, ಶಿವಪ್ಪ ಪಲಕನಮರಡಿ, ಕಾಶಿಮಪ್ಪ ಡಿ ಮುರಾರಿ, ರಂಜಿತ್ ಕೊಡ್ಲಿ, ಭೀಮಪ್ಪ, ವೀರಘೋಷ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>